ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಯಾವುದೇ ತಪ್ಪು ಮಾಡಿಲ್ಲ. ಹಾಗಾಗಿ ಅವರು ಧೈರ್ಯದಿಂದ ಇದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿ ಮಾಧ್ಯಮವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದೇ ಅಸಂವಿಧಾನಿಕ. ಹೀಗಾಗಿ ಸಿಎಂ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದರು.
ರಾಜ್ಯಪಾಲರು ಕಾನೂನು ಬದ್ಧವಾಗಿ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದರೆ ರಾಜೀನಾಮೆ ಕೊಡಬಹುದಿತ್ತು. ಆದರೆ ಇದು ಪ್ರಜಾಪ್ರಭುತ್ವ ವಿರೋಧಿ ನಡೆ. ಬಿಜೆಪಿಗರು ಅಧಿಕಾರ ದುರುಪಯೋಗಪಡಿಸಿಕೊಂಡು ಏಕಚಕ್ರಾಧಿಪತ್ಯ ಸ್ಥಾಪಿಸಲು ಹೊರಟಿದ್ದಾರೆ ಎಂದು ಆರೋಪಿಸಿದರು.
ಸಿಎಂ ಸಿದ್ದರಾಮಯ್ಯರ ಪರ ಇಡೀ ಕಾಂಗ್ರೆಸ್ ಪಕ್ಷ ಇದೆ. ನನ್ನ ತಾಯಿ ಎಂದೂ ಕೂಡ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ಈ ಪ್ರಕರಣದಲ್ಲಿ ಅವರ ಹೆಸರನ್ನು ಅನಗತ್ಯವಾಗಿ ತಂದಿರುವುದು ಅವರಿಗೂ ಬೇಸರವಾಗಿದೆ. ಅವರು ಕೂಡ ಇದರ ವಿರುದ್ಧ ಹೋರಾಡಲಿದ್ದಾರೆ ಎಂದರು.
ಇನ್ನು ನ್ಯಾಯಾಂಗ ವ್ಯವಸ್ಥೆಯಲ್ಲಿ ಖಂಡಿತ ನಮಗೆ ನ್ಯಾಯ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಮನಗರ: ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದ ನಟ ದಿಲೀಪ್ ರಾಜ್ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ರಾಮನಗರ ತಾಲ್ಲೂಕಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಂಬಾಡಿ ಗ್ರಾಮದಲ್ಲಿನ ಪುರಾತನ…
ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕಿ ಸೋನಿಗಾ ಗಾಂಧೀ ಅವರು ನಿಯಮಿತ ವೈದ್ಯಕೀಯ ತಪಾಸಣೆಗೆ ತೆರಳಿದ್ದರು. ಇದೀಗ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.…
ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದ ಪರಿಣಾಮ ವೈದ್ಯಕೀಯ ಕೋರ್ಸ್ಗಳ ಪ್ರವೇಶಾತಿಗೆ ಕಳೆದ ಮೇ.3ರಂದು ನಡೆದಿದ್ದ ನೀಟ್- ಯುಜಿ ಮರುಪರೀಕ್ಷೆಯ ದಿನಾಂಕವನ್ನು…
ಬೆಂಗಳೂರು: ಡೀಸೆಲ್ ಬೆಲೆ ಹೆಚ್ಚಾದರೆ ಸಾರಿಗೆ ಸಂಸ್ಥೆಗಳಿಗೆ ಹೊರೆಯಾಗಲಿದೆ. ಬಸ್ ಪ್ರಯಾಣ ದರ ಏರಿಕೆ ಬಗ್ಗೆ ಸದ್ಯಕ್ಕೆ ಯಾವುದೇ ಚಿಂತನೆ…
ಮೈಸೂರು: ನೀಟ್ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಮೈಸೂರು ಯೂತ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಸಂಸದ…