ಮೈಸೂರು: ಐದು ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸಂಪೂರ್ಣ ದಿವಾಳಿಯಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನರಿಗೆ ಆಸೆ ತೋರಿಸಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು, ಕರ್ನಾಟಕ ರಾಜ್ಯ ಸಂಪೂರ್ಣ ದಿವಾಳಿಯಾಗಿದೆ. ಶಕ್ತಿ ಯೋಜನೆಯಿಂದ ಕೆಎಸ್ಆರ್ಟಿಸಿ ದಿವಾಳಿ ಆಗಿದೆ. ಮನೆಯ ಯಜಮಾನಿಯರಿಗೆ ಗೃಹಲಕ್ಷ್ಮಿ ಹಣ ಕೊಡುತ್ತೇವೆ ಎಂದು ಕಳೆದ ಮೂರು ತಿಂಗಳಿನಿಂದಲೂ ಹಣ ಜಮೆಯಾಗಿಲ್ಲ. ನಿರುದ್ಯೋಗ ಭತ್ಯೆ ಎನ್ನುವ ಯುವನಿಧಿ ಇನ್ನೂ ಶುರು ಆಗಿಲ್ಲ ಎಂದರು.
ಇನ್ನು ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕೆಲಸಗಳು ಸಂಪೂರ್ಣ ನಿಂತುಹೋಗಿವೆ. ಕಸಕ್ಕೂ ಟ್ಯಾಕ್ಸ್ ಹಾಕುತ್ತಿದ್ದಾರೆ. 48 ಗೃಹ ಬಳಕೆ ವಸ್ತುಗಳ ಬೆಲೆ ಏರಿಕೆ ಮಾಡಿದ್ದಾರೆ. ಗ್ಯಾರಂಟಿ ಸ್ಕೀಂಗಳಿಗೆ ಹಣ ಹೊಂದಿಸುವ ನಿಟ್ಟಿನಲ್ಲಿ ಅಭಿವೃದ್ಧಿ ಮಾಡುತ್ತಿಲ್ಲ. ಜನರಲ್ಲಿ ಸರ್ಕಾರದ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಬರೀ ಹಗರಣಗಳಿಂದಲೇ ಸರ್ಕಾರ ಸದ್ದು ಮಾಡುತ್ತಿದೆ. ಈ ಎಲ್ಲದರ ಮಧ್ಯೆ ತಮ್ಮ ವೈಫಲ್ಯಗಳನ್ನ ಮುಚ್ಚಿಕೊಳ್ಳಲು ಜಾತಿಗಣತಿ ವಿಚಾರವನ್ನು ಮುಂದಕ್ಕೆ ಬಿಟ್ಟಿದ್ದಾರೆ. ಈ ಮೂಲಕ ಹಿಂದೂ ಸಮಾಜವನ್ನು ಒಡೆಯಲು ಸಿದ್ದರಾಮಯ್ಯ ಮುಂದಾಗಿದ್ದಾರೆ. ಇದು ಮುಸ್ಲಿಂ ಜನಾಂಗ ಜಾಸ್ತಿ ಇದೆ ಎಂದು ತೋರಿಸುವ ಹುನ್ನಾರ ಅಷ್ಟೇ ಎಂದು ಗಂಭೀರ ಆರೋಪ ಮಾಡಿದರು.
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದೆಹಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ಕೈಗೊಂಡಿದ್ದು, ಕೆಮಿಕಲ್ ಘಟಕದಲ್ಲಿ ಲೇಬಲ್ ಇಲ್ಲದ ಖಾಲಿ ಬಾಟಲ್ಗಳನ್ನು…
ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…
ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…
ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…
ಚಾಮರಾಜನಗರ ಜಿಲ್ಲೆ ಮುಕ್ಕಡಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಮಾಯಮ್ಮ ದೇವಿ ರಥೋತ್ಸವದ ವೇಳೆ ರಥದ ಚಕ್ರದ ದಂಡ ಮುರಿದ ಪರಿಣಾಮ…