ಮೈಸೂರು : ಸಮಾಜ ಕಲ್ಯಾಣ ಇಲಾಖೆಯು ಸಂಶೋಧನಾ ವಿದ್ಯಾರ್ಥಿಗಳ ಎಸ್.ಸಿ.ಎಸ್.ಪಿ – ಟಿ.ಎಸ್.ಪಿ ಅನುದಾನದ ಸಂಬಂಧವಾಗಿ ಹೊರಡಿಸಿದ್ದ ಹೊಸ ಆದೇಶನ್ನು ಹರಿದು ಹಾಕುವ ಮೂಲಕ ಸಂಶೋಧಕರು ಪ್ರತಿಭಟನೆ ನಡೆಸಿದರು.
ಶುಕ್ರವಾರ ಬೆಳಿಗ್ಗೆ ಮೈಸೂರು ವಿಶ್ವವಿದ್ಯಾನಿಲಯ ಸಂಶೋಧಕರ ಸಂಘದ ವತಿಯಿಂದ ಮಾನಸ ಗಂಗೋತ್ರಿಯ ಅಂಬೇಡ್ಕರ್ ಪುತ್ಥಳಿ ಮುಂಭಾಗ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಸಂಶೋಧನಾ ವಿದ್ಯಾರ್ಥಿಗಳು ಆದೇಶದ ಪ್ರತಿಯನ್ನು ಹರಿದುಹಾಕುವ ಮೂಲಕ ಆಕ್ರೋಶವನ್ನು ವ್ಯಕ್ತಪಡಿಸಿದರು.
ಸರ್ಕಾರದ ವತಿಯಿಂದ ದಲಿತ ಸಂಶೋಧನಾ ವಿದ್ಯಾರ್ಥಿಗಳಿಗೆ ಪ್ರತೀ ವರ್ಷವು ನೀಡುತ್ತಿದ್ದ ಎಎಸ್.ಸಿ.ಎಸ್.ಪಿ, ಟಿ.ಎಸ್.ಪಿ ಅನುದಾನವನ್ನು ಈ ಸಾಲಿನಿಂದ ತಡೆ ಹಿಡಿದು, ಹೊಸ ಆದೇಶವನ್ನು ಹೊರಡಿಸಿದ್ದು, ಹೊಸ ಆದೇಶವು ಅವೈಜ್ಞಾನಿಕ ಮತ್ತು ದಲಿತ ವಿದ್ಯಾರ್ಥಿಗಳನ್ನು ಹತ್ತಿಕ್ಕುವ ಹುನ್ನಾರ ಅಡಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವರ ವಿರುದ್ಧ ಧಿಕ್ಕಾರ ಕೂಗಿ ಕಿಡಿಕಾರಿದರು.
ಈ ಆವೈಜ್ಞಾನಿಕ ಆದೇಶವನ್ನು ರದ್ದುಪಡಿಸಿ, ಸಂಶೋಧನಾ ವಿದ್ಯಾರ್ಥಿಗಳಿಗೆ ನ್ಯಾಯವಾಗಿ ದೊರಕಬೇಕಾದ ಅನುದಾನ ನೀಡುವಂತೆ ಒತ್ತಾಯಿಸಲಾಯಿತು. ಒಂದು ವೇಳೆ ಹೊಸ ಆದೇಶವನ್ನು ಹಿಂಪಡೆಯದಿದ್ದರೇ ರಾಜ್ಯದಾದ್ಯಂತ ಪ್ರತಿ ವಿವಿಗಳಲ್ಲೂ ಪ್ರತಿಭಟನೆ ರೂಪಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸಂಶೋಧಕರ ಸಂಘದ ಅಧ್ಯಕ್ಷ ಶಿವಶಂಕರ್, ಸದಸ್ಯರುಗಳಾದ ಕಾರ್ತಿಕ್ ಲಿಂಗರಾಜು, ಪ್ರದೀಪ್ ಮುಮ್ಮಡಿ, ವರಹಳ್ಳಿ ಆನಂದ, ಲಿಂಪನ್ ರಾಜು, ಕಿರಣ್, ನಟರಾಜ್, ಪೇಪರ್ ಬಾಬು, ಶಶಿಕುಮಾರ್ ದೀಪು ಪ್ರಸಾದ್, ವಿಶ್ವಪ್ರಸಾದ್, ಮಲ್ಲೇಶ್, ಶೇಷಣ್ಣ, ಧೀರಜ್, ಯೋಗೇಶ್ ಮುಂತಾದವರು ಹಾಜರಿದ್ದರು.
1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…
ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…