ಮೈಸೂರು ನಗರ

ಜುಲೈ.19ರ ಸಮಾವೇಶವು ಶಕ್ತಿ ಪ್ರದರ್ಶಿಸುವ ಕಾರ್ಯಕ್ರಮವಲ್ಲ: ಸಚಿವ ಎಚ್.ಸಿ.ಮಹದೇವಪ್ಪ

ಮೈಸೂರು: ಜುಲೈ.19ರ ಸಮಾವೇಶವು ಸಿದ್ದರಾಮಯ್ಯ ಶಕ್ತಿ ಪ್ರದರ್ಶನದ ಸಮಾವೇಶ ಅಲ್ಲವೇ ಅಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜುಲೈ.19ರ ಸಮಾವೇಶ ಸಿದ್ದರಾಮಯ್ಯ ಶಕ್ತಿ ಪ್ರದರ್ಶನದ ಸಮಾವೇಶ ಅಲ್ಲ. ಶಕ್ತಿ ಪ್ರದರ್ಶಿಸುವ ಯಾವ ಅಗತ್ಯವೂ ನಮಗೆ ಇಲ್ಲ. ಕಳೆದ 2023ರಲ್ಲೇ ಜನ ನಮಗೆ ಶಕ್ತಿ ಕೊಟ್ಟಿದ್ದಾರೆ. ಮತ್ತೆ ಮತ್ತೆ ಯಾಕೆ ಶಕ್ತಿ ಪ್ರದರ್ಶನ ಮಾಡಬೇಕು. ಇದು ಶಕ್ತಿ ಪ್ರದರ್ಶಿಸುವ ಕಾಲ ಅಲ್ಲ. ಇದು ಸಾಧನೆ ಹೇಳುವ ಕಾಲ. ನಾವು ಏನು ಅಭಿವೃದ್ಧಿ ಮಾಡಿದ್ದೇವೆ ಹಾಗೂ ಮುಂದಿನ ದಿನಗಳಲ್ಲಿ ಮಾಡುತ್ತೇವೆ ಎಂಬುದನ್ನು ತೋರಿಸಲು ಸಮಾವೇಶ ಮಾಡುತ್ತಿದ್ದೇವೆ ಎಂದು ಹೇಳಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಸಿದ್ದರಾಮಯ್ಯ ಕಾಲದಲ್ಲಿ ಆದ ಅಭಿವೃದ್ಧಿ ಯಾವ ಕಾಲದಲ್ಲೂ ಆಗಿಲ್ಲ. ಯಾವ ಸರ್ಕಾರವೂ ಮಾಡದ ಕೆಲಸವನ್ನು ಮೈಸೂರಿಗೆ ನಮ್ಮ ಸರ್ಕಾರ ಮಾಡಿದೆ. ಕೇವಲ ಮೈಸೂರು ನಗರಕ್ಕಾಗಿ 2569 ಕೋಟಿ ಕೊಟ್ಟಿದ್ದೇವೆ. ಇದು ಸಾಧನೆ ಅಲ್ವಾ ಎಂದು ಪ್ರಶ್ನೆ ಮಾಡಿದ ಅವರು, ಗ್ಯಾರಂಟಿಯಿಂದ ಅನುದಾನ ಇಲ್ಲ ಎಂಬುದು ಸುಳ್ಳು. ಗ್ಯಾರಂಟಿ ಜೊತೆಯೇ ನಾವು ಅಭಿವೃದ್ಧಿ ಮಾಡುತ್ತಿದ್ದೇವೆ. ಈ ಸಾಧನ ಸಮಾವೇಶಕ್ಕೆ ವಿರೋಧ ಪಕ್ಷದ ಶಾಸಕರು ಹಾಗೂ ಸಂಸದರಿಗೆ ಆಹ್ವಾನ ಕೊಟ್ಟಿದ್ದೇವೆ. ಶಿಷ್ಟಾಚಾರ ಪಾಲನೆ ಮಾಡಿದ್ದೇವೆ. ಬರುವುದು ಬಿಡುವುದು ಅವರಿಗೆ ಬಿಟ್ಟಿದ್ದು ಎಂದರು.

ಆಂದೋಲನ ಡೆಸ್ಕ್

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

3 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

3 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

3 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

3 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

4 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago