ಮೈಸೂರು: ಮುಡಾದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಮೈಸೂರಲ್ಲಿ ಬೃಹತ್ ಪ್ರತಿಭಟನೆ ಮಾಡುತ್ತಿದೆ. ಪ್ರತಿಭಟನೆಯಲ್ಲಿ ಭಾಗಿಯಾದ ಸಂಸದ ಯದುವೀರ್ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸರ್ಕಾರದ ಆಡಳಿತ ಯಂತ್ರ ಸಂಪೂರ್ಣ ವಿಫಲವಾಗಿದೆ. ಡೆಂಗ್ಯೂ ಬಗ್ಗೆಯು ಸಹ ಮುನ್ನೆಚ್ಚರಿಕೆ ಕ್ರಮ ತೆಗದುಕೊಂಡಿಲ್ಲ. ಗುಂಡಿ ಮುಚ್ಚಲು ಸರ್ಕಾರದ ಬಳಿ ಹಣವಿಲ್ಲ. ಖಜಾನೆ ಸಂಪೂರ್ಣ ಬರಿದಾಗಿದೆ ಎಂದು ವಾಗ್ದಾಳಿ ನಡೆಸಿದರು.
ಮೈಸೂರು ಸಂಸ್ಥಾನದಿಂದ ಇಂದಿನವರೆಗೂ ರಾಜ್ಯ ಪ್ರಗತಿಪರವಾಗಿತ್ತು. ಇದೀಗ ರಾಜ್ಯ ಆರ್ಥಿಕವಾಗಿ ಹಿಂದುಳಿಯುತ್ತಿದೆ. ಗ್ಯಾರಂಟಿ ಯೋಜನೆಗಾಗಿ ಸರ್ಕಾರದ ಖಜಾನೆ ಖಾಲಿ ಆಗಿದೆ. ಈ ಭ್ರಷ್ಟ ಸರ್ಕಾರದಿಂದ ರಾಜ್ಯದಲ್ಲಿ ಭಷ್ಟ್ರಚಾರ ತಾಂಡವವಾಡ್ತಿದೆ ಎಂದು ಟೀಕಿಸಿದರು.
ಸಿಎಂ ಅವರು ಮೈಸೂರನ್ನು ಪ್ರತಿಷ್ಠೆಯಾಗಿ ತೆಗೆದುಕೊಳ್ತಾರೆ. ಆದರೆ ಭ್ರಷ್ಟಚಾರ ಕಡಿಮೆ ಮಾಡಲು ಪ್ರತಿಷ್ಠೆ ಇಲ್ಲ. ಮುಡಾ ಹಗರಣ ಸಿಬಿಐಗೆ ವಹಿಸಬೇಕು. ಈ ಬಗ್ಗೆ ಸಂಪೂರ್ಣ ತನಿಖೆ ಆಗುವವರೆಗೂ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…
ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…
ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…