ಮೈಸೂರು ನಗರ

ರಾಜ್ಯದಲ್ಲಿ ಇರುವುದು ಒಬ್ಬರೇ ಸಿಎಂ, ಅದು ಸಿದ್ದರಾಮಯ್ಯ: ಸಚಿವ ಎಚ್.ಸಿ.ಮಹದೇವಪ್ಪ

ಮೈಸೂರು: ರಣದೀಪ್‌ ಸಿಂಗ್‌ ಸುರ್ಜೇವಾಲಾ ರಾಜ್ಯದ ಸೂಪರ್‌ ಸಿಎಂ ಎಂಬ ಜೆಡಿಎಸ್‌ ನಾಯಕ ನಿಖಿಲ್‌ ಕುಮಾರಸ್ವಾಮಿ ಟ್ವೀಟ್‌ ಮಾಡಿರುವ ವಿಚಾರಕ್ಕೆ ಸಚಿವ ಎಚ್.ಸಿ.ಮಹದೇವಪ್ಪ ಕಿಡಿಕಾರಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾವ ಸೂಪರ್ ಸಿಎಂಗಳು ಇಲ್ಲ. ರಾಜ್ಯದಲ್ಲಿ ಇರುವುದು ಒಬ್ಬರೇ, ಸಿಎಂ ಅದು ಸಿದ್ದರಾಮಯ್ಯ. ನಮ್ಮಲ್ಲಿ ಅಸಂವಿಧಾನಿಕವಾದ ಯಾವ ಹುದ್ದೆಗಳು ಇಲ್ಲ ಎಂದು ನಿಖಿಲ್‌ ಕುಮಾರಸ್ವಾಮಿ ಟ್ವೀಟ್‌ಗೆ ಕಿಡಿಕಾರಿದರು.

ಇನ್ನು ಸಚಿವರನ್ನ ಪ್ರತ್ಯೇಕವಾಗಿ ಕರೆದು ರಣದೀಪ್‌ ಸಿಂಗ್‌ ಸುರ್ಜೇವಾಲಾ ಸಭೆ ನಡೆಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸುರ್ಜೇವಾಲಾ ನಮ್ಮ ರಾಜ್ಯದ ಉಸ್ತುವಾರಿ. ಸಭೆ ಕರೆಯಲು ಅವರಿಗೆ ಎಲ್ಲಾ ರೀತಿಯ ಹಕ್ಕಿದೆ. ಹೀಗಾಗಿ ಸಭೆ ನಡೆಸುತ್ತಿದ್ದಾರೆ. ಇದರಲ್ಲಿ ಯಾವ ತಪ್ಪು ಇಲ್ಲ. ಯಾವ ಸಚಿವರು ಸಹ ಈ ಸಭೆಗೆ ವಿರೋಧ ವ್ಯಕ್ತಪಡಿಸಿಲ್ಲ. ನನ್ನನ್ನು ಸಭೆಗೆ ಕರೆದಿದ್ದರು. ನಾನು ಇಂಡಿ ಕಾರ್ಯಕ್ರಮ ಮುಗಿಸಿ ಆ ನಂತರ ಭೇಟಿಯಾಗಿ ಮಾತನಾಡಿದೆ. ಇದರಲ್ಲಿ ತಪ್ಪು ಹುಡುಕುವುದು ಸರಿಯಲ್ಲ ಎಂದು ಸ್ಪಷ್ಟನೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಜಿರಳೆಗಳು ಎದ್ದಿವೆ, ವ್ಯವಸ್ಥೆಯ ಗಟಾರ ತೊಳೆಯುವವರು ಯಾರು?

ಎಸ್.ಸಿ. ದಿನೇಶ್ ಕುಮಾರ್, ಹಿರಿಯ ಪತ್ರಕರ್ತರು ಕಾಕ್ರೋಚ್ ಜನತಾ ಪಾರ್ಟಿ ನಮ್ಮ ದೇಶದ ಯುವಜನರ ಹತಾಶೆ, ಸಿಟ್ಟು, ಆಕ್ರೋಶಕ್ಕೆ  ಹಿಡಿದ…

4 mins ago

ಅಕಾಲಿಕ ಮಳೆ; ಮಾವು ಇಳುವರಿ ಕುಂಠಿತ

ಚಿರಂಜೀವಿ ಸಿ. ಹುಲ್ಲಹಳ್ಳಿ ಬೆಳೆಗಾರ ಕಂಗಾಲು; ನಷ್ಟಕ್ಕೆ ಪರಿಹಾರ ಕಲ್ಪಿಸಲು ರೈತರ ಒತ್ತಾಯ ಮೈಸೂರು: ಮಳೆ ಕೊರತೆ ಮತ್ತು ಹವಾಮಾನ ವೈಪರೀತ್ಯದಿಂದಾಗಿ…

14 mins ago

ಗೂಡ್ಸ್ ಆಟೋ ಉರುಳಿ ಬಿದ್ದು ಮಹಿಳೆ ಸಾವು: ಹಲವರಿಗೆ ಗಾಯ

ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…

10 hours ago

ಹಾಸನ: ಆಟೋ ಪಲ್ಟಿಯಾಗಿ ತಾಯಿ-ಮಗ ಸಾವು

ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…

14 hours ago

ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ವಿಚಾರ: ಅರ್ಚಕ ಸುನೀಲ್ ದೀಕ್ಷಿತ್ ಪ್ರತಿಕ್ರಿಯೆ

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…

14 hours ago