ಮೈಸೂರು ನಗರ

ಸರ್ಕಾರ ಹುಲಿ ದಾಳಿಗೆ ಅಗತ್ಯ ಕ್ರಮ ಜರುಗಿಸಲಿ : ಸಂಸದ ಯದುವೀರ್‌

ಮೈಸೂರು : ಹುಲಿಗಳ ದಾಳಿ ನಿಯಂತ್ರಣಕ್ಕೆ ರಾಜ್ಯಸರ್ಕಾರ ಅಗತ್ಯ ಕ್ರಮಕೈಗೊಳ್ಳಬೇಕು. ವನ್ಯಜೀವಿಗಳನ್ನು ಸಂರಕ್ಷಿಸುವ ಜತೆಗೆ, ಮಾನವನ ಜೀವವನ್ನು ಉಳಿಸಬೇಕಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.

ಅಕ್ರಮ ರೆಸಾರ್ಟ್‌ಗಳಿಂದ ಹಾಗೂ ಸಫಾರಿ ಹೆಚ್ಚಳದಿಂದ ಹುಲಿಗಳ ದಾಳಿಯಾಗುತ್ತಿದೆ ಎಂಬುದಕ್ಕೆ ಲಿಂಕ್ ಕೊಡುವುದಿಲ್ಲ. ರೆಸಾರ್ಟ್‌ಗಳ ನಿರ್ಮಾಣದಿಂದ ಪ್ರಕೃತಿಯ ಮೇಲೆ ಪರಿಣಾಮ ಬೀರಬಹುದು ಹೊರತು ದಾಳಿಗೆ ಸಂಪರ್ಕವಿಲ್ಲ ಎಂದರು.

ಇದನ್ನು ಓದಿ: ಮೈಸೂರು ಭಾಗದಲ್ಲಿ ನಿರಂತರ ಹುಲಿ ದಾಳಿ ಪ್ರಕರಣ: ಅನ್ನದಾತರ ಆಕ್ರೋಶ

ಬಂಡೀಪುರ ಅರಣ್ಯ ಪ್ರದೇಶವು ಒಂದು ಸಾವಿರ ಚದರ ಕಿ.ಮೀ ವಿಸ್ತೀರ್ಣವನ್ನು ಹೊಂದಿದೆ. ಆದರೆ,ಸಫಶರಿ ನಡೆಯುತ್ತಿರುವುದು ೧೫೦ ಚದರ ಕಿ.ಮೀ ವ್ಯಾಪ್ತಿಯಲ್ಲಿ ಮಾತ್ರವಾಗಿದೆ. ನಾವು ಹುಲಿಗಳು ಕಾಡಿನಿಂದ ನಾಡಿಗೆ ಯಾಕೇ ಬರುತ್ತಿದೆ ಎಂಬುದನ್ನು ಗಮನಿಸಬೇಕು. ನಿಯಂತ್ರಣಕ್ಕೆ ಗಮನಹರಿಸಬೇಕು ಎಂದರು.

ಹುಲಿ ದಾಳಿಗಳ ನಿಯಂತ್ರಣಕ್ಕೆ ಪರಿಹಾರಗಳು ಸಾಕಷ್ಟು ಇವೆ. ಈ ವಿಚಾರ ಅಧಿಕಾರಿಗಳಿಗೂ ಗೊತ್ತಿರುತ್ತದೆ ಎಂದರು. ಅನಾದಿ ಕಾಲದಿಂದಲೂ ಬುಡಕಟ್ಟು ಜನರು ಕಾಡಿನಂಚಿನಲ್ಲಿ ವಾಸ ಮಾಡುತ್ತಿರುತ್ತಾರೆ. ಸಫಾರಿ ಕೂಡ ನಡೆಯುತ್ತಿದೆ. ಹಾಗಾಗಿ, ನಾವು ಅರಣ್ಯ ಉಳಿಸಲು ಪ್ರಯತ್ನ ಮಾಡಬೇಕಿದೆ ಎಂದು ಸಲಹೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

3 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

7 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

8 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

9 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

9 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

9 hours ago