ಮೈಸೂರು ನಗರ

ಬಹಳ ವರ್ಷಗಳ ಕನಸು ಈಡೇರಿಸಿದ ಸರ್ಕಾರ : ಶಾಸಕ ಜಿಟಿಡಿ

ಮೈಸೂರು : ಗ್ರೇಡ್ – 1 ಮೈಸೂರು ಯೋಜನೆಯ ಅನುಷ್ಠಾನಕ್ಕೆ ರಾಜ್ಯಸಚಿವ ಸಂಪುಟ ಅನುಮೋದನೆ ನೀಡುವ ಮೂಲಕ ನನ್ನ ಬಹಳ ವರ್ಷಗಳ ಕನಸು ಈಡೇರಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರೇಟರ್ ಮೈಸೂರು ಮಾಡಬೇಕೆಂಬುದು ನನ್ನ ಕನಸಾಗಿತ್ತು. ಇದಕ್ಕಾಗಿ ಹಲವು ವರ್ಷಗಳಿಂದ ಪ್ರಯತ್ನಿಸುತ್ತಾ ಬಂದಿದ್ದೆ. ಕಡೆಗೂ ಇದೀಗ ರಾಜ್ಯಸಚಿವ ಸಂಪುಟ ಗ್ರೇಟರ್ ಮೈಸೂರು ಯೋಜನೆ ಅನುಷ್ಠಾನಕ್ಕೆ ಅನುಮೋದನೆ ನೀಡಿದೆ. ಈ ಮೂಲಕ ನನ್ನ ಕನಸು ಈಡೇರಿದ್ದು, ಚಾಮುಂಡೇಶ್ವರಿ ಕ್ಷೇತ್ರದ ಶೇ.೯೦ ಭಾಗ ಗ್ರೇಟರ್ ಮೈಸೂರು ಯೋಜನೆಯ ವ್ಯಾಪ್ತಿಗೆ ಸೇರಲಿದೆ. ಇದರಿಂದ ಚಾಮುಂಡೇಶ್ವರಿ ಕ್ಷೇತ್ರದ ಸಮಗ್ರ ಅಭಿವೃದ್ಧಿ ಆಗಲಿದ್ದು, ಕ್ಷೇತ್ರದ ಜನರಿಗೆ ಕುಡಿಯುವ ನೀರು, ಉತ್ತಮ ಗುಣಮಟ್ಟದ ರಸ್ತೆಗಳು ಸೇರಿದಂತೆ ಅಗತ್ಯವಾದ ಮೂಲಭೂತ ಸೌಕರ್ಯಗಳು ಲಭ್ಯವಾಗಲಿವೆ ಎಂದರು.

ಇದನ್ನು ಓದಿ: ಲೆಜೆಂಡ್ಸ್ ಪ್ರೋ T20 ಲೀಗ್ : ದಿನೇಶ್ ಕಾರ್ತಿಕ್, ಶಾನ್ ಮಾರ್ಶ್ ಸೇರಿದಂತೆ ಐವರು ದಿಗ್ಗಜರು ಲೀಗ್‌ಗೆ ಸೇರ್ಪಡೆ!

ಡಿ.ಕೆ. ಶಿವಕುಮಾರ್‌ಗೆ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಒಕ್ಕಲಿಗ ಸಮಾಜದ ಸ್ವಾಮೀಜಿಗಳು ಹೇಳಿಕೆ ನೀಡಿರುವ ವಿಚಾರದ ಬಗ್ಗೆ ಮಾತನಾಡಿದ ಅವರು, ಒಕ್ಕಲಿಗ ಸಮಾಜದ ಪರವಾಗಿ ಸ್ವಾಮೀಜಿಗಳು ಡಿಕೆಶಿ ಅವರಿಗೆ ಸಿಎಂ ಸ್ಥಾನ ನೀಡುವಂತೆ ಆಗ್ರಹಿಸಿದ್ದಾರೆ. ಈ ಬಗ್ಗೆ ನಾನು ಏನನ್ನೂ ಹೇಳುವುದಿಲ್ಲ, ರಾಜ್ಯ ರಾಜಕಾರಣದ ಬೆಳವಣಿಗೆ ಬಗ್ಗೆಯೂ ನಾನು ಮಾತನಾಡಲ್ಲ. ನನ್ನ ಕ್ಷೇತ್ರದ ಅಭಿವೃದ್ಧಿ ಮಾತ್ರವೇ ನನ್ನ ಗುರಿಯಾಗಿದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

21 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

21 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

21 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

21 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

21 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

21 hours ago