ಮೈಸೂರು ನಗರ

ಸರ್ಕಾರಿ ಉದ್ಯೋಗಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ : ದೂರು ದಾಖಲು

ಮೈಸೂರು : ಸರ್ಕಾರಿ ಉದ್ಯೋಗಿ ಮಹಿಳೆಯೊಬ್ಬರನ್ನು ಪರಿಚಯ ಮಾಡಿಕೊಂಡ ವಂಚಕನೋರ್ವ, ಆಕೆಯ ಬಳಿ ಇದ್ದ 500 ಗ್ರಾಂ ಚಿನ್ನದ ಆಭರಣಗಳು ಹಾಗೂ 10.50 ಲಕ್ಷ ರೂ. ಹಣವನ್ನು ಲಪಟಾಯಿಸಿರುವ ಘಟನೆ ನಡೆದಿದೆ.

ಲೋಕೋಪಯೋಗಿ ಇಲಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕಿಯಾಗಿ ಕೆಲಸ ನಿರ್ವಹಿಸುತ್ತಿರುವ ಹಾಗೂ ವಿಜಯನಗರದಲ್ಲಿ ಒಂಟಿಯಾಗಿ ವಾಸಿಸುತ್ತಿರುವ ಮಹಿಳೆಗೆ ಫೇಸ್‌ಬುಕ್ ಮೂಲಕ ತಮಿಳುನಾಡಿನ ತಿರುವಂತಪುರಂ ಮೂಲದ ವೈದ್ಯ ಡಾ.ಎ.ಎಂ.ಶಿವಕುಮಾರ್ ಪರಿಚಯವಾಗಿದ್ದಾನೆ.

ನಂತರ ಆಕೆಗೆ ಆತ್ಮೀಯನಂತೆ ನಟಿಸಿದ ವಂಚಕ ಮಹಿಳೆಯ ಮನೆಗೆ ಆಗಾಗ್ಗೆ ಬರುತ್ತಿದ್ದ. ನಂತರ ಆಕೆಯೊಂದಿಗೆ ಮಾತನಾಡಿದ ಆತ, ಒಂಟಿಯಾಗಿರುವ ನೀವು ಚಿನ್ನಾಭರಣವನ್ನು ಜೊತೆಯಲ್ಲಿ ಇಟ್ಟುಕೊಳ್ಳಬೇಡಿ. ಬ್ಯಾಂಕ್‌ನ ಲಾಕರ್‌ನಲ್ಲಿ ಇಡಿ ಎಂದು ಹೇಳಿ ಆತನೇ ಬ್ಯಾಂಕ್‌ಗೆ ಕರೆದೊಯ್ದು ಲಾಕರ್‌ನಲ್ಲಿ ಚಿನ್ನಾಭರಣಗಳನ್ನು ಇರಿಸುವಂತೆ ನಾಟಕವಾಡಿ ನಕಲಿ ಕೀಲಿಯನ್ನು ನೀಡಿದ್ದಾನೆ.

ನಂತರ ನಿಮ್ಮ ಬಳಿ ಇರುವ ಹಣವನ್ನು ವ್ಯಾಪಾರದಲ್ಲಿ ಹೂಡಿಕೆ ಮಾಡಿದಲ್ಲಿ ಹೆಚ್ಚಿನ ಲಾಭಗಳಿಸಬಹುದು ಎಂದು ಆಸೆ ಹುಟ್ಟಿಸಿದ ಆತ, ಅವರ ಬಳಿ ಇದ್ದ 10.50 ಲಕ್ಷ ರೂ. ಹಣವನ್ನು ಪಡೆದಿದ್ದಾನೆ. ನಂತರ ಆತನ ಕೈಲಿ ವಜ್ರದ ಉಂಗುರ ಇದ್ದುದನ್ನು ಗಮನಿಸಿದ ಆಕೆ ಈ ಬಗ್ಗೆ ಪ್ರಶ್ನಿಸಿದ್ದಾರೆ.

ನಾನು ಲಾಕರ್‌ನಲ್ಲಿ ಇಟ್ಟಿದ್ದ ಉಂಗುರ ನಿನ್ನ ಕೈಲಿ ಹೇಗೆ ಬಂತು ಎಂದು ದಬಾಯಿಸಿ, ನನ್ನ ಚಿನ್ನಾಭರಣ ಹಾಗೂ ಹಣವನ್ನು ವಾಪಸ್ ನಿಡುವಂತೆ ಒತ್ತಾಯಿಸಿದ್ದಾರೆ. ಈ ಸಂಬಂಧ ಆತನೇ ಆಕೆಯ ಮೇಲೆ ಹರಿಹಾಯ್ದಿದ್ದಾನೆ.
ಇದರಿಂದಾಗಿ ತಾನು ವಂಚನೆಗೆ ಒಳಗಾಗಿರುವುದು ಆಕೆಗೆ ಗೊತ್ತಾಗಿದೆ. ಕೂಡಲೇ ಅವರು ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕಳೆದ ಚುನಾವಣೆ : ಇಬ್ಬರು ಪರಿಣಿತರ ವಿಶ್ಲೇಷಣೆ

ರಾಜಕಾರಣಿಗಳು ಕೊನೆಗೂ ಕೇಳಿಕೊಳ್ಳಬೇಕಿರುವುದು ನೀವು ಯಾರೋ ಒಬ್ಬರ ಬದುಕು ಚಂದವಾಗಲು ಕಾರಣವಾದಿರಾ ಎಂಬ ಪ್ರಶ್ನೆ ಮಾತ್ರವೇ. ಅದೊಂದೇ ಸತ್ಯ. ಉಳಿದದ್ದೆಲ್ಲ…

9 mins ago

ತಾಯಂದಿರ ದಿನ ವಿಶೇಷ | ನನ್ನ ಕರುಳ ಕುಡಿ ನನ್ನದೇ ಆಯ್ಕೆ

ಸಂಗಾತಿಯ ಹಂಗಿಲ್ಲದೆ ಅಮ್ಮನಾದ ಖ್ಯಾತ ಚಿತ್ರತಾರೆ ಭಾವನಾ ರಾಮಣ್ಣ ಜೊತೆ ಮಾತುಕತೆ      ನಿಮ್ಮ ವೃತ್ತಿಪರ ಒತ್ತಡಗಳ ನಡುವೆ…

49 mins ago

ಮಡಿಕೇರಿ | ನಗರಸಭೆಯಲ್ಲಿ ಸಿಬ್ಬಂದಿ ಕೊರತೆ ; ಸಾರ್ವಜನಿಕೆ ಕೆಲಸ ವಿಳಂಬ

ಮಡಿಕೇರಿ : ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿ ನಗರಸಭೆಯಲ್ಲಿ ಸಿಬ್ಬಂದಿ ಕೊರತೆ ಕಾಡುತ್ತಿದೆ. ನಗರಸಭೆಯಲ್ಲಿ ಖಾಯಂ ಸಿಬ್ಬಂದಿ ಸಂಖ್ಯೆ ಕಡಿಮೆಯಿದ್ದು,…

1 hour ago

ಎಚ್.ಡಿ.ಕೋಟೆ | ಉತ್ತಮ ಮಳೆ ; ಕೃಷಿ ಚಟುವಟಿಕೆ ಚುರುಕುಗೊಳಿಸಿದ ರೈತರು

ಎಚ್.ಡಿ.ಕೋಟೆ: ಅರೆ ಮಲೆನಾಡು ಎಂದೇ ಹೆಸರಾದ ತಾಲ್ಲೂಕಿನಲ್ಲಿ ತಡವಾಗಿ ಮಳೆ ಪ್ರಾರಂಭವಾದರೂ ಕಳೆದ ಒಂದು ವಾರದಿಂದ ಬೀಳುತ್ತಿರುವ ಉತ್ತಮ ಮಳೆಯಿಂದ…

1 hour ago

ಚಾ.ನಗರ ವಿ.ವಿ | ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಪಿಎಚ್‌.ಡಿಗೆ ಅವಕಾಶ

ಚಾಮರಾಜನಗರ : ಚಾಮರಾಜನಗರ ವಿಶ್ವವಿದ್ಯಾನಿಲಯದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳಿಗೆ ಪಿಎಚ್. ಡಿ. ಸಂಶೋಧನೆ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ವಿದ್ಯಾರ್ಥಿ…

2 hours ago

ಪಿಯುಸಿ : ಸರ್ಕಾರಿ ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಳದ ನಿರೀಕ್ಷೆ

ಮಕ್ಕಳೊಂದಿಗೆ ಸರ್ಕಾರಿ ಕಾಲೇಜುಗಳತ್ತ ಮುಖ ಮಾಡಿದ ಪೋಷಕರು ಗಿರೀಶ್‌ ಹುಣಸೂರು ಮೈಸೂರು : ೨೦೨೫-೨೬ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ…

4 hours ago