ಮೈಸೂರು : ಸರ್ಕಾರಿ ಉದ್ಯೋಗಿ ಮಹಿಳೆಯೊಬ್ಬರನ್ನು ಪರಿಚಯ ಮಾಡಿಕೊಂಡ ವಂಚಕನೋರ್ವ, ಆಕೆಯ ಬಳಿ ಇದ್ದ 500 ಗ್ರಾಂ ಚಿನ್ನದ ಆಭರಣಗಳು ಹಾಗೂ 10.50 ಲಕ್ಷ ರೂ. ಹಣವನ್ನು ಲಪಟಾಯಿಸಿರುವ ಘಟನೆ ನಡೆದಿದೆ.
ಲೋಕೋಪಯೋಗಿ ಇಲಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕಿಯಾಗಿ ಕೆಲಸ ನಿರ್ವಹಿಸುತ್ತಿರುವ ಹಾಗೂ ವಿಜಯನಗರದಲ್ಲಿ ಒಂಟಿಯಾಗಿ ವಾಸಿಸುತ್ತಿರುವ ಮಹಿಳೆಗೆ ಫೇಸ್ಬುಕ್ ಮೂಲಕ ತಮಿಳುನಾಡಿನ ತಿರುವಂತಪುರಂ ಮೂಲದ ವೈದ್ಯ ಡಾ.ಎ.ಎಂ.ಶಿವಕುಮಾರ್ ಪರಿಚಯವಾಗಿದ್ದಾನೆ.
ನಂತರ ಆಕೆಗೆ ಆತ್ಮೀಯನಂತೆ ನಟಿಸಿದ ವಂಚಕ ಮಹಿಳೆಯ ಮನೆಗೆ ಆಗಾಗ್ಗೆ ಬರುತ್ತಿದ್ದ. ನಂತರ ಆಕೆಯೊಂದಿಗೆ ಮಾತನಾಡಿದ ಆತ, ಒಂಟಿಯಾಗಿರುವ ನೀವು ಚಿನ್ನಾಭರಣವನ್ನು ಜೊತೆಯಲ್ಲಿ ಇಟ್ಟುಕೊಳ್ಳಬೇಡಿ. ಬ್ಯಾಂಕ್ನ ಲಾಕರ್ನಲ್ಲಿ ಇಡಿ ಎಂದು ಹೇಳಿ ಆತನೇ ಬ್ಯಾಂಕ್ಗೆ ಕರೆದೊಯ್ದು ಲಾಕರ್ನಲ್ಲಿ ಚಿನ್ನಾಭರಣಗಳನ್ನು ಇರಿಸುವಂತೆ ನಾಟಕವಾಡಿ ನಕಲಿ ಕೀಲಿಯನ್ನು ನೀಡಿದ್ದಾನೆ.
ನಂತರ ನಿಮ್ಮ ಬಳಿ ಇರುವ ಹಣವನ್ನು ವ್ಯಾಪಾರದಲ್ಲಿ ಹೂಡಿಕೆ ಮಾಡಿದಲ್ಲಿ ಹೆಚ್ಚಿನ ಲಾಭಗಳಿಸಬಹುದು ಎಂದು ಆಸೆ ಹುಟ್ಟಿಸಿದ ಆತ, ಅವರ ಬಳಿ ಇದ್ದ 10.50 ಲಕ್ಷ ರೂ. ಹಣವನ್ನು ಪಡೆದಿದ್ದಾನೆ. ನಂತರ ಆತನ ಕೈಲಿ ವಜ್ರದ ಉಂಗುರ ಇದ್ದುದನ್ನು ಗಮನಿಸಿದ ಆಕೆ ಈ ಬಗ್ಗೆ ಪ್ರಶ್ನಿಸಿದ್ದಾರೆ.
ನಾನು ಲಾಕರ್ನಲ್ಲಿ ಇಟ್ಟಿದ್ದ ಉಂಗುರ ನಿನ್ನ ಕೈಲಿ ಹೇಗೆ ಬಂತು ಎಂದು ದಬಾಯಿಸಿ, ನನ್ನ ಚಿನ್ನಾಭರಣ ಹಾಗೂ ಹಣವನ್ನು ವಾಪಸ್ ನಿಡುವಂತೆ ಒತ್ತಾಯಿಸಿದ್ದಾರೆ. ಈ ಸಂಬಂಧ ಆತನೇ ಆಕೆಯ ಮೇಲೆ ಹರಿಹಾಯ್ದಿದ್ದಾನೆ.
ಇದರಿಂದಾಗಿ ತಾನು ವಂಚನೆಗೆ ಒಳಗಾಗಿರುವುದು ಆಕೆಗೆ ಗೊತ್ತಾಗಿದೆ. ಕೂಡಲೇ ಅವರು ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…