ಮೈಸೂರು: ಸಿಎಂ ಸಿದ್ದರಾಮಯ್ಯ ಕುರ್ಚಿ ಗಟ್ಟಿಯಾಗಿದ್ದು, ಯಾವ ಬದಲಾವಣೆ ಕೂಡ ಆಗಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಪುನರುಚ್ಛರಿಸಿದ್ದಾರೆ.
ನವೆಂಬರ್ನಲ್ಲಿ ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನು ಕೆಳಗಿಳಿಸಿ ಡಿ.ಕೆ.ಶಿವಕುಮಾರ್ ಅಥವಾ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಿಎಂ ಹುದ್ದೆ ನೀಡಲಾಗುತ್ತದೆ ಎಂದು ಎಂಎಲ್ಸಿ ಎಚ್.ವಿಶ್ವನಾಥ್ ಹೇಳಿದ್ದರು.
ಈ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಭಾರೀ ಸಂಚಲನ ಸೃಷ್ಟಿಯಾಗಿದ್ದು, ನವೆಂಬರ್ನಲ್ಲಿ ಸಿಎಂ ಬದಲಾವಣೆ ಆಗುವುದು ನಿಜ ಎಂಬ ಮಾತುಗಳು ಕೇಳಿಬರುತ್ತಿವೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಅವರು, ಸಿಎಂ ಸಿದ್ದರಾಮಯ್ಯ ಖುರ್ಚಿ ಗಟ್ಟಿಯಾಗಿದೆ. ಆದ್ದರಿಂದ ಯಾವ ಬದಲಾವಣೆ ಕೂಡ ಆಗಲ್ಲ. ಅಪರೇಷನ್ ಕಮಲದಿಂದಲೇ ಬಿಜೆಪಿ ಅಧಿಕಾರಕ್ಕೆ ಬಂದಿದ್ದು. ಈಗ ಯಾವ ಅಪರೇಷನ್ ಮಾಡ್ತಾರೆ? ಎಂದು ಪ್ರಶ್ನಿಸಿದ ಅವರು, ಯಾವುದೇ ಬದಲಾವಣೆ ಆಗಲ್ಲ ಎಂದು ಪುನರುಚ್ಛರಿಸಿದರು.
ಇನ್ನು ವಸತಿ ಇಲಾಖೆ ಅಕ್ರಮದ ಕುರಿತು ಶಾಸಕ ಬಿ.ಆರ್.ಪಾಟೀಲ್ ಆಡಿಯೋ ಲೀಕ್ ಆಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಾನು ಕೂಡ ಆಡಿಯೋ ಕೇಳಿಸಿಕೊಂಡಿದ್ದೇನೆ. ಅಕ್ರಮ ಆಗಿದ್ರೆ ಕಾನೂನು ರೀತಿಯಲ್ಲಿ ಕ್ರಮ ಆಗುತ್ತದೆ ಎಂದರು.
ಇನ್ನು ಮೈಸೂರಿನಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಿನ್ನೆ ಘಟನೆ ಬಗ್ಗೆ ನಾನು ಮಾಹಿತಿ ಪಡೆದಿದ್ದೇನೆ. ಮಗುವನ್ನು ಫೈನಾನ್ಸ್ ಸಿಬ್ಬಂದಿ ಅಪಹರಣ ಮಾಡಿಲ್ಲ. ಮಗುವನ್ನು ಮನೆಯಿಂದ ಅಪ್ಪ, ಅಮ್ಮನನ್ನು ತೋರಿಸಿ ಎಂದು ಕರೆದುಕೊಂಡು ಹೋಗಿದ್ದಾರೆ. ಈಗಾಗಲೇ ಸುಗ್ರೀವಾಜ್ಞೆ ಜಾರಿಯಲ್ಲಿದೆ. ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಮೇಲೆ ಕಾನೂನು ಕ್ರಮ ಆಗುತ್ತೆ ಎಂದು ಎಚ್ಚರಿಕೆ ನೀಡಿದರು.
ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…
ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ…
ಹುಣಸೂರು: ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ ನಡೆದ ಪರಿಣಾಮ ಮೂವರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನ…
ಹುಣಸೂರು: ಪಾಳು ಬಾವಿಗೆ ಬಿದ್ದಿದ್ದ ಕಾಡುಹಂದಿಯನ್ನು ರಕ್ಷಣೆ ಮಾಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಹುಣಸೂರು ತಾಲ್ಲೂಕಿನ ಹನಗೋಡು ಗ್ರಾಮದಲ್ಲಿ…
ನವದೆಹಲಿ: ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಮೇ.1ರಿಂದ ಜಾರಿಗೆ ಬರುವಂತೆ 993ರೂ ಹೆಚ್ಚಳ ಮಾಡಲಾಗಿದೆ. ಬೆಂಗಳೂರಿನಲ್ಲಿ 991…