ಮೈಸೂರು : ಸರ್ಕಾರ ಸರ್ಕಾರಿ ಶಾಲೆಗಳ ಮುಚ್ಚುವ ಬದಲು, ಉನ್ನತಿಕರಣಗೊಳಿಸಿ ವೈಚಾರಿಕ ಶಿಕ್ಷಣ ನೀಡುವಂತಗಲಿ ಎಂದು ಚಿಂತಕ ಪ್ರೊ. ಕೆ ಎಸ್ ಭಗವಾನ್ ಕರೆ ನೀಡಿದರು.
ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುವ ಮಕ್ಕಳು ಸರ್ಕಾರ ಹಾಗೂ ದಾನಿಗಳು ನೀಡುವ ಸವಲತ್ತುಗಳನ್ನು ಸದುಪಯೋಗ ಪಡಿಸಿಕೊಂಡು ಶೈಕ್ಷಣಿಕವಾಗಿ ಪ್ರಗತಿ ಸಾಧಿಸುವಂತೆ ಅವರು ಪ್ರತಿಪಾದಿಸಿದರು.
ಗುರು ನಮನ ಸಮಿತಿ ವತಿಯಿಂದ ಪ್ರೊ. ಬಿ ಪಿ ಮಹೇಶ್ ಚಂದ್ರ ಗುರು ಅವರ 69ನೇ ಹುಟ್ಟುಹಬ್ಬದ ಸ್ಮರಣಾರ್ಥಿವಾಗಿ ಜಯದೇವನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಮತ್ತು ಲೇಖನಿ ಸಾಮಗ್ರಿಗಳನ್ನು ನೀಡುವ ಮೂಲಕ ಆಚರಿಸಲಾಯಿತು.
ಚಿಂತಕ ಪ್ರೊ. ಕೆ ಎಸ್ ಭಗವಾನ್ ಅವರು ಮಕ್ಕಳಿಗೆ ಪುಸ್ತಕಗಳನ್ನು ನೀಡಿ ಮಾತನಾಡಿದ ಅವರು ಉತ್ತಮ ಶಿಕ್ಷಣ ಪಡೆಯುವ ಮಕ್ಕಳು ದೇಶಕ್ಕೆ ಆಸ್ತಿಯಾಗುವ ರೀತಿಯಲ್ಲಿ ಬೆಳೆಯಬೇಕು ಎಂದು ತಿಳಿಸಿದರು.
ಮುಖ್ಯ ಅತಿಥಿಯಾಗಿ ಭಾಗಿಯಾಗಿದ್ದ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ನಿವೃತ್ತ ಅಧಿಕಾರಿ ಡಾ. ಸುಧಾ ಅವರು ಪ್ರತಿಯೊಬ್ಬ ವಿದ್ಯಾರ್ಥಿಯೂ ಹುಟ್ಟುಹಬ್ಬದ ದಿನದಂದು ಒಂದು ಗಿಡ ನೆಡವುದರ ಮೂಲಕ ಆಚರಿಸಿಕೊಳ್ಳಬೇಕು. ಮಕ್ಕಳು ಮೊಬೈಲ್ ನೋಡುವ ಗೀಳಿಗೆ ಬೀಳಬಾರದು ಬದಲಾಗಿ ಪರಿಸರ ಸಂರಕ್ಷಣೆ ಮಾಡಲು ಹೆಚ್ಚು ಆಸಕ್ತಿ ಬೆಳಿಸಿಕೊಳ್ಳಬೇಕು ಎಂದು ತಿಳಿಸಿದರು.
ಪ್ರಾಸ್ತವಿಕ ನುಡಿಗಳನ್ನಾಡಿದ ಡಾ. ದಿಲೀಪ್ ನರಸಯ್ಯ. ಎಂ ಅವರು ಪ್ರೊ. ಮಹೇಶ್ ಚಂದ್ರ ಗುರು ಅವರು ಬದುಕಿರುವವರೆಗೂ ಶೈಕ್ಷಣಿಕ ಮತ್ತು ಸಾಮಾಜಿಕ ಹೋರಾಟದ ಮೂಲಕ ವಿದ್ಯಾರ್ಥಿ ಸಮೂಹ ಮತ್ತು ಸಮಾಜವನ್ನು ಎಚ್ಚರಿಸುತ್ತಿದ್ದರು. ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಲು ಓದು, ಬರಹ ಮತ್ತು ಕಠಿಣ ಶ್ರಮವಿದ್ದರೆ ಮಾತ್ರ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಲು ಸಾಧ್ಯ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಪ್ರೊ. ಗುರು ಅವರ ಪತ್ನಿ ಪ್ರೊ. ಹೇಮಾವತಿ ಸಿ ಎಲ್ಲಾ ಮಕ್ಕಳಿಗೆ ಸಿಹಿ ಹಂಚಿದರು. ಶಾಲೆಯ ಎಂ, ಎಸ್ ಡಿ ಎಂ ಸಿ ಅಧ್ಯಕ್ಷ ಪುಟ್ಟರಾಜು, ವಿಶ್ವಜ್ಞಾನಿ ಅಂಬೇಡ್ಕರ್ ಸಂಘದ ಅಧ್ಯಕ್ಷ ಕೃಷ್ಣ, ಶ್ರೀಮತಿ ಲಕ್ಷ್ಮಿ, ಶಾಲೆಯ ಮುಖ್ಯಸ್ಥರಾದ ಬಿ ಜಯಂತಿ ಅವರು ಇದ್ದರು.
ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ ಮೈಸೂರಿನ ಮುಖ್ಯ ರೈಲು ನಿಲ್ದಾಣದಿಂದ ಬೆಳಿಗ್ಗೆ ೮.೩೫ ಕ್ಕೆ ಹೊರಡುವ ಮಾಲ್ಗುಡಿ ಎಕ್ಸ್ಪ್ರೆಸ್…
ತಾನೊಬ್ಬ ಪ್ರಗತಿಪರ, ಜಾತ್ಯತೀತ, ಬಂಡಾಯಗಾರ ಅಂತ ತನ್ನ ನಗಾರಿಯನ್ನು ತಾನೇ ಬಾರಿಸುವಷ್ಟು ಅಸೂಕ್ಷ್ಮತೆ ಅವರಿಗಿರಲಿಲ್ಲ. ಅದನ್ನೆಲ್ಲಾ ಬದುಕಿ ತೋರಿಸಿದ್ದರು ಎಸ್.ಗಂಗಾಧರಯ್ಯ…
ಬರಹ ಮತ್ತು ರೇಖಾಚಿತ್ರ: ಎಂ ಎಸ್ ಪ್ರಕಾಶ್ ಬಾಬು ಮೇಲ್ವರ್ಗದಿಂದಲೇ ಬಂದ ಶಿವಪ್ರಸಾದರು ವಿಶೇಷವಾಗಿ ಉಳಿಯುವುದು ಅವರ ರಾಜಕೀಯ ಸಾಮಾಜಿಕ…
ಶೇಷಾದ್ರಿ ಗಂಜೂರು ಸರಿಯಾಗಿ ಇನ್ನೂರೈವತ್ತು ವರ್ಷಗಳ ಹಿಂದೆ, ೧೭೭೬ರ ಜುಲೈ ೪ರಂದು, ಅಮೆರಿಕದ ಫಿಲಡೆಲ್ಛಿಯಾ ನಗರದಲ್ಲಿ ಒಗ್ಗೂಡಿದ್ದ ೫೬ ಜನ…
ಎಸ್ಐಆರ್ ಪ್ರಕ್ರಿಯೆ ಪ್ರಾರಂಭವಾದ ನಂತರ ಮಾಧ್ಯಮಗಳಲ್ಲಿ ಕೆಲವು ಬಿಎಲ್ಒಗಳು ನಿವಾಸಿಗಳ ಸ್ಥಳಕ್ಕೆ ಬಾರದೆ ಅವರಿದ್ದ ಕಡೆಗೇ ಕರೆಸಿಕೊಂಡು ಕೆಲಸ ನಿರ್ವಹಿಸುವ…
ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ನಾಡಹಬ್ಬ ದಸರಾ ೧೬೧೦ ರಲ್ಲಿ ಪ್ರಾರಂಭವಾಗಿ, ಇಲ್ಲಿನ ಸಂಸ್ಕೃತಿಗಳನ್ನು ಅಳವಡಿಸಿಕೊಂಡು ಆಚರಿಸುತ್ತಿರುವುದು ಎಲ್ಲರಿಗೂ ತಿಳಿದಿರುವ ಸಂಗತಿ.ಇತ್ತೀಚಿನ…