ಮೈಸೂರು : ಸರ್ಕಾರಿ ಉದ್ಯೋಗಿ ಮಹಿಳೆಯೊಬ್ಬರನ್ನು ಪರಿಚಯ ಮಾಡಿಕೊಂಡ ವಂಚಕನೋರ್ವ, ಆಕೆಯ ಬಳಿ ಇದ್ದ 500 ಗ್ರಾಂ ಚಿನ್ನದ ಆಭರಣಗಳು ಹಾಗೂ 10.50 ಲಕ್ಷ ರೂ. ಹಣವನ್ನು ಲಪಟಾಯಿಸಿರುವ ಘಟನೆ ನಡೆದಿದೆ.
ಲೋಕೋಪಯೋಗಿ ಇಲಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕಿಯಾಗಿ ಕೆಲಸ ನಿರ್ವಹಿಸುತ್ತಿರುವ ಹಾಗೂ ವಿಜಯನಗರದಲ್ಲಿ ಒಂಟಿಯಾಗಿ ವಾಸಿಸುತ್ತಿರುವ ಮಹಿಳೆಗೆ ಫೇಸ್ಬುಕ್ ಮೂಲಕ ತಮಿಳುನಾಡಿನ ತಿರುವಂತಪುರಂ ಮೂಲದ ವೈದ್ಯ ಡಾ.ಎ.ಎಂ.ಶಿವಕುಮಾರ್ ಪರಿಚಯವಾಗಿದ್ದಾನೆ.
ನಂತರ ಆಕೆಗೆ ಆತ್ಮೀಯನಂತೆ ನಟಿಸಿದ ವಂಚಕ ಮಹಿಳೆಯ ಮನೆಗೆ ಆಗಾಗ್ಗೆ ಬರುತ್ತಿದ್ದ. ನಂತರ ಆಕೆಯೊಂದಿಗೆ ಮಾತನಾಡಿದ ಆತ, ಒಂಟಿಯಾಗಿರುವ ನೀವು ಚಿನ್ನಾಭರಣವನ್ನು ಜೊತೆಯಲ್ಲಿ ಇಟ್ಟುಕೊಳ್ಳಬೇಡಿ. ಬ್ಯಾಂಕ್ನ ಲಾಕರ್ನಲ್ಲಿ ಇಡಿ ಎಂದು ಹೇಳಿ ಆತನೇ ಬ್ಯಾಂಕ್ಗೆ ಕರೆದೊಯ್ದು ಲಾಕರ್ನಲ್ಲಿ ಚಿನ್ನಾಭರಣಗಳನ್ನು ಇರಿಸುವಂತೆ ನಾಟಕವಾಡಿ ನಕಲಿ ಕೀಲಿಯನ್ನು ನೀಡಿದ್ದಾನೆ.
ನಂತರ ನಿಮ್ಮ ಬಳಿ ಇರುವ ಹಣವನ್ನು ವ್ಯಾಪಾರದಲ್ಲಿ ಹೂಡಿಕೆ ಮಾಡಿದಲ್ಲಿ ಹೆಚ್ಚಿನ ಲಾಭಗಳಿಸಬಹುದು ಎಂದು ಆಸೆ ಹುಟ್ಟಿಸಿದ ಆತ, ಅವರ ಬಳಿ ಇದ್ದ 10.50 ಲಕ್ಷ ರೂ. ಹಣವನ್ನು ಪಡೆದಿದ್ದಾನೆ. ನಂತರ ಆತನ ಕೈಲಿ ವಜ್ರದ ಉಂಗುರ ಇದ್ದುದನ್ನು ಗಮನಿಸಿದ ಆಕೆ ಈ ಬಗ್ಗೆ ಪ್ರಶ್ನಿಸಿದ್ದಾರೆ.
ನಾನು ಲಾಕರ್ನಲ್ಲಿ ಇಟ್ಟಿದ್ದ ಉಂಗುರ ನಿನ್ನ ಕೈಲಿ ಹೇಗೆ ಬಂತು ಎಂದು ದಬಾಯಿಸಿ, ನನ್ನ ಚಿನ್ನಾಭರಣ ಹಾಗೂ ಹಣವನ್ನು ವಾಪಸ್ ನಿಡುವಂತೆ ಒತ್ತಾಯಿಸಿದ್ದಾರೆ. ಈ ಸಂಬಂಧ ಆತನೇ ಆಕೆಯ ಮೇಲೆ ಹರಿಹಾಯ್ದಿದ್ದಾನೆ.
ಇದರಿಂದಾಗಿ ತಾನು ವಂಚನೆಗೆ ಒಳಗಾಗಿರುವುದು ಆಕೆಗೆ ಗೊತ್ತಾಗಿದೆ. ಕೂಡಲೇ ಅವರು ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ.
ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್ಗಳನ್ನು ಚಾಲನೆ ಮಾಡುವ ಬಗ್ಗೆ…
ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…
ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ. ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…
ಪ್ರಶಾಂತ್ ಎಸ್. ಮೈಸೂರು: ಯಾವುದೋ ಕಾರಣಕ್ಕೆ ಮನಸ್ಸಿನ ಸ್ಥಿಮಿತ ಕಳೆದುಕೊಳ್ಳುವ ಬಹುತೇಕ ಮಂದಿ ಮನೆ ಹಾಗೂ ಕುಟುಂಬದವರಿಂದ ದೂರವಾಗುವುದು ಸಹಜ.…
ಗಿರೀಶ್ ಹುಣಸೂರು ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ದಾಖಲೆ ಫಲಿತಾಂಶ ಹಿನ್ನೆಲೆ ಮೈಸೂರು: ಶೈಕ್ಷಣಿಕ ವರ್ಷದ ಆರಂಭಕ್ಕೆ ದಿನಗಣನೆ ಆರಂಭ ವಾಗಿರುವ…
ಕೆ.ಬಿ.ರಮೇಶನಾಯಕ ೨ನೇ, ೪ನೇ ಶನಿವಾರ, ಭಾನುವಾರ ಬಾಗಿಲು ಹಾಕಿದರೆ ಶಿಸ್ತುಕ್ರಮ ಮೈಸೂರು: ವಾರದ ಭಾನುವಾರವೂ ಸೇರಿದಂತೆ ಸರ್ಕಾರಿ ರಜಾ ದಿನಗಳಂದು…