ಮೈಸೂರು ನಗರ

ಸಿಎಂ ಸಿದ್ದರಾಮಯ್ಯ ಕುರ್ಚಿ ಗಟ್ಟಿಯಾಗಿದೆ: ಸಚಿವ ಎಚ್.ಸಿ.ಮಹದೇವಪ್ಪ ಪುನರುಚ್ಛಾರ

ಮೈಸೂರು: ಸಿಎಂ ಸಿದ್ದರಾಮಯ್ಯ ಕುರ್ಚಿ ಗಟ್ಟಿಯಾಗಿದ್ದು, ಯಾವ ಬದಲಾವಣೆ ಕೂಡ ಆಗಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಪುನರುಚ್ಛರಿಸಿದ್ದಾರೆ.

ನವೆಂಬರ್‌ನಲ್ಲಿ ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನು ಕೆಳಗಿಳಿಸಿ ಡಿ.ಕೆ.ಶಿವಕುಮಾರ್‌ ಅಥವಾ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಿಎಂ ಹುದ್ದೆ ನೀಡಲಾಗುತ್ತದೆ ಎಂದು ಎಂಎಲ್‌ಸಿ ಎಚ್.ವಿಶ್ವನಾಥ್‌ ಹೇಳಿದ್ದರು.

ಈ ಬೆನ್ನಲ್ಲೇ ಕಾಂಗ್ರೆಸ್‌ ಪಕ್ಷದಲ್ಲಿ ಭಾರೀ ಸಂಚಲನ ಸೃಷ್ಟಿಯಾಗಿದ್ದು, ನವೆಂಬರ್‌ನಲ್ಲಿ ಸಿಎಂ ಬದಲಾವಣೆ ಆಗುವುದು ನಿಜ ಎಂಬ ಮಾತುಗಳು ಕೇಳಿಬರುತ್ತಿವೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಸಿ.ಮಹದೇವಪ್ಪ ಅವರು, ಸಿಎಂ ಸಿದ್ದರಾಮಯ್ಯ ಖುರ್ಚಿ ಗಟ್ಟಿಯಾಗಿದೆ. ಆದ್ದರಿಂದ ಯಾವ ಬದಲಾವಣೆ ಕೂಡ ಆಗಲ್ಲ. ಅಪರೇಷನ್ ಕಮಲದಿಂದಲೇ ಬಿಜೆಪಿ ಅಧಿಕಾರಕ್ಕೆ ಬಂದಿದ್ದು. ಈಗ ಯಾವ ಅಪರೇಷನ್ ಮಾಡ್ತಾರೆ? ಎಂದು ಪ್ರಶ್ನಿಸಿದ ಅವರು, ಯಾವುದೇ ಬದಲಾವಣೆ ಆಗಲ್ಲ ಎಂದು ಪುನರುಚ್ಛರಿಸಿದರು.

ಇನ್ನು ವಸತಿ ಇಲಾಖೆ ಅಕ್ರಮದ ಕುರಿತು ಶಾಸಕ ಬಿ.ಆರ್.ಪಾಟೀಲ್ ಆಡಿಯೋ ಲೀಕ್ ಆಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಾನು ಕೂಡ ಆಡಿಯೋ ಕೇಳಿಸಿಕೊಂಡಿದ್ದೇನೆ. ಅಕ್ರಮ ಆಗಿದ್ರೆ ಕಾನೂನು ರೀತಿಯಲ್ಲಿ ಕ್ರಮ ಆಗುತ್ತದೆ ಎಂದರು.

ಇನ್ನು ಮೈಸೂರಿನಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಿನ್ನೆ ಘಟನೆ ಬಗ್ಗೆ ನಾನು ಮಾಹಿತಿ ಪಡೆದಿದ್ದೇನೆ. ಮಗುವನ್ನು ಫೈನಾನ್ಸ್‌ ಸಿಬ್ಬಂದಿ ಅಪಹರಣ ಮಾಡಿಲ್ಲ. ಮಗುವನ್ನು ಮನೆಯಿಂದ ಅಪ್ಪ, ಅಮ್ಮನನ್ನು ತೋರಿಸಿ ಎಂದು ಕರೆದುಕೊಂಡು ಹೋಗಿದ್ದಾರೆ. ಈಗಾಗಲೇ ಸುಗ್ರೀವಾಜ್ಞೆ ಜಾರಿಯಲ್ಲಿದೆ. ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಮೇಲೆ ಕಾನೂನು ಕ್ರಮ ಆಗುತ್ತೆ ಎಂದು ಎಚ್ಚರಿಕೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಪ್ರೀತಿ, ಸೌಹಾರ್ದತೆಯ ಸಂದೇಶ ಸಾರುವ ಕ್ರಿಸ್ತ ಜಯಂತಿ

- ಡಾ.ಐ.ಸೇಸುನಾಥನ್ ‘ಒಬ್ಬ ನಿನ್ನ ಬಲಗೆನ್ನೆಗೆ ಹೊಡೆದರೆ ಅವನಿಗೆ ನಿನ್ನ ಇನ್ನೊಂದು ಕೆನ್ನೆಗೂ ಹೊಡೆಯಲು ಅನುವು ಮಾಡಿಕೊಡು; ನಿನ್ನ ಮೇಲಂಗಿಯನ್ನು…

35 mins ago

2025 ಸವಿನೆನಪು: ಸ್ಯಾಂಡಲ್‌ವುಡ್ ಏಳು-ಬೀಳು

‘ಸ್ಯಾಂಡಲ್ ವುಡ್’ ಎಂದೇ ಹೆಸರಾಗಿರುವ ಕನ್ನಡ ಚಿತ್ರರಂಗ ಇಂದು ಭಾರತದ ಒಂದು ಪ್ರಮುಖ ಚಿತ್ರೋದ್ಯಮವಾಗಿ ಬೆಳೆದಿದೆ. ಈ ಮೊದಲು ಪ್ರತಿ…

3 hours ago

ಉದ್ಘಾಟನೆಯಾಗದ ಅಂಬಾರಿ ಖ್ಯಾತಿಯ ಅರ್ಜುನನ ಸ್ಮಾರಕ

ಲಕ್ಷ್ಮಿಕಾಂತ್ ಕೊಮಾರಪ್ಪ ೨೦೨೩ರ ಡಿ.೪ರಂದು ಕಾಡಾನೆ ಕಾರ್ಯಾಚರಣೆ ವೇಳೆ ಮೃತಪಟ್ಟಿದ್ದ ಅರ್ಜುನ; ೨ ವರ್ಷ ಕಳೆದರೂ ಅರ್ಜುನನ ಸ್ಮಾರಕ, ಪ್ರತಿಮೆಗಿಲ್ಲ…

3 hours ago

ಸಾಂಸ್ಕೃತಿಕ ನಗರಿಯಲ್ಲಿ ಕ್ರಿಸ್‌ಮಸ್ ಸಂಭ್ರಮ

ಮೈಸೂರು: ಸಂಭ್ರಮ, ಸಡಗರ, ವಿಶೇಷ ಪ್ರಾರ್ಥನೆಯೊಂದಿಗೆ ಕ್ರೈಸ್ತ ಧರ್ಮದ ದೈವ ಬಾಲಏಸುವಿನ ಜಯಂತಿಯ ಸ್ಮರಣೆಯು ಅದ್ಧೂರಿಯಾಗಿ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ…

3 hours ago

ರಾಗಿ, ಹುರುಳಿ ಒಕ್ಕಣೆಗೆ ರಸ್ತೆಯೇ ಕಣ!

ಪ್ರಶಾಂತ್ ಎಸ್. ಗ್ರಾಮೀಣ ಭಾಗದ ರಸ್ತೆಗಳಲ್ಲಿ ಸಮಸ್ಯೆ ಕಣ್ಣಿಗೆ ದೂಳು ಬಿದ್ದರೆ ಅನಾಹುತ ಸಾಧ್ಯತೆ ವಾಹನ ಸವಾರರಿಗೆ ಸವಾಲು; ಎಚ್ಚರ…

3 hours ago

ಮೈಸೂರು ಕೇಂದ್ರೀಯ ಸಂಪರ್ಕ ಬ್ಯೂರೋ-CBC ಕಚೇರಿ ಸ್ಥಗಿತ ಬೇಡ : ಕೇಂದ್ರ ವಾರ್ತಾ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಸಚಿವ ಎಚ್‌ಡಿಕೆ

ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…

14 hours ago