ಮೈಸೂರು : ಶೋಷಿತರು ಬುದ್ಧನ ತತ್ವಗಳನ್ನು ಅಳವಡಿಸಿಕೊಳ್ಳುವ ಕೆಲಸವಾಗಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಕರೆ ನೀಡಿದರು.
ನಗರದ ಮಹಾರಾಜ ಮೈದಾನದಲ್ಲಿ ಆಯೋಜಿಸಿದ್ದ ಬೌದ್ಧ ಮಹಾ ಸಮ್ಮೇಳನ 2025 ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ಹಿಂದೂವಾಗಿ ಹುಟ್ಟಿದ್ದೇನೆ ಆದರೆ ಹಿಂದೂವಾಗಿ ಸಾಯುವುದಿಲ್ಲ ಎಂದು ಹೇಳಿ ಬೌದ್ಧ ಧರ್ಮಕ್ಕೆ ಅಪಾರ ಅನುಯಾಯಿಗಳೊಂದಿಗೆ ಸೇರ್ಪಡೆಯಾದರು. ಶೋಷಿತರು ಬುದ್ಧನ ತತ್ವ ಅಳವಡಿಸಿಕೊಳ್ಳಬೇಕು, ಉಳ್ಳವರಿಗೆ ಬುದ್ಧ ಬೇಕಾಗಿಲ್ಲ ಆದರೆ ನೊಂದಿರುವವರಿಗೆ ಬುದ್ಧ ಬೇಕಾಗಿದ್ದಾನೆ ಎಂದು ಪ್ರತಿಪಾದಿಸಿದರು.
ಇದನ್ನೂ ಓದಿ:-ಜಡ್ಡುಗಟ್ಟಿದ ಸಮಾಜ ಬದಲಾವಣೆಗೆ ಬುದ್ದ, ಅಂಬೇಡ್ಕರ್ ತತ್ವವೇ ಮದ್ದು : ಸಿಎಂ
ಈ ಸಮ್ಮೇಳನ ಇಂದು ಸಮಾಜಕ್ಕೆ ಪ್ರಸ್ತುತ. ಇಡೀ ದೇಶ ಕಾರ್ಯಕ್ರಮ ನೋಡುತ್ತಿದೆ, ನಿನ್ನೆ 1 ಸಾವಿರ ಮಂದಿ ಬೌದ್ಧ ಧರ್ಮಕ್ಕೆ ಸೇರಿದ್ದಾರೆ. ಸರ್ಕಾರಗಳು ನೂರಾರು ಕಾರ್ಯಕ್ರಮ ಕೊಡಬಹುದು. ಆದರೆ ನಮ್ಮ ಮೇಲಿನ ಶೋಷಣೆಯನ್ನು ತಡೆಯಲು ಆಗುತ್ತಿಲ್ಲ ಎಂದು ಬೇಸರಿಸಿದ ಅವರು, ನಾವು ಎತ್ತೆಚ್ಚುಕೊಳ್ಳಬೇಕು. ನಮಗೆ ಸಮಾನತೆ ಗೌರವ ಸಿಗುವ ಕಡೆ ನಾವು ಹೋಗಬೇಕು ಎಂದರು.
ದೇಶದಲ್ಲಿ ಶಾಂತಿ ನೆಲೆಸಬೇಕೆಂದು ಕೂಗು ಎದ್ದಿದೆ. ಪ್ರಸ್ತುತ ಸಂಘರ್ಷ, ಅಶಾಂತಿ ನಡುವೆ ಬುದ್ಧ ಮತ್ತೆ ಎದ್ದು ನಿಲ್ಲುತ್ತಿದ್ದಾನೆ. ಬುದ್ಧನ ಸಿದ್ದಾಂತ ಅನುಸರಿಸಿದರೆ ಈ ದೇಶದ ಪ್ರತಿಯೊಬ್ಬರಿಗೂ ಗೌರವ ಸಿಗುತ್ತದೆ. ಬುದ್ಧನ ತತ್ವಗಳನ್ನು ಅಳವಡಿಸಿಕೊಳ್ಳುವ ಕೆಲಸ ಮಾಡಬೇಕು ಎಂದು ತಿಳಿದರು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…