ಮೈಸೂರು ನಗರ

ಸರ್ಕಾರ ಹುಲಿ ದಾಳಿಗೆ ಅಗತ್ಯ ಕ್ರಮ ಜರುಗಿಸಲಿ : ಸಂಸದ ಯದುವೀರ್‌

ಮೈಸೂರು : ಹುಲಿಗಳ ದಾಳಿ ನಿಯಂತ್ರಣಕ್ಕೆ ರಾಜ್ಯಸರ್ಕಾರ ಅಗತ್ಯ ಕ್ರಮಕೈಗೊಳ್ಳಬೇಕು. ವನ್ಯಜೀವಿಗಳನ್ನು ಸಂರಕ್ಷಿಸುವ ಜತೆಗೆ, ಮಾನವನ ಜೀವವನ್ನು ಉಳಿಸಬೇಕಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.

ಅಕ್ರಮ ರೆಸಾರ್ಟ್‌ಗಳಿಂದ ಹಾಗೂ ಸಫಾರಿ ಹೆಚ್ಚಳದಿಂದ ಹುಲಿಗಳ ದಾಳಿಯಾಗುತ್ತಿದೆ ಎಂಬುದಕ್ಕೆ ಲಿಂಕ್ ಕೊಡುವುದಿಲ್ಲ. ರೆಸಾರ್ಟ್‌ಗಳ ನಿರ್ಮಾಣದಿಂದ ಪ್ರಕೃತಿಯ ಮೇಲೆ ಪರಿಣಾಮ ಬೀರಬಹುದು ಹೊರತು ದಾಳಿಗೆ ಸಂಪರ್ಕವಿಲ್ಲ ಎಂದರು.

ಇದನ್ನು ಓದಿ: ಮೈಸೂರು ಭಾಗದಲ್ಲಿ ನಿರಂತರ ಹುಲಿ ದಾಳಿ ಪ್ರಕರಣ: ಅನ್ನದಾತರ ಆಕ್ರೋಶ

ಬಂಡೀಪುರ ಅರಣ್ಯ ಪ್ರದೇಶವು ಒಂದು ಸಾವಿರ ಚದರ ಕಿ.ಮೀ ವಿಸ್ತೀರ್ಣವನ್ನು ಹೊಂದಿದೆ. ಆದರೆ,ಸಫಶರಿ ನಡೆಯುತ್ತಿರುವುದು ೧೫೦ ಚದರ ಕಿ.ಮೀ ವ್ಯಾಪ್ತಿಯಲ್ಲಿ ಮಾತ್ರವಾಗಿದೆ. ನಾವು ಹುಲಿಗಳು ಕಾಡಿನಿಂದ ನಾಡಿಗೆ ಯಾಕೇ ಬರುತ್ತಿದೆ ಎಂಬುದನ್ನು ಗಮನಿಸಬೇಕು. ನಿಯಂತ್ರಣಕ್ಕೆ ಗಮನಹರಿಸಬೇಕು ಎಂದರು.

ಹುಲಿ ದಾಳಿಗಳ ನಿಯಂತ್ರಣಕ್ಕೆ ಪರಿಹಾರಗಳು ಸಾಕಷ್ಟು ಇವೆ. ಈ ವಿಚಾರ ಅಧಿಕಾರಿಗಳಿಗೂ ಗೊತ್ತಿರುತ್ತದೆ ಎಂದರು. ಅನಾದಿ ಕಾಲದಿಂದಲೂ ಬುಡಕಟ್ಟು ಜನರು ಕಾಡಿನಂಚಿನಲ್ಲಿ ವಾಸ ಮಾಡುತ್ತಿರುತ್ತಾರೆ. ಸಫಾರಿ ಕೂಡ ನಡೆಯುತ್ತಿದೆ. ಹಾಗಾಗಿ, ನಾವು ಅರಣ್ಯ ಉಳಿಸಲು ಪ್ರಯತ್ನ ಮಾಡಬೇಕಿದೆ ಎಂದು ಸಲಹೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

4 hours ago

ಓದುಗರ ಪತ್ರ: ನೆಮ್ಮದಿ ಕೇಂದ್ರಕ್ಕೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…

4 hours ago

ಓದುಗರ ಪತ್ರ: ಆಹಾರ ಸರಬರಾಜಿಗೆ ಕಪ್ಪು ಪ್ಲಾಸ್ಟಿಕ್ ಡಬ್ಬಿಗಳನ್ನು ನಿಷೇಧಿಸಿ

ನಗರ ಪ್ರದೇಶಗಳ ಹೋಟೆಲ್‌ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್‌ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…

4 hours ago

ಓದುಗರ ಪತ್ರ: ಅಧಿಕಾರಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಯಾಶೀಲವಾಗಲಿ

ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…

4 hours ago

ಓದುಗರ ಪತ್ರ: ಎಸ್‌ಐಆರ್: ಸಂಪೂರ್ಣ ಮಾಹಿತಿ ನೀಡಿ

ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…

4 hours ago

ಅನನ್ಯಾಳ ಬದುಕು ಬದಲಾಯಿಸಿದ 20 ರೂಪಾಯಿ ನೋಟು

ಪಂಜು ಗಂಗೊಳ್ಳಿ  ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…

4 hours ago