ಮೈಸೂರು ನಗರ

ಸರ್ಕಾರ ಮಕ್ಕಳಿಗೆ ವೈಚಾರಿಕ ಶಿಕ್ಷಣ ನೀಡಲಿ: ಪ್ರೊ.ಕೆ.ಎಸ್ ಭಗವಾನ್

ಮೈಸೂರು : ಸರ್ಕಾರ ಸರ್ಕಾರಿ ಶಾಲೆಗಳ ಮುಚ್ಚುವ ಬದಲು, ಉನ್ನತಿಕರಣಗೊಳಿಸಿ ವೈಚಾರಿಕ ಶಿಕ್ಷಣ ನೀಡುವಂತಗಲಿ ಎಂದು ಚಿಂತಕ ಪ್ರೊ. ಕೆ ಎಸ್ ಭಗವಾನ್ ಕರೆ ನೀಡಿದರು.

ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುವ ಮಕ್ಕಳು ಸರ್ಕಾರ ಹಾಗೂ ದಾನಿಗಳು ನೀಡುವ ಸವಲತ್ತುಗಳನ್ನು ಸದುಪಯೋಗ ಪಡಿಸಿಕೊಂಡು ಶೈಕ್ಷಣಿಕವಾಗಿ ಪ್ರಗತಿ ಸಾಧಿಸುವಂತೆ ಅವರು ಪ್ರತಿಪಾದಿಸಿದರು.

ಗುರು ನಮನ ಸಮಿತಿ ವತಿಯಿಂದ ಪ್ರೊ. ಬಿ ಪಿ ಮಹೇಶ್ ಚಂದ್ರ ಗುರು ಅವರ 69ನೇ ಹುಟ್ಟುಹಬ್ಬದ ಸ್ಮರಣಾರ್ಥಿವಾಗಿ ಜಯದೇವನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಮತ್ತು ಲೇಖನಿ ಸಾಮಗ್ರಿಗಳನ್ನು ನೀಡುವ ಮೂಲಕ ಆಚರಿಸಲಾಯಿತು.

ಚಿಂತಕ ಪ್ರೊ. ಕೆ ಎಸ್ ಭಗವಾನ್ ಅವರು ಮಕ್ಕಳಿಗೆ ಪುಸ್ತಕಗಳನ್ನು ನೀಡಿ ಮಾತನಾಡಿದ ಅವರು ಉತ್ತಮ ಶಿಕ್ಷಣ ಪಡೆಯುವ ಮಕ್ಕಳು ದೇಶಕ್ಕೆ ಆಸ್ತಿಯಾಗುವ ರೀತಿಯಲ್ಲಿ ಬೆಳೆಯಬೇಕು ಎಂದು ತಿಳಿಸಿದರು.

ಮುಖ್ಯ ಅತಿಥಿಯಾಗಿ ಭಾಗಿಯಾಗಿದ್ದ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ನಿವೃತ್ತ ಅಧಿಕಾರಿ ಡಾ. ಸುಧಾ ಅವರು ಪ್ರತಿಯೊಬ್ಬ ವಿದ್ಯಾರ್ಥಿಯೂ ಹುಟ್ಟುಹಬ್ಬದ ದಿನದಂದು ಒಂದು ಗಿಡ ನೆಡವುದರ ಮೂಲಕ ಆಚರಿಸಿಕೊಳ್ಳಬೇಕು. ಮಕ್ಕಳು ಮೊಬೈಲ್ ನೋಡುವ ಗೀಳಿಗೆ ಬೀಳಬಾರದು ಬದಲಾಗಿ ಪರಿಸರ ಸಂರಕ್ಷಣೆ ಮಾಡಲು ಹೆಚ್ಚು ಆಸಕ್ತಿ ಬೆಳಿಸಿಕೊಳ್ಳಬೇಕು ಎಂದು ತಿಳಿಸಿದರು.

ಪ್ರಾಸ್ತವಿಕ ನುಡಿಗಳನ್ನಾಡಿದ ಡಾ. ದಿಲೀಪ್ ನರಸಯ್ಯ. ಎಂ ಅವರು ಪ್ರೊ. ಮಹೇಶ್ ಚಂದ್ರ ಗುರು ಅವರು ಬದುಕಿರುವವರೆಗೂ ಶೈಕ್ಷಣಿಕ ಮತ್ತು ಸಾಮಾಜಿಕ ಹೋರಾಟದ ಮೂಲಕ ವಿದ್ಯಾರ್ಥಿ ಸಮೂಹ ಮತ್ತು ಸಮಾಜವನ್ನು ಎಚ್ಚರಿಸುತ್ತಿದ್ದರು. ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಲು ಓದು, ಬರಹ ಮತ್ತು ಕಠಿಣ ಶ್ರಮವಿದ್ದರೆ ಮಾತ್ರ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಲು ಸಾಧ್ಯ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಪ್ರೊ. ಗುರು ಅವರ ಪತ್ನಿ ಪ್ರೊ. ಹೇಮಾವತಿ ಸಿ ಎಲ್ಲಾ ಮಕ್ಕಳಿಗೆ ಸಿಹಿ ಹಂಚಿದರು. ಶಾಲೆಯ ಎಂ, ಎಸ್ ಡಿ ಎಂ ಸಿ ಅಧ್ಯಕ್ಷ ಪುಟ್ಟರಾಜು, ವಿಶ್ವಜ್ಞಾನಿ ಅಂಬೇಡ್ಕರ್ ಸಂಘದ ಅಧ್ಯಕ್ಷ ಕೃಷ್ಣ, ಶ್ರೀಮತಿ ಲಕ್ಷ್ಮಿ, ಶಾಲೆಯ ಮುಖ್ಯಸ್ಥರಾದ ಬಿ ಜಯಂತಿ ಅವರು ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಾವೇರಿ ಕೊಳ್ಳದ ರೈತರಿಗೆ 4 ಕಟ್ಟು ನೀರು ; ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…

5 hours ago

ಮೈಸೂರು | ಭಾರತ್ ಜೋಡೋ ನೋಂದಣಿಗೆ ಚಾಲನೆ

ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…

6 hours ago

ಎಂಡಿಎ ಬದಲಿ ನಿವೇಶನ ಹಂಚಿಕೆ ರದ್ದುಪಡಿಸಿ ಸರ್ಕಾರ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…

6 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

9 hours ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

11 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

12 hours ago