H.D. Kote land encroachment issue Janaspandana program
ಮೈಸೂರು: ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ನೇತೃತ್ವದಲ್ಲಿ ನಡೆದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಎಚ್.ಡಿ.ಕೋಟೆ ಜಾಗ ಒತ್ತುವರಿ ವಿಚಾರ ಪ್ರತಿಧ್ವನಿಸಿದೆ.
ಮೈಸೂರಿನ ಜಿಲ್ಲಾ ಸಭಾಂಗಣದಲ್ಲಿಂದು ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ ನಡೆಸಲಾಯಿತು. ಈ ವೇಳೆ ಎಚ್.ಡಿ.ಕೋಟೆಯ ನಿವೃತ್ತ ಇನ್ಸ್ಪೆಕ್ಟರ್ ಎಸ್.ದೊರೆಸ್ವಾಮಿ ಅವರು ಸಚಿವರಿಗೆ ದೂರು ನೀಡಿದರು.
ದೂರಿನಲ್ಲಿ ಕೆರೆ ಒತ್ತುವರಿ ಪ್ರಸ್ತಾಪ ಮಾಡಿದ ಅವರು, ಎಚ್.ಡಿ.ಕೋಟೆ ಹಾಗೂ ಸುತ್ತಮುತ್ತಲು ಅನೇಕ ಜಾಗಗಳು ಒತ್ತುವರಿಯಾಗಿದೆ. ಅನೇಕ ರೆಸಾರ್ಟ್ಗಳು ಹಾಗೂ ಬಾರ್ಗಳು ಪ್ರಾರಂಭವಾಗಿದೆ. ಎಚ್.ಡಿ.ಕೋಟೆಯ ಕೆರೆಯಲ್ಲಿ ಮಳಿಗೆಗಳು ಹಾಗೂ ಕಾಂಗ್ರೆಸ್ ಪಕ್ಷದ ಕಚೇರಿ ಕೂಡ ನಿರ್ಮಾಣವಾಗಿದೆ. ಈ ಹಿಂದೆ ಪ್ರಾಮಾಣಿಕ ಹಾಗೂ ದಕ್ಷ ಐಪಿಎಸ್ ಅಧಿಕಾರಿ ಹರ್ಷಗುಪ್ತ ಸ್ಥಳಕ್ಕೆ ಭೇಟಿ ನೀಡಿ ಸರ್ವೇಗೆ ಮುಂದಾಗಿದ್ದರು. ಅವರ ವರ್ಗಾವಣೆ ನಂತರ ಅದು ಮುಂದುವರಿಯಲಿಲ್ಲ. ಯಾವ ಅಧಿಕಾರಿಗೆ ದೂರು ನೀಡಿದರೂ ಕ್ರಮವಹಿಸುತ್ತಿಲ್ಲ. ಹರ್ಷಗುಪ್ತರಂತಹ ಮತ್ತೊಬ್ಬ ಪ್ರಾಮಾಣಿಕ ಅಧಿಕಾರಿ ಇಲ್ಲಿಯವರೆಗೂ ಜಿಲ್ಲೆಗೆ ಬಂದಿಲ್ಲ ಎಂದು ಹಾಲಿ ಜಿಲ್ಲಾಧಿಕಾರಿ ಮುಂದೆಯೇ ಸಮಸ್ಯೆ ಹೇಳಿಕೊಂಡರು.
ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವರು, ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸರ್ವೇ ನಡೆಸಿ. ಯಾರಿಗೂ ಅನ್ಯಾಯವಾಗದಂತೆ ನೋಡಿಕೊಳ್ಳಿ ಎಂದು ಸೂಚನೆ ನೀಡಿದರು.
ಮೈಸೂರು : ಸಾಂಸ್ಕ ತಿಕ ನಗರಿಯ ಜನತೆಯ ಅನುಕೂಲಕ್ಕಾಗಿ ಮೈಸೂರಿನಿಂದ ಮುತ್ತಿನ ನಗರಿ ಹೈದರಾಬಾದ್ಗೆ ಮತ್ತೊಂದು ವಿಮಾನ ಸಂಚಾರ ಅತಿ…
ನವದೆಹಲಿ : ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ ನೀಡುವ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆ (Women’s Reservation Bill) ಭಾರೀ…
ಟೆಹ್ರಾರ್ : ಇರಾನ್ ಹೊರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಸಂಚಾರಕ್ಕೆ ಪೂರ್ಣ ಮುಕ್ತಿ ನೀಡಿದೆ ಎಂದು ಮಹತ್ವದ ಘೋಷಣೆ ಮಾಡಿದೆ.…
ಹನೂರು : ಕುಡಿಯುವ ನೀರು, ಇ-ಸ್ವತ್ತು, ಪೋಡಿ ಹಾಗೂ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೇರಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ…
ಮೈಸೂರು : ನಗರದಲ್ಲಿರುವ ರೈಲ್ವೇ ಗೂಡ್ಸ್ ಶೆಡನ್ನು ಪಾಂಡವಪುರಕ್ಕೆ ಸ್ಥಳಾಂತರಿಸಲು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿ.ಸೋಮಣ್ಣ ಅವರು ಹುನ್ನಾರ…