ಮೈಸೂರು: ನಾಳೆ ಹಾಗೂ ನಾಡಿದ್ದು ಗೌರಿ-ಗಣೇಶ ಹಬ್ಬದ ಸಂಭ್ರಮ ಮನೆಮಾಡಲಿದೆ. ಈ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನ ಜನತೆ ಹಬ್ಬ ಆಚರಣೆಗೆ ಸಕಲ ರೀತಿಯಲ್ಲೂ ಸಜ್ಜಾಗಿದ್ದಾರೆ.
ಈಗಾಗಲೇ ಮಾರುಕಟ್ಟೆಯಲ್ಲಿ ವಿಘ್ನ ನಿವಾರಕನ ಮಣ್ಣಿನ ಮೂರ್ತಿಗಳು ಹಾಗೂ ಗೌರಿಯ ಮೂರ್ತಿಗಳು ಎಲ್ಲರ ಕಣ್ಮನ ಸೆಳೆಯುತ್ತಿದ್ದು, ಜನತೆ ಖರೀದಿ ಮಾಡುವ ಭರದಲ್ಲಿದ್ದಾರೆ.
ಇದರ ಜೊತೆಗೆ ವಿಧ ವಿಧದ ಹೂವು ಹಾಗೂ ಹಣ್ಣುಗಳನ್ನು ಕೂಡ ಕೊಂಡುಕೊಳ್ಳುತ್ತಿದ್ದು, ಮೈಸೂರಿನ ದೇವರಾಜ ಮಾರುಕಟ್ಟೆಯಲ್ಲಿ ಕಾಲಿಡಲು ಜಾಗವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ.
ಸಂಜೆಯ ವೇಳೆಗೆ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಮಾರುಕಟ್ಟೆಗೆ ಬರಲಿದ್ದು, ವ್ಯಾಪಾರ ಬಲು ಜೋರಾಗಿಯೇ ನಡೆಯುತ್ತಿದೆ.
ಇನ್ನು ಗಣೇಶೋತ್ಸವಕ್ಕೆ ಪ್ರತಿ ಹಳ್ಳಿಗಳಲ್ಲೂ ಯುವಕರು ಸಜ್ಜಾಗುತ್ತಿದ್ದು, ಪೆಂಡಾಲ್ಗಳ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದಾರೆ.
ಈ ಬಾರಿ ಅದ್ಧೂರಿ ಹಾಗೂ ಪರಿಸರ ಸ್ನೇಹಿ ಗಣೇಶೋತ್ಸವ ಆಚರಿಸಲು ಸಾರ್ವಜನಿಕರು ಒಲವು ತೋರಿದ್ದಾರೆ ಎನ್ನಲಾಗುತ್ತಿದೆ.
ಈ ಬಾರಿ ವಿಶೇಷವೆಂದರೆ ಎಲ್ಲೆಡೆ ಕೂಡ ರಾಮನ ಭಂಗಿಯಲ್ಲಿ ನಿಂತಿರುವ ಗಣಪತಿ ಮೂರ್ತಿಗಳು ಎಲ್ಲರ ಗಮನ ಸೆಳೆಯುತ್ತಿರುವುದು ವಿಶೇಷವೆನಿಸಿದೆ.
ಹೊಸದಿಲ್ಲಿ : ವಿವಾಹಪೂರ್ವ ದೈಹಿಕ ಸಂಬಂಧಗಳಲ್ಲಿ ಅತ್ಯಂತ ಜಾಗರೂಕತೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ. ಮದುವೆಯ ಸುಳ್ಳು…
ಮೈಸೂರು : ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ಎಕ್ಸ್ (X, ಹಿಂದಿನ ಟ್ವಿಟರ್) ಇಂದು ಸಂಜೆ (ಫೆಬ್ರವರಿ 16)…
ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ…
ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…
ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…
ನಾಸಿಕ್ : ಕರ್ನಾಟಕ-ಗೋವಾ ಗಡಿಯ ಚೋರ್ಲಾ ಘಾಟ್ನಲ್ಲಿ 2025ರ ಅಕ್ಟೋಬರ್ನಲ್ಲಿ ಸಂಚಲನ ಸೃಷ್ಟಿಸಿದ್ದ 400 ಕೋಟಿ ರೂಪಾಯಿ ದರೋಡೆ ಪ್ರಕರಣವೇ…