ಮೈಸೂರು: ನಾಳೆ ಹಾಗೂ ನಾಡಿದ್ದು ಗೌರಿ-ಗಣೇಶ ಹಬ್ಬದ ಸಂಭ್ರಮ ಮನೆಮಾಡಲಿದೆ. ಈ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನ ಜನತೆ ಹಬ್ಬ ಆಚರಣೆಗೆ ಸಕಲ ರೀತಿಯಲ್ಲೂ ಸಜ್ಜಾಗಿದ್ದಾರೆ.
ಈಗಾಗಲೇ ಮಾರುಕಟ್ಟೆಯಲ್ಲಿ ವಿಘ್ನ ನಿವಾರಕನ ಮಣ್ಣಿನ ಮೂರ್ತಿಗಳು ಹಾಗೂ ಗೌರಿಯ ಮೂರ್ತಿಗಳು ಎಲ್ಲರ ಕಣ್ಮನ ಸೆಳೆಯುತ್ತಿದ್ದು, ಜನತೆ ಖರೀದಿ ಮಾಡುವ ಭರದಲ್ಲಿದ್ದಾರೆ.
ಇದರ ಜೊತೆಗೆ ವಿಧ ವಿಧದ ಹೂವು ಹಾಗೂ ಹಣ್ಣುಗಳನ್ನು ಕೂಡ ಕೊಂಡುಕೊಳ್ಳುತ್ತಿದ್ದು, ಮೈಸೂರಿನ ದೇವರಾಜ ಮಾರುಕಟ್ಟೆಯಲ್ಲಿ ಕಾಲಿಡಲು ಜಾಗವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ.
ಸಂಜೆಯ ವೇಳೆಗೆ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಮಾರುಕಟ್ಟೆಗೆ ಬರಲಿದ್ದು, ವ್ಯಾಪಾರ ಬಲು ಜೋರಾಗಿಯೇ ನಡೆಯುತ್ತಿದೆ.
ಇನ್ನು ಗಣೇಶೋತ್ಸವಕ್ಕೆ ಪ್ರತಿ ಹಳ್ಳಿಗಳಲ್ಲೂ ಯುವಕರು ಸಜ್ಜಾಗುತ್ತಿದ್ದು, ಪೆಂಡಾಲ್ಗಳ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದಾರೆ.
ಈ ಬಾರಿ ಅದ್ಧೂರಿ ಹಾಗೂ ಪರಿಸರ ಸ್ನೇಹಿ ಗಣೇಶೋತ್ಸವ ಆಚರಿಸಲು ಸಾರ್ವಜನಿಕರು ಒಲವು ತೋರಿದ್ದಾರೆ ಎನ್ನಲಾಗುತ್ತಿದೆ.
ಈ ಬಾರಿ ವಿಶೇಷವೆಂದರೆ ಎಲ್ಲೆಡೆ ಕೂಡ ರಾಮನ ಭಂಗಿಯಲ್ಲಿ ನಿಂತಿರುವ ಗಣಪತಿ ಮೂರ್ತಿಗಳು ಎಲ್ಲರ ಗಮನ ಸೆಳೆಯುತ್ತಿರುವುದು ವಿಶೇಷವೆನಿಸಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…