ಮೈಸೂರು ನಗರ

ಮೈಸೂರು ವಿ.ವಿ.ಘಟಿಕೋತ್ಸವ: ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಗೈರು

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದಲ್ಲಿ 105ನೇ ಘಟಿಕೋತ್ಸವ ಇಂದು ನಡೆದಿದ್ದು, ಪದವಿ ಪ್ರದಾನ ಮಾಡಬೇಕಿದ್ದ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಗೈರು ಹಾಜರಾಗಿದ್ದಾರೆ.

ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಇಂದು(ಜನವರಿ.18) 105ನೇ ಘಟಿಕೋತ್ಸವವನ್ನು ಆಯೋಜಿಸಲಾಗಿತ್ತು. ಈ ಘಟಿಕೋತ್ಸವದಲ್ಲಿ ಸುಮಾರು 31,689 ವಿದ್ಯಾರ್ಥಿಗಳಿಗೆ ವಿವಿಧ ಪದವಿಗಳನ್ನು ಪ್ರದಾನ ಮಾಡಲಾಗುವುದು ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ತಿಳಿಸಿದ್ದರು. ಆದರೆ ಈ ಘಟಿಕೋತ್ಸವದಲ್ಲಿ ಪದವಿ ಪ್ರದಾನ ಮಾಡಬೇಕಿದ್ದ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರು ಗೈರು ಹಾಜರಾಗಿದ್ದಾರೆ.

ಈ ಘಟಿಕೊತ್ಸವದಲ್ಲಿ ಮಾಜಿ ಸಂಸದ ಎ.ಸಿ.ಷಣ್ಮೂಗಂ ಮತ್ತು ಶಾಹೀನ್‌ ಮಜೀದ್‌ ಅವರಿಗೆ ಗೌರವ ಡಾಕ್ಟರೇಟ್‌ ಪದವಿ ಪ್ರದಾನ ಮಾಡಲಾಯಿತು. ಇನ್ನೂ ರಾಜ್ಯಸಭಾ ಸದಸ್ಯರಾದ ಸುಧಾ ಮೂರ್ತಿ ಅವರಿಗೆ 2020ರಲ್ಲಿ ಘೋಷಣೆಯಾಗಿದ್ದ ಗೌರವ ಡಾಕ್ಟರೇಟ್‌ ಪದವಿಯನ್ನು ಇಂದು ನಡೆದ ಘಟಿಕೋತ್ಸವದಲ್ಲಿ ಸ್ವೀಕರಿಸಿದ್ದಾರೆ. ಜೊತೆಗೆ ಗೌರವ ಡಾಕ್ಟರೇಟ್‌ಗೆ ಆಯ್ಕೆಯಾಗಿದ್ದ ಸಾರಿಗೆ ಎಂಜಿನಿಯರ್‌ ಬಾಬು ಕೆ.ವಿರೇಗೌಡ ಅವರು ಗೈರಾಗಿದ್ದರು.

ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್‌ ಅವರು ಈ ಬಾರಿಯ ಘಟಿಕೋತ್ಸವದಲ್ಲಿ ಪದವಿ ಪ್ರದಾನ ಮಾಡಿದ್ದು, ನವದೆಹಲಿಯ ಎಐಐಎಂಎಸ್‌ನ ಸಂಶೋಧಕ ಪ್ರಾಧ್ಯಾಪಕ ಟಿ.ಸಿ.ಸಿಂಗ್‌ ಅವರು ಘಟಿಕೋತ್ಸವದ ಭಾಷಣ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಎನ್‌.ಕೆ.ಲೋಕನಾಥ್‌ ಹಾಗೂ ಕುಲಸಚಿವರಾದ ಪ್ರೊ.ಎನ್‌.ನಾಗರಾಜ್‌ ಮತ್ತು ವಿ.ಆರ್‌.ಶೈಲಜಾ ಉಪಸ್ಥಿತರಿದ್ದರು.

 

ಅರ್ಚನ ಎಸ್‌ ಎಸ್

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

7 hours ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

7 hours ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

7 hours ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

8 hours ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

17 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

17 hours ago