h c mahadevappa reaction on nikhil kumaraswamy statement
ಮೈಸೂರು: ರಣದೀಪ್ ಸಿಂಗ್ ಸುರ್ಜೇವಾಲಾ ರಾಜ್ಯದ ಸೂಪರ್ ಸಿಎಂ ಎಂಬ ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಟ್ವೀಟ್ ಮಾಡಿರುವ ವಿಚಾರಕ್ಕೆ ಸಚಿವ ಎಚ್.ಸಿ.ಮಹದೇವಪ್ಪ ಕಿಡಿಕಾರಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾವ ಸೂಪರ್ ಸಿಎಂಗಳು ಇಲ್ಲ. ರಾಜ್ಯದಲ್ಲಿ ಇರುವುದು ಒಬ್ಬರೇ, ಸಿಎಂ ಅದು ಸಿದ್ದರಾಮಯ್ಯ. ನಮ್ಮಲ್ಲಿ ಅಸಂವಿಧಾನಿಕವಾದ ಯಾವ ಹುದ್ದೆಗಳು ಇಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಟ್ವೀಟ್ಗೆ ಕಿಡಿಕಾರಿದರು.
ಇನ್ನು ಸಚಿವರನ್ನ ಪ್ರತ್ಯೇಕವಾಗಿ ಕರೆದು ರಣದೀಪ್ ಸಿಂಗ್ ಸುರ್ಜೇವಾಲಾ ಸಭೆ ನಡೆಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸುರ್ಜೇವಾಲಾ ನಮ್ಮ ರಾಜ್ಯದ ಉಸ್ತುವಾರಿ. ಸಭೆ ಕರೆಯಲು ಅವರಿಗೆ ಎಲ್ಲಾ ರೀತಿಯ ಹಕ್ಕಿದೆ. ಹೀಗಾಗಿ ಸಭೆ ನಡೆಸುತ್ತಿದ್ದಾರೆ. ಇದರಲ್ಲಿ ಯಾವ ತಪ್ಪು ಇಲ್ಲ. ಯಾವ ಸಚಿವರು ಸಹ ಈ ಸಭೆಗೆ ವಿರೋಧ ವ್ಯಕ್ತಪಡಿಸಿಲ್ಲ. ನನ್ನನ್ನು ಸಭೆಗೆ ಕರೆದಿದ್ದರು. ನಾನು ಇಂಡಿ ಕಾರ್ಯಕ್ರಮ ಮುಗಿಸಿ ಆ ನಂತರ ಭೇಟಿಯಾಗಿ ಮಾತನಾಡಿದೆ. ಇದರಲ್ಲಿ ತಪ್ಪು ಹುಡುಕುವುದು ಸರಿಯಲ್ಲ ಎಂದು ಸ್ಪಷ್ಟನೆ ನೀಡಿದರು.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…