H C Mahadevappa spoke on sadhana samavesha 19th july mysore
ಮೈಸೂರು: ಜುಲೈ.19ರ ಸಮಾವೇಶವು ಸಿದ್ದರಾಮಯ್ಯ ಶಕ್ತಿ ಪ್ರದರ್ಶನದ ಸಮಾವೇಶ ಅಲ್ಲವೇ ಅಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜುಲೈ.19ರ ಸಮಾವೇಶ ಸಿದ್ದರಾಮಯ್ಯ ಶಕ್ತಿ ಪ್ರದರ್ಶನದ ಸಮಾವೇಶ ಅಲ್ಲ. ಶಕ್ತಿ ಪ್ರದರ್ಶಿಸುವ ಯಾವ ಅಗತ್ಯವೂ ನಮಗೆ ಇಲ್ಲ. ಕಳೆದ 2023ರಲ್ಲೇ ಜನ ನಮಗೆ ಶಕ್ತಿ ಕೊಟ್ಟಿದ್ದಾರೆ. ಮತ್ತೆ ಮತ್ತೆ ಯಾಕೆ ಶಕ್ತಿ ಪ್ರದರ್ಶನ ಮಾಡಬೇಕು. ಇದು ಶಕ್ತಿ ಪ್ರದರ್ಶಿಸುವ ಕಾಲ ಅಲ್ಲ. ಇದು ಸಾಧನೆ ಹೇಳುವ ಕಾಲ. ನಾವು ಏನು ಅಭಿವೃದ್ಧಿ ಮಾಡಿದ್ದೇವೆ ಹಾಗೂ ಮುಂದಿನ ದಿನಗಳಲ್ಲಿ ಮಾಡುತ್ತೇವೆ ಎಂಬುದನ್ನು ತೋರಿಸಲು ಸಮಾವೇಶ ಮಾಡುತ್ತಿದ್ದೇವೆ ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಸಿದ್ದರಾಮಯ್ಯ ಕಾಲದಲ್ಲಿ ಆದ ಅಭಿವೃದ್ಧಿ ಯಾವ ಕಾಲದಲ್ಲೂ ಆಗಿಲ್ಲ. ಯಾವ ಸರ್ಕಾರವೂ ಮಾಡದ ಕೆಲಸವನ್ನು ಮೈಸೂರಿಗೆ ನಮ್ಮ ಸರ್ಕಾರ ಮಾಡಿದೆ. ಕೇವಲ ಮೈಸೂರು ನಗರಕ್ಕಾಗಿ 2569 ಕೋಟಿ ಕೊಟ್ಟಿದ್ದೇವೆ. ಇದು ಸಾಧನೆ ಅಲ್ವಾ ಎಂದು ಪ್ರಶ್ನೆ ಮಾಡಿದ ಅವರು, ಗ್ಯಾರಂಟಿಯಿಂದ ಅನುದಾನ ಇಲ್ಲ ಎಂಬುದು ಸುಳ್ಳು. ಗ್ಯಾರಂಟಿ ಜೊತೆಯೇ ನಾವು ಅಭಿವೃದ್ಧಿ ಮಾಡುತ್ತಿದ್ದೇವೆ. ಈ ಸಾಧನ ಸಮಾವೇಶಕ್ಕೆ ವಿರೋಧ ಪಕ್ಷದ ಶಾಸಕರು ಹಾಗೂ ಸಂಸದರಿಗೆ ಆಹ್ವಾನ ಕೊಟ್ಟಿದ್ದೇವೆ. ಶಿಷ್ಟಾಚಾರ ಪಾಲನೆ ಮಾಡಿದ್ದೇವೆ. ಬರುವುದು ಬಿಡುವುದು ಅವರಿಗೆ ಬಿಟ್ಟಿದ್ದು ಎಂದರು.
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…