ಮೈಸೂರು: ನಾಡದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಇಂದು ಶ್ರೀ ಚಾಮುಂಡೇಶ್ವರಿ ಅಮ್ಮನವರ ಭವ್ಯ ರಥೋತ್ಸವ ಅದ್ಧೂರಿಯಾಗಿ ಜರುಗಿತು.
ಇಂದು ಬೆಳಿಗ್ಗೆ 10.05ಕ್ಕೆ ಆರಂಭವಾದ ರಥೋತ್ಸವಕ್ಕೆ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಚಾಲನೆ ನೀಡಿದರು.
ಚಾಮುಂಡಿಬೆಟ್ಟದಲ್ಲಿ ರಥೋತ್ಸವದ ಅಂಗವಾಗಿ ಇಂದು ಮುಂಜಾನೆಯಿಂದಲೇ ಚಾಮುಂಡಿ ತಾಯಿಗೆ ದೇವಾಲಯದಲ್ಲಿ ವಿಶೇಷ ಪೂಜೆಗಳು ನೆರವೇರಿದವು. ದೇವಾಲಯದ ಗರ್ಭಗುಡಿಯಲ್ಲಿ ವಿರಾಜಮಾನಳಾಗಿರುವ ಚಾಮುಂಡೇಶ್ವರಿ ಮೂಲ ವಿಗ್ರಹಕ್ಕೆ ಸಿಂಹವಾಹಿನಿಯ ಅಲಂಕಾರ ಮಾಡಲಾಗಿತ್ತು.
ಇದನ್ನು ಓದಿ : ಅ.6 ರಂದು ಚಾಮುಂಡಿ ಬೆಟ್ಟದಲ್ಲಿ ರಥೋತ್ಸವ
ರಥೋತ್ಸವದಲ್ಲಿ ಮೆರವಣಿಗೆಗೆ ಸಿದ್ಧಪಡಿಸಿದ ಉತ್ಸವಮೂರ್ತಿಯು ವಜ್ರಾಭರಣಗಳ ಅಲಂಕಾರದಿಂದ ಕಂಗೊಳಿಸುತ್ತಿತ್ತು. ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್, ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮತ್ತು ಅವರ ಪತ್ನಿ ತ್ರಿಷಿಕಾ ಕುಮಾರಿ ಸೇರಿದಂತೆ ರಾಜವಂಶಸ್ಥರು ರಥೋತ್ಸವದಲ್ಲಿ ಭಾಗಿಯಾಗಿದ್ದರು.
ದೇವಾಲಯದ ಸುತ್ತಲೂ ಒಂದು ಸುತ್ತು ಪ್ರದಕ್ಷಿಣೆ ಹಾಕಿದ ರಥದಲ್ಲಿ ನಾಡದೇವತೆಯ ಉತ್ಸವಮೂರ್ತಿಯನ್ನು ಇಟ್ಟು ಮೆರವಣಿಗೆ ಮಾಡಲಾಯಿತು. ರಥೋತ್ಸವಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾದರು.
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…