ಮೈಸೂರು ನಗರ

ಒಳಮೀಸಲಾತಿ ಜಾರಿ ಸರ್ಕಾರದ ಐತಿಹಾಸಿಕ ತೀರ್ಮಾನ : ಸಿಎಂ ಪ್ರತಿಪಾದನೆ

ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್‌ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ಜಿಲ್ಲಾಡಳಿತದ ವತಿಯಿಂದ ಮೈಸೂರಿನ ಕಲಾಮಂದಿರದಲ್ಲಿ ಆಯೋಜಿಸಿದ್ದ ಸಿದ್ದರಾಮೇಶ್ವರ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಆರ್ಥಿಕ ಹಾಗೂ ಸಾಮಾಜಿಕ ಶಕ್ತಿಗಾಗಿ ಶಿಕ್ಷಣ ಅಗತ್ಯವಾಗಿದ್ದು, ಭೋವಿ ಜನಾಂಗದವರು ಶಿಕ್ಷಣಕ್ಕೆ ಒತ್ತು ನೀಡಬೇಕೆಂದು ತಿಳಿಸಿದರು.

ಉತ್ಪಾದಿಸಿದ ಸಂಪತ್ತಿನ ಸಮಾನ ಹಂಚಿಕೆ
ಶ್ರೀ ಸಿದ್ದರಾಮೇಶ್ವರ ಜಯಂತಿಯ ಶುಭ ಕೋರಿದ ಮುಖ್ಯಮಂತ್ರಿಗಳು, ರಾಜ್ಯದಲ್ಲಿ ಸಮಸಮಾಜ ನಿರ್ಮಿಸುವ ಸಂಕಲ್ಪವನ್ನು ಸರ್ಕಾರ ಹೊಂದಿದೆ. ಉತ್ಪಾದಿಸಿದ ಸಂಪತ್ತು ಸಮಾನವಾಗಿ ಹಂಚಿಕೆಯಾಗಿಬೇಕು. ರಾಜ್ಯದ ಸರ್ವರಿಗೂ ಸಮಪಾಲು, ಸಮಬಾಳು ಸಿಗಬೇಕೆಂಬುದೇ ಸರ್ಕಾರದ ಉದ್ದೇಶ. ಸಿದ್ದರಾಮೇಶ್ವವರೂ ಸೇರಿದಂತೆ ಸಂತಮಹಾಶಯರು, ಸಮಾಜದಲ್ಲಿ ಜಾತಿವರ್ಗಗಳ ವ್ಯವಸ್ಥೆಗಳು ತೊಲಗಬೇಕು ಎಂದು ಬಯಸಿದ್ದರು. ಬಸವಾದಿ ಶರಣರು 12 ನೇ ಶತಮಾನದಲ್ಲಿ ಸಮಾನತೆಯ ಸಿದ್ಧಾಂತವನ್ನು ಬೋಧಿಸಿದ್ದರು. ಶೋಷಣೆಗೊಳಗಾದ ಹಾಗೂ ಅವಕಾಶವಂಚಿತ ಸಮುದಾಯಗಳು ಸಂಘಟಿತರಾಗುವ ಸಮ್ಮೇಳನಗಳು ಉತ್ತಮ ಕಾರ್ಯಗಳಾಗಿವೆ ಎಂದರು.

ನಾನು ಸಾಮಾಜಿಕ ನ್ಯಾಯದಲ್ಲಿ ನಂಬಿಕೆಯಿರಿಸಿದ್ದೇನೆ
ಬಸವಜಯಂತಿಯಂದು ನಾನು 2013 ಮೇ 13 ರಂದು ನಾನು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದೆ. ಬಸವಣ್ಣನವರು ಬೋಧಿಸಿದಂತೆ ನಾನು ಸಾಮಾಜಿಕ ನ್ಯಾಯದಲ್ಲಿ ನಂಬಿಕೆಯಿರಿಸಿದ್ದೇನೆ. ರಾಜಕೀಯ ಸ್ವಾತಂತ್ರ್ಯವು, ಆರ್ಥಿಕ ಹಾಗೂ ಸಾಮಾಜಿಕ ಸ್ವಾತಂತ್ರ್ಯದ ತಳಹದಿಯ ಮೇಲೆ ನಿಂತಿದೆ. ಶಿಕ್ಷಣ ಪಡೆದಾಗ ಮಾತ್ರ ಸಾಮಾಜಿಕ ಆರ್ಥಿಕ ಶಕ್ತಿ ದೊರಕಲು ಸಾಧ್ಯ ಎಂದರು.

ಗ್ಯಾರಂಟಿ ಯೋಜನೆಗಳು ಮಹಿಳಾ ಸಮೂಹಕ್ಕೆ ವರದಾನ
ಆರ್ಥಿಕವಾಗಿ ಶಕ್ತಿಯಿಲ್ಲದವರಿಗೆ ಗ್ಯಾರಂಟಿ ಯೋಜನೆಗಳನ್ನು ಸಮಾನವಾಗಿ ನೀಡಲಾಗಿದೆ. ಮಹಿಳೆಯರಿಗೆ ಶಕ್ತಿ ಹಾಗೂ ಗೃಹಲಕ್ಷ್ಮಿ ಯೋಜನೆಯನ್ನು ಯಾವುದೇ ತಾರತಮ್ಯವಿಲ್ಲದೇ ನೀಡಲಾಗುತ್ತಿದೆ. ನಮ್ಮ ಸರ್ಕಾರ ಭೋವಿ ನಿಗಮವೂ ಸೇರಿದಂತೆ ವಿವಿಧ ಸಮುದಾಯಗಳ ಅಭಿವೃದ್ಧಿ ನಿಗಮಗಳ ಸಾಲವನ್ನು ಮನ್ನಾ ಮಾಡಲಾಗಿದೆ. ಪರಿಶಿಷ್ಟ ಜಾತಿಯ ಸಮುದಾಯಗಳಲ್ಲಿನ ಅಸಮಾನತೆ ಹೋಗಲಾಡಿಸಲು ಐತಿಹಾಸಿಕ ಒಳ ಮೀಸಲಾತಿಯನ್ನು ಜಾರಿಗೊಳಿಸಿದೆ ಎಡಗೈಗೆ 5.25%, ಬಲಗೈಗೆ 5.25%, ಹಾಗೂ ಇತರ ಉಪಜಾತಿಗಳಿಗೆ 4.5% ಹಂಚಿಕೆ ಮಾಡಲಾಗಿದೆ ಎಂದರು.

ಸರ್ಕಾರ ಸಾಮಾಜಿಕ ನ್ಯಾಯಕ್ಕೆ ಬದ್ಧ
ಈಗ ಜಾತಿ ಸಮೀಕ್ಷೆ ನಡೆಯುತ್ತಿದ್ದು, ಜಾತಿ ಸಮೀಕ್ಷೆ ವರದಿ ಬಂದ ನಂತರ ಚರ್ಚೆ ಮಾಡೋಣ ಎಂದರು. ನಮ್ಮ ಸರ್ಕಾರ ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿದೆ. ಯಾರಿಗೂ ಅನ್ಯಾಯವಾಗಬಾರದು, ನೂರಕ್ಕೆ ನೂರು ಅಲ್ಲದಿದ್ದರೂ 99% ನ್ಯಾಯ ಒದಗಿಸಲು ಪ್ರಯತ್ನಿಸಲಾಗುವುದು ಎಂದರು.

ಅವಕಾಶಗಳಿಂದ ಯಾರೂ ವಂಚಿತರಾಗಬಾರದು
ಸಮುದಾಯದವರು ಇಟ್ಟಿರುವ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಭರವಸೆ ನೀಡಿದ ಮುಖ್ಯಮಂತ್ರಿಗಳು ಸಮುದಾಯದವರಿಗೆ ಕುಲಪತಿ, ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡುವ ಬಗ್ಗೆ ಪರಿಶೀಲಿಸಲಾಗುವುದು ಎಂದರು. ಏಳು ಕೋಟಿ ಜನರಿಗೂ ನ್ಯಾಯ ಸಿಗಬೇಕು ಹಾಗೂ ಯಾರೂ ಅವಕಾಶಗಳಿಂದ ವಂಚಿತರಾಗಬಾರದು ಎಂದರು. ಸಂವಿಧಾನ ರಚನೆಯಾದ ನಂತರ ಸಮಾನತೆಯನ್ನು ಸಾಧಿಸುವತ್ತ ದೇಶ ಸಾಗಿದ್ದು, ಸಂವಿಧಾನ ಹೇಳುವಂತೆಯೇ ನಡೆದುಕೊಳ್ಳುತ್ತೇವೆ ಎಂದರು.

ಸಹಿಷ್ಣುತೆಯನ್ನು ರೂಡಿಸಿಕೊಳ್ಳಬೇಕು
ಸ್ವಾತಂತ್ರ್ಯ ಸಮಾನತೆ ಮತ್ತು ಭ್ರಾತೃತ್ವ ಸಂವಿಧಾನದ ಮೂಲ ತತ್ವಗಳು. ಜಡತ್ವದಿಂದ ಕೂಡಿರುವ ಜಾತಿ ವ್ಯವಸ್ಥೆಯನ್ನು ಸುಧಾರಿಸಬೇಕಿದೆ. ಎಲ್ಲಾ ಜಾತಿಗಳನ್ನು ಪ್ರೀತಿಸಿ, ಅವರೂ ನಮ್ಮನ್ನು ಪ್ರೀತಿಸುವಂತೆ ಮಾಡಬೇಕು ಹಾಗೂ ಸಹಿಷ್ಣುತೆಯನ್ನು ರೂಡಿಸಿಕೊಳ್ಳಬೇಕು. ಉತ್ಪಾದನೆಯಲ್ಲಿ ಎಲ್ಲರೂ ಭಾಗವಹಿ ಉತ್ಪನ್ನವನ್ನು ಸಮಾನವಾಗಿ ಹಂಚಿಕೊಳ್ಳಬೇಕು ಎಂದು ಸಿದ್ಧರಾಮೇಶ್ವರರು ನಮಗೆ ಬೋಧಿಸಿದ್ದರು. ಅವರು ನಡೆದ ಹಾದಿಯಲ್ಲಿಯೇ ನಮ್ಮ ಸರ್ಕಾರವೂ ನಡೆಯುತ್ತಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಅನುಮಾನ ಬಗೆಹರಿಸಿ

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…

13 hours ago

ಓದುಗರ ಪತ್ರ: ಕನ್ನಡ ಒಗ್ಗಟ್ಟು

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…

13 hours ago

ಓದುಗರ ಪತ್ರ: ರಾಜಕಾರಣದ ಸರಕು!

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…

13 hours ago

ಓದುಗರ ಪತ್ರ: ಅಕ್ಕಿ ದರ ಏರಿಕೆಗೆ ಕಡಿವಾಣ ಅಗತ್ಯ

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…

14 hours ago

ಸತ್ಯದ ಪ್ರತಿಪಾದಕರು ಮಾತ್ರ ಆದರ್ಶ ಆಗಬಲ್ಲರು

ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…

14 hours ago

300 ಮಕ್ಕಳ ಶಿಕ್ಷಣಕ್ಕೆ ಶೇ.96ರಷ್ಟು ಸಂಪತ್ತನ್ನು ದಾನ ಮಾಡಿದ ಟೆಕ್ಕಿ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ  ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…

14 hours ago