ಮೈಸೂರು : ಶೋಷಿತರು ಬುದ್ಧನ ತತ್ವಗಳನ್ನು ಅಳವಡಿಸಿಕೊಳ್ಳುವ ಕೆಲಸವಾಗಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಕರೆ ನೀಡಿದರು.
ನಗರದ ಮಹಾರಾಜ ಮೈದಾನದಲ್ಲಿ ಆಯೋಜಿಸಿದ್ದ ಬೌದ್ಧ ಮಹಾ ಸಮ್ಮೇಳನ 2025 ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ಹಿಂದೂವಾಗಿ ಹುಟ್ಟಿದ್ದೇನೆ ಆದರೆ ಹಿಂದೂವಾಗಿ ಸಾಯುವುದಿಲ್ಲ ಎಂದು ಹೇಳಿ ಬೌದ್ಧ ಧರ್ಮಕ್ಕೆ ಅಪಾರ ಅನುಯಾಯಿಗಳೊಂದಿಗೆ ಸೇರ್ಪಡೆಯಾದರು. ಶೋಷಿತರು ಬುದ್ಧನ ತತ್ವ ಅಳವಡಿಸಿಕೊಳ್ಳಬೇಕು, ಉಳ್ಳವರಿಗೆ ಬುದ್ಧ ಬೇಕಾಗಿಲ್ಲ ಆದರೆ ನೊಂದಿರುವವರಿಗೆ ಬುದ್ಧ ಬೇಕಾಗಿದ್ದಾನೆ ಎಂದು ಪ್ರತಿಪಾದಿಸಿದರು.
ಇದನ್ನೂ ಓದಿ:-ಜಡ್ಡುಗಟ್ಟಿದ ಸಮಾಜ ಬದಲಾವಣೆಗೆ ಬುದ್ದ, ಅಂಬೇಡ್ಕರ್ ತತ್ವವೇ ಮದ್ದು : ಸಿಎಂ
ಈ ಸಮ್ಮೇಳನ ಇಂದು ಸಮಾಜಕ್ಕೆ ಪ್ರಸ್ತುತ. ಇಡೀ ದೇಶ ಕಾರ್ಯಕ್ರಮ ನೋಡುತ್ತಿದೆ, ನಿನ್ನೆ 1 ಸಾವಿರ ಮಂದಿ ಬೌದ್ಧ ಧರ್ಮಕ್ಕೆ ಸೇರಿದ್ದಾರೆ. ಸರ್ಕಾರಗಳು ನೂರಾರು ಕಾರ್ಯಕ್ರಮ ಕೊಡಬಹುದು. ಆದರೆ ನಮ್ಮ ಮೇಲಿನ ಶೋಷಣೆಯನ್ನು ತಡೆಯಲು ಆಗುತ್ತಿಲ್ಲ ಎಂದು ಬೇಸರಿಸಿದ ಅವರು, ನಾವು ಎತ್ತೆಚ್ಚುಕೊಳ್ಳಬೇಕು. ನಮಗೆ ಸಮಾನತೆ ಗೌರವ ಸಿಗುವ ಕಡೆ ನಾವು ಹೋಗಬೇಕು ಎಂದರು.
ದೇಶದಲ್ಲಿ ಶಾಂತಿ ನೆಲೆಸಬೇಕೆಂದು ಕೂಗು ಎದ್ದಿದೆ. ಪ್ರಸ್ತುತ ಸಂಘರ್ಷ, ಅಶಾಂತಿ ನಡುವೆ ಬುದ್ಧ ಮತ್ತೆ ಎದ್ದು ನಿಲ್ಲುತ್ತಿದ್ದಾನೆ. ಬುದ್ಧನ ಸಿದ್ದಾಂತ ಅನುಸರಿಸಿದರೆ ಈ ದೇಶದ ಪ್ರತಿಯೊಬ್ಬರಿಗೂ ಗೌರವ ಸಿಗುತ್ತದೆ. ಬುದ್ಧನ ತತ್ವಗಳನ್ನು ಅಳವಡಿಸಿಕೊಳ್ಳುವ ಕೆಲಸ ಮಾಡಬೇಕು ಎಂದು ತಿಳಿದರು.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…