ಮೈಸೂರು ನಗರ

ಸರ್ಕಾರದ ಯೋಜನೆಗಳಿಂದ ಶೋಷಣೆ ತಡೆಯಲು ಸಾಧ್ಯವಿಲ್ಲ : ಸಚಿವ ಪರಮೇಶ್ವರ್‌ ಬೇಸರ

ಮೈಸೂರು : ಶೋಷಿತರು ಬುದ್ಧನ ತತ್ವಗಳನ್ನು ಅಳವಡಿಸಿಕೊಳ್ಳುವ ಕೆಲಸವಾಗಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಕರೆ ನೀಡಿದರು.

ನಗರದ ಮಹಾರಾಜ ಮೈದಾನದಲ್ಲಿ ಆಯೋಜಿಸಿದ್ದ ಬೌದ್ಧ ಮಹಾ ಸಮ್ಮೇಳನ 2025 ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ಹಿಂದೂವಾಗಿ ಹುಟ್ಟಿದ್ದೇನೆ ಆದರೆ ಹಿಂದೂವಾಗಿ ಸಾಯುವುದಿಲ್ಲ ಎಂದು ಹೇಳಿ ಬೌದ್ಧ ಧರ್ಮಕ್ಕೆ ಅಪಾರ ಅನುಯಾಯಿಗಳೊಂದಿಗೆ ಸೇರ್ಪಡೆಯಾದರು. ಶೋಷಿತರು ಬುದ್ಧನ ತತ್ವ ಅಳವಡಿಸಿಕೊಳ್ಳಬೇಕು, ಉಳ್ಳವರಿಗೆ ಬುದ್ಧ ಬೇಕಾಗಿಲ್ಲ ಆದರೆ ನೊಂದಿರುವವರಿಗೆ ಬುದ್ಧ ಬೇಕಾಗಿದ್ದಾನೆ ಎಂದು ಪ್ರತಿಪಾದಿಸಿದರು.

ಇದನ್ನೂ ಓದಿ:-ಜಡ್ಡುಗಟ್ಟಿದ ಸಮಾಜ ಬದಲಾವಣೆಗೆ ಬುದ್ದ, ಅಂಬೇಡ್ಕರ್‌ ತತ್ವವೇ ಮದ್ದು : ಸಿಎಂ

ಈ ಸಮ್ಮೇಳನ ಇಂದು ಸಮಾಜಕ್ಕೆ ಪ್ರಸ್ತುತ. ಇಡೀ ದೇಶ ಕಾರ್ಯಕ್ರಮ ನೋಡುತ್ತಿದೆ, ನಿನ್ನೆ 1 ಸಾವಿರ ಮಂದಿ ಬೌದ್ಧ ಧರ್ಮಕ್ಕೆ ಸೇರಿದ್ದಾರೆ. ಸರ್ಕಾರಗಳು ನೂರಾರು ಕಾರ್ಯಕ್ರಮ ಕೊಡಬಹುದು. ಆದರೆ ನಮ್ಮ ಮೇಲಿನ ಶೋಷಣೆಯನ್ನು ತಡೆಯಲು ಆಗುತ್ತಿಲ್ಲ ಎಂದು ಬೇಸರಿಸಿದ ಅವರು, ನಾವು ಎತ್ತೆಚ್ಚುಕೊಳ್ಳಬೇಕು. ನಮಗೆ ಸಮಾನತೆ ಗೌರವ ಸಿಗುವ ಕಡೆ ನಾವು ಹೋಗಬೇಕು ಎಂದರು.

ದೇಶದಲ್ಲಿ ಶಾಂತಿ ನೆಲೆಸಬೇಕೆಂದು ಕೂಗು ಎದ್ದಿದೆ. ಪ್ರಸ್ತುತ ಸಂಘರ್ಷ, ಅಶಾಂತಿ ನಡುವೆ ಬುದ್ಧ ಮತ್ತೆ ಎದ್ದು ನಿಲ್ಲುತ್ತಿದ್ದಾನೆ. ಬುದ್ಧನ ಸಿದ್ದಾಂತ ಅನುಸರಿಸಿದರೆ ಈ ದೇಶದ ಪ್ರತಿಯೊಬ್ಬರಿಗೂ ಗೌರವ ಸಿಗುತ್ತದೆ. ಬುದ್ಧನ ತತ್ವಗಳನ್ನು ಅಳವಡಿಸಿಕೊಳ್ಳುವ ಕೆಲಸ ಮಾಡಬೇಕು ಎಂದು ತಿಳಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ; ವಯೋಮಿತಿ ಸಡಿಲಿಕೆ ಸ್ವಾಗತಾರ್ಹ

ರಾಜ್ಯ ಸರ್ಕಾರ ಕೆಲ ತಿಂಗಳುಗಳ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷಗಳ ವಯೋಮಿತಿ ನಿಗದಿ ಮಾಡಿದ ಬಗ್ಗೆ ಕೈಗೊಂಡ…

11 mins ago

ಓದುಗರ ಪತ್ರ: ಸರ್ಕಾರದ ನಡೆ ಖಂಡನೀಯ

ಹೆಚ್.ಡಿ.ಕೋಟೆ ತಾಲ್ಲೂಕಿನ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಹಂಪಾಪುರ ಮತ್ತು ಜಿನ್ನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಲು ಹೊರಟಿರುವ ಸರ್ಕಾರದ…

14 mins ago

ಓದುಗರ ಪತ್ರ: ಐಪಿಎಲ್ ಬೇಕಿತ್ತೇ?

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧ ೨೭ ನೇದಿನಕ್ಕೆ ಕಾಲಿಟ್ಟಿದೆ, ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಅಮೆರಿಕ ತನ್ನ…

16 mins ago

ಅಭಿವೃದ್ಧಿ ಮತ್ತು ಸಂರಕ್ಷಣೆಯ ನಡುವೆ ಸಮತೋಲನ ಅವಶ್ಯ

ಬಿಆರ್‌ಟಿ ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲೊಂದು ಬಿಳಿಗಿರಿ ರಂಗನ ಬೆಟ್ಟ (ಬಿಆರ್‌ಟಿ) ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲಿ…

19 mins ago

ಮನುಷ್ಯನ ಮುಖವಾಡ ಕಳಚುವ ನಾಟಕ ‘ಪಾರ್ಟಿ’

ಮಹೇಶ ಎಲಕುಂಚವಾರ್ ಅವರ ಪ್ರಸಿದ್ಧ ಮರಾಠಿ ನಾಟಕವನ್ನು ರಂಗಕರ್ಮಿ ಪ್ರಸಾದ್ ಕುಂದೂರು ಕನ್ನಡಕ್ಕೆ ಅನುವಾದಿಸಿದ್ದಾರೆ ಮರಾಠಿಯ ಮಹೇಶ ಎಲಕುಂಚವಾರ ಅವರ…

25 mins ago

ತಣ್ಣಗೆ ಕಾಣುವ ಬಣ್ಣದ ಮಡಕೆ: ಆರೋಗ್ಯಕ್ಕೆ ಹಿತವೆ? ಅಹಿತವೇ?

‘ಆಂದೋಲನ’ ತಂಡದಿಂದ ರಿಯಾಲಿಟಿ ಚೆಕ್ ಮೈಸೂರು: ಸಾಂಸ್ಕ ತಿಕ ನಗರಿ ಮೈಸೂರಿನಲ್ಲಿ ಬೇಸಿಗೆಯ ತಾಪ ಏರುತ್ತಿದ್ದಂತೆ, ದಾಹ ತಣಿಸಿಕೊಳ್ಳಲು ಜನರು…

30 mins ago