ಮೈಸೂರು : ಸಮಾಜ ಕಲ್ಯಾಣ ಇಲಾಖೆಯು ಸಂಶೋಧನಾ ವಿದ್ಯಾರ್ಥಿಗಳ ಎಸ್.ಸಿ.ಎಸ್.ಪಿ – ಟಿ.ಎಸ್.ಪಿ ಅನುದಾನದ ಸಂಬಂಧವಾಗಿ ಹೊರಡಿಸಿದ್ದ ಹೊಸ ಆದೇಶನ್ನು ಹರಿದು ಹಾಕುವ ಮೂಲಕ ಸಂಶೋಧಕರು ಪ್ರತಿಭಟನೆ ನಡೆಸಿದರು.
ಶುಕ್ರವಾರ ಬೆಳಿಗ್ಗೆ ಮೈಸೂರು ವಿಶ್ವವಿದ್ಯಾನಿಲಯ ಸಂಶೋಧಕರ ಸಂಘದ ವತಿಯಿಂದ ಮಾನಸ ಗಂಗೋತ್ರಿಯ ಅಂಬೇಡ್ಕರ್ ಪುತ್ಥಳಿ ಮುಂಭಾಗ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಸಂಶೋಧನಾ ವಿದ್ಯಾರ್ಥಿಗಳು ಆದೇಶದ ಪ್ರತಿಯನ್ನು ಹರಿದುಹಾಕುವ ಮೂಲಕ ಆಕ್ರೋಶವನ್ನು ವ್ಯಕ್ತಪಡಿಸಿದರು.
ಸರ್ಕಾರದ ವತಿಯಿಂದ ದಲಿತ ಸಂಶೋಧನಾ ವಿದ್ಯಾರ್ಥಿಗಳಿಗೆ ಪ್ರತೀ ವರ್ಷವು ನೀಡುತ್ತಿದ್ದ ಎಎಸ್.ಸಿ.ಎಸ್.ಪಿ, ಟಿ.ಎಸ್.ಪಿ ಅನುದಾನವನ್ನು ಈ ಸಾಲಿನಿಂದ ತಡೆ ಹಿಡಿದು, ಹೊಸ ಆದೇಶವನ್ನು ಹೊರಡಿಸಿದ್ದು, ಹೊಸ ಆದೇಶವು ಅವೈಜ್ಞಾನಿಕ ಮತ್ತು ದಲಿತ ವಿದ್ಯಾರ್ಥಿಗಳನ್ನು ಹತ್ತಿಕ್ಕುವ ಹುನ್ನಾರ ಅಡಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವರ ವಿರುದ್ಧ ಧಿಕ್ಕಾರ ಕೂಗಿ ಕಿಡಿಕಾರಿದರು.
ಈ ಆವೈಜ್ಞಾನಿಕ ಆದೇಶವನ್ನು ರದ್ದುಪಡಿಸಿ, ಸಂಶೋಧನಾ ವಿದ್ಯಾರ್ಥಿಗಳಿಗೆ ನ್ಯಾಯವಾಗಿ ದೊರಕಬೇಕಾದ ಅನುದಾನ ನೀಡುವಂತೆ ಒತ್ತಾಯಿಸಲಾಯಿತು. ಒಂದು ವೇಳೆ ಹೊಸ ಆದೇಶವನ್ನು ಹಿಂಪಡೆಯದಿದ್ದರೇ ರಾಜ್ಯದಾದ್ಯಂತ ಪ್ರತಿ ವಿವಿಗಳಲ್ಲೂ ಪ್ರತಿಭಟನೆ ರೂಪಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸಂಶೋಧಕರ ಸಂಘದ ಅಧ್ಯಕ್ಷ ಶಿವಶಂಕರ್, ಸದಸ್ಯರುಗಳಾದ ಕಾರ್ತಿಕ್ ಲಿಂಗರಾಜು, ಪ್ರದೀಪ್ ಮುಮ್ಮಡಿ, ವರಹಳ್ಳಿ ಆನಂದ, ಲಿಂಪನ್ ರಾಜು, ಕಿರಣ್, ನಟರಾಜ್, ಪೇಪರ್ ಬಾಬು, ಶಶಿಕುಮಾರ್ ದೀಪು ಪ್ರಸಾದ್, ವಿಶ್ವಪ್ರಸಾದ್, ಮಲ್ಲೇಶ್, ಶೇಷಣ್ಣ, ಧೀರಜ್, ಯೋಗೇಶ್ ಮುಂತಾದವರು ಹಾಜರಿದ್ದರು.
ಬೀಜಿಂಗ್: ಮಧ್ಯ ಚೀನಾದ ಪಟಾಕಿ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ 21 ಜನರು ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು…
ಶ್ರೀರಂಗಪಟ್ಟಣ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಗಂಜಾಮ್ನಲ್ಲಿ ನಡೆದಿದೆ. ಮೈಸೂರು ಮೂಲದ…
ಜಿಲ್ಲೆಯಲ್ಲಿ ೧೧ ಮಂದಿ ಸಾವು ಮುಂಜಾಗ್ರತೆ ಪಾಲಿಸುವುದು ಅಗತ್ಯ ಮೈಸೂರು: ಬಿರು ಬೇಸಿಗೆ ಸಂದರ್ಭದಲ್ಲಿ ನದಿ, ಕೆರೆ ಹಾಗೂ ಕಾಲುವೆಗಳಲ್ಲಿ…
ಪ್ರೊ.ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮೈಸೂರು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರಿಗೆ ಎಸ್.ಎಂ.ಕೃಷ್ಣ ಪ್ರಶಸ್ತಿ ಪುರಸ್ಕಾರ ಮಂಡ್ಯ ಜಿಲ್ಲೆಯ…
ಚಿರಂಜೀವಿ ಸಿ.ಹುಲ್ಲಹಳ್ಳಿ ೩,೭೫೦ ರೂ., ಶೇ.೧೮ರಷ್ಟು ಜಿಎಸ್ಟಿ ಸೇರಿ ಒಟ್ಟು ೪,೭೫೦ ರೂ.ಶುಲ್ಕ ಪ್ರತಿ ಶಿಬಿರಾರ್ಥಿಗೆ ನಿಗದಿ ಮೈಸೂರು: ಮಲ್ಲಿಗೆ…
ಕೆ.ಬಿ.ರಮೇಶನಾಯಕ ಬಯೋಮೆಟ್ರಿಕ್ ಹಾಜರಾತಿ ಜತೆಗೆ ಜಿಪಿಎಸ್ ವ್ಯವಸ್ಥೆ ಜಾರಿಗೆ ಚಿಂತನೆ ಹಾಜರಾತಿ ಹಾಕಿ ಬೇಕಾಬಿಟ್ಟಿ ಓಡಾಡುವ ಸಿಬ್ಬಂದಿಗಳಿಗೆ ಬ್ರೇಕ್ ಮೈಸೂರು:…