ಮೈಸೂರು: ಸಿಎಂ ಸಿದ್ದರಾಮಯ್ಯ ಕುರ್ಚಿ ಗಟ್ಟಿಯಾಗಿದ್ದು, ಯಾವ ಬದಲಾವಣೆ ಕೂಡ ಆಗಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಪುನರುಚ್ಛರಿಸಿದ್ದಾರೆ.
ನವೆಂಬರ್ನಲ್ಲಿ ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನು ಕೆಳಗಿಳಿಸಿ ಡಿ.ಕೆ.ಶಿವಕುಮಾರ್ ಅಥವಾ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಿಎಂ ಹುದ್ದೆ ನೀಡಲಾಗುತ್ತದೆ ಎಂದು ಎಂಎಲ್ಸಿ ಎಚ್.ವಿಶ್ವನಾಥ್ ಹೇಳಿದ್ದರು.
ಈ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಭಾರೀ ಸಂಚಲನ ಸೃಷ್ಟಿಯಾಗಿದ್ದು, ನವೆಂಬರ್ನಲ್ಲಿ ಸಿಎಂ ಬದಲಾವಣೆ ಆಗುವುದು ನಿಜ ಎಂಬ ಮಾತುಗಳು ಕೇಳಿಬರುತ್ತಿವೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಅವರು, ಸಿಎಂ ಸಿದ್ದರಾಮಯ್ಯ ಖುರ್ಚಿ ಗಟ್ಟಿಯಾಗಿದೆ. ಆದ್ದರಿಂದ ಯಾವ ಬದಲಾವಣೆ ಕೂಡ ಆಗಲ್ಲ. ಅಪರೇಷನ್ ಕಮಲದಿಂದಲೇ ಬಿಜೆಪಿ ಅಧಿಕಾರಕ್ಕೆ ಬಂದಿದ್ದು. ಈಗ ಯಾವ ಅಪರೇಷನ್ ಮಾಡ್ತಾರೆ? ಎಂದು ಪ್ರಶ್ನಿಸಿದ ಅವರು, ಯಾವುದೇ ಬದಲಾವಣೆ ಆಗಲ್ಲ ಎಂದು ಪುನರುಚ್ಛರಿಸಿದರು.
ಇನ್ನು ವಸತಿ ಇಲಾಖೆ ಅಕ್ರಮದ ಕುರಿತು ಶಾಸಕ ಬಿ.ಆರ್.ಪಾಟೀಲ್ ಆಡಿಯೋ ಲೀಕ್ ಆಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಾನು ಕೂಡ ಆಡಿಯೋ ಕೇಳಿಸಿಕೊಂಡಿದ್ದೇನೆ. ಅಕ್ರಮ ಆಗಿದ್ರೆ ಕಾನೂನು ರೀತಿಯಲ್ಲಿ ಕ್ರಮ ಆಗುತ್ತದೆ ಎಂದರು.
ಇನ್ನು ಮೈಸೂರಿನಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಿನ್ನೆ ಘಟನೆ ಬಗ್ಗೆ ನಾನು ಮಾಹಿತಿ ಪಡೆದಿದ್ದೇನೆ. ಮಗುವನ್ನು ಫೈನಾನ್ಸ್ ಸಿಬ್ಬಂದಿ ಅಪಹರಣ ಮಾಡಿಲ್ಲ. ಮಗುವನ್ನು ಮನೆಯಿಂದ ಅಪ್ಪ, ಅಮ್ಮನನ್ನು ತೋರಿಸಿ ಎಂದು ಕರೆದುಕೊಂಡು ಹೋಗಿದ್ದಾರೆ. ಈಗಾಗಲೇ ಸುಗ್ರೀವಾಜ್ಞೆ ಜಾರಿಯಲ್ಲಿದೆ. ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಮೇಲೆ ಕಾನೂನು ಕ್ರಮ ಆಗುತ್ತೆ ಎಂದು ಎಚ್ಚರಿಕೆ ನೀಡಿದರು.
ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…
ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…
ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…
ಮೈಸೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…
ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ಪರವಾಗಿ ನಮ್ರತೆಯ ಮನವಿ…