ಮೈಸೂರು ನಗರ

ಮೈಸೂರು ವಿ.ವಿ.ಘಟಿಕೋತ್ಸವ: ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಗೈರು

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದಲ್ಲಿ 105ನೇ ಘಟಿಕೋತ್ಸವ ಇಂದು ನಡೆದಿದ್ದು, ಪದವಿ ಪ್ರದಾನ ಮಾಡಬೇಕಿದ್ದ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಗೈರು ಹಾಜರಾಗಿದ್ದಾರೆ.

ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಇಂದು(ಜನವರಿ.18) 105ನೇ ಘಟಿಕೋತ್ಸವವನ್ನು ಆಯೋಜಿಸಲಾಗಿತ್ತು. ಈ ಘಟಿಕೋತ್ಸವದಲ್ಲಿ ಸುಮಾರು 31,689 ವಿದ್ಯಾರ್ಥಿಗಳಿಗೆ ವಿವಿಧ ಪದವಿಗಳನ್ನು ಪ್ರದಾನ ಮಾಡಲಾಗುವುದು ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ತಿಳಿಸಿದ್ದರು. ಆದರೆ ಈ ಘಟಿಕೋತ್ಸವದಲ್ಲಿ ಪದವಿ ಪ್ರದಾನ ಮಾಡಬೇಕಿದ್ದ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರು ಗೈರು ಹಾಜರಾಗಿದ್ದಾರೆ.

ಈ ಘಟಿಕೊತ್ಸವದಲ್ಲಿ ಮಾಜಿ ಸಂಸದ ಎ.ಸಿ.ಷಣ್ಮೂಗಂ ಮತ್ತು ಶಾಹೀನ್‌ ಮಜೀದ್‌ ಅವರಿಗೆ ಗೌರವ ಡಾಕ್ಟರೇಟ್‌ ಪದವಿ ಪ್ರದಾನ ಮಾಡಲಾಯಿತು. ಇನ್ನೂ ರಾಜ್ಯಸಭಾ ಸದಸ್ಯರಾದ ಸುಧಾ ಮೂರ್ತಿ ಅವರಿಗೆ 2020ರಲ್ಲಿ ಘೋಷಣೆಯಾಗಿದ್ದ ಗೌರವ ಡಾಕ್ಟರೇಟ್‌ ಪದವಿಯನ್ನು ಇಂದು ನಡೆದ ಘಟಿಕೋತ್ಸವದಲ್ಲಿ ಸ್ವೀಕರಿಸಿದ್ದಾರೆ. ಜೊತೆಗೆ ಗೌರವ ಡಾಕ್ಟರೇಟ್‌ಗೆ ಆಯ್ಕೆಯಾಗಿದ್ದ ಸಾರಿಗೆ ಎಂಜಿನಿಯರ್‌ ಬಾಬು ಕೆ.ವಿರೇಗೌಡ ಅವರು ಗೈರಾಗಿದ್ದರು.

ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್‌ ಅವರು ಈ ಬಾರಿಯ ಘಟಿಕೋತ್ಸವದಲ್ಲಿ ಪದವಿ ಪ್ರದಾನ ಮಾಡಿದ್ದು, ನವದೆಹಲಿಯ ಎಐಐಎಂಎಸ್‌ನ ಸಂಶೋಧಕ ಪ್ರಾಧ್ಯಾಪಕ ಟಿ.ಸಿ.ಸಿಂಗ್‌ ಅವರು ಘಟಿಕೋತ್ಸವದ ಭಾಷಣ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಎನ್‌.ಕೆ.ಲೋಕನಾಥ್‌ ಹಾಗೂ ಕುಲಸಚಿವರಾದ ಪ್ರೊ.ಎನ್‌.ನಾಗರಾಜ್‌ ಮತ್ತು ವಿ.ಆರ್‌.ಶೈಲಜಾ ಉಪಸ್ಥಿತರಿದ್ದರು.

 

ಅರ್ಚನ ಎಸ್‌ ಎಸ್

Recent Posts

ಬಂಡೀಪುರದಲ್ಲಿ ಅಂತರಾಷ್ಟ್ರೀಯ ಬಿಗ್‌ ಕ್ಯಾಟ್‌ ಶೃಂಗಸಭೆ : 23 ದೇಶದ ವಿಜ್ಞಾನಿಗಳು ಭಾಗಿ

ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿಯಲ್ಲಿ ಅಂತರಾಷ್ಟ್ರೀಯ ಬಿಗ್ ಕ್ಯಾಟ್ಸ್ ಅಲಯನ್ಸ್ ಶೃಂಗಸಭೆಯಲ್ಲಿಂದು…

28 mins ago

ಜೋಡಿಲಿಂಗ ಶ್ರೀ ಮಹದೇಶ್ವರ ದೇವಸ್ಥಾನ ಉದ್ಘಾಟನೆ : ಸಾವಿರಾರು ಮಂದಿ ದರ್ಶನ, ಕೊಂಡೋತ್ಸವದಲ್ಲಿ ಭಕ್ತಿಪರವಶ

ಮೈಸೂರು : ತಾಲ್ಲೂಕಿನ ಜಯಪುರ ಹೋಬಳಿಯ ಮಂಡನಹಳ್ಳಿ ಗ್ರಾಮದಲ್ಲಿ ನವೀಕರಣಗೊಂಡ ಜೋಡಿಲಿಂಗ ಶ್ರೀ ಮಹದೇಶ್ವರ ದೇವಸ್ಥಾನದ ಉದ್ಘಾಟನಾ ಸಮಾರಂಭವು ಭಕ್ತಿಯ…

52 mins ago

ಬೆಂಗಳೂರು | ಮಾಂಜಾ ದಾರಕ್ಕೆ ಸಿಲುಕಿ ಬೈಕ್‌ ಸವಾರ ಸಾವು

ಬೆಂಗಳೂರು : ಬೀದರ್‌ನಲ್ಲಿ ಗಾಳಿ ಪಟ ಹಾರಿಸಲು ಬಳಸಿದ್ದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರನೊಬ್ಬ ಮೃತಪಟ್ಟಿದ್ದ ಪ್ರಕರಣಕ್ಕೆ…

1 hour ago

ಕೇಂದ್ರ ಬಜೆಟ್‌ ದೇಶದ ಅಭಿವೃದ್ಧಿಗೆ ಪೂರಕ : ಡಾ. ಸಿ.ಎನ್.ಅಶ್ವತ್ಥ ನಾರಾಯಣ

ಮಂಡ್ಯ : ಆಡಳಿತದಲ್ಲಿ ಸುಧಾರಣೆಗೆ ಹೆಚ್ಚಿನ ಒತ್ತು ನೀಡಿ ಸ್ವಾವಲಂಬಿ ಮತ್ತು ಆತ್ಮನಿರ್ಭರ ಭಾರತ ಗುರಿಯಾಗಿಸಿಕೊಂಡು ಉದ್ಯೋಗ, ಕೃಷಿ ಉತ್ಪಾದನೆ,…

2 hours ago

ನಂಜನಗೂಡು ದೊಡ್ಡ ಜಾತ್ರೆಗೆ ಸಿದ್ಧತೆ : ಭಕ್ತರ ಸೌಕರ್ಯಕ್ಕೆ ಶಾಸಕ ದರ್ಶನ್ ಧ್ರುವನಾರಾಯಣ್ ಸೂಚನೆ

ನಂಜನಗೂಡು : ಮಾರ್ಚ್‌ 30 ರಂದು ನಡೆಯುವ ಶ್ರೀಕಂಠೇಶ್ವರ ದೇವಾಲಯದ ದೊಡ್ಡ ಜಾತ್ರೆಗೆ ಬರುವ ಭಕ್ತಾದಿಗಳಿಗೆ ಯಾವುದೇ ತೊಂದರೆ ಆಗದಂತೆ…

2 hours ago

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ ; ಪರಿಶೀಲಿಸಿ ತೀರ್ಮಾನ : ಸಿಎಂ ಸಿದ್ದರಾಮಯ್ಯ

ಹರಿಹರ : ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪಿಸಲು ಬೇಡಿಕೆಯಿದ್ದು ಅದನ್ನು ಪರಿಶೀಲಿಸಿ ಸರ್ಕಾರ ತೀರ್ಮಾನ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

2 hours ago