H.D. Kote land encroachment issue Janaspandana program
ಮೈಸೂರು: ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ನೇತೃತ್ವದಲ್ಲಿ ನಡೆದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಎಚ್.ಡಿ.ಕೋಟೆ ಜಾಗ ಒತ್ತುವರಿ ವಿಚಾರ ಪ್ರತಿಧ್ವನಿಸಿದೆ.
ಮೈಸೂರಿನ ಜಿಲ್ಲಾ ಸಭಾಂಗಣದಲ್ಲಿಂದು ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ ನಡೆಸಲಾಯಿತು. ಈ ವೇಳೆ ಎಚ್.ಡಿ.ಕೋಟೆಯ ನಿವೃತ್ತ ಇನ್ಸ್ಪೆಕ್ಟರ್ ಎಸ್.ದೊರೆಸ್ವಾಮಿ ಅವರು ಸಚಿವರಿಗೆ ದೂರು ನೀಡಿದರು.
ದೂರಿನಲ್ಲಿ ಕೆರೆ ಒತ್ತುವರಿ ಪ್ರಸ್ತಾಪ ಮಾಡಿದ ಅವರು, ಎಚ್.ಡಿ.ಕೋಟೆ ಹಾಗೂ ಸುತ್ತಮುತ್ತಲು ಅನೇಕ ಜಾಗಗಳು ಒತ್ತುವರಿಯಾಗಿದೆ. ಅನೇಕ ರೆಸಾರ್ಟ್ಗಳು ಹಾಗೂ ಬಾರ್ಗಳು ಪ್ರಾರಂಭವಾಗಿದೆ. ಎಚ್.ಡಿ.ಕೋಟೆಯ ಕೆರೆಯಲ್ಲಿ ಮಳಿಗೆಗಳು ಹಾಗೂ ಕಾಂಗ್ರೆಸ್ ಪಕ್ಷದ ಕಚೇರಿ ಕೂಡ ನಿರ್ಮಾಣವಾಗಿದೆ. ಈ ಹಿಂದೆ ಪ್ರಾಮಾಣಿಕ ಹಾಗೂ ದಕ್ಷ ಐಪಿಎಸ್ ಅಧಿಕಾರಿ ಹರ್ಷಗುಪ್ತ ಸ್ಥಳಕ್ಕೆ ಭೇಟಿ ನೀಡಿ ಸರ್ವೇಗೆ ಮುಂದಾಗಿದ್ದರು. ಅವರ ವರ್ಗಾವಣೆ ನಂತರ ಅದು ಮುಂದುವರಿಯಲಿಲ್ಲ. ಯಾವ ಅಧಿಕಾರಿಗೆ ದೂರು ನೀಡಿದರೂ ಕ್ರಮವಹಿಸುತ್ತಿಲ್ಲ. ಹರ್ಷಗುಪ್ತರಂತಹ ಮತ್ತೊಬ್ಬ ಪ್ರಾಮಾಣಿಕ ಅಧಿಕಾರಿ ಇಲ್ಲಿಯವರೆಗೂ ಜಿಲ್ಲೆಗೆ ಬಂದಿಲ್ಲ ಎಂದು ಹಾಲಿ ಜಿಲ್ಲಾಧಿಕಾರಿ ಮುಂದೆಯೇ ಸಮಸ್ಯೆ ಹೇಳಿಕೊಂಡರು.
ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವರು, ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸರ್ವೇ ನಡೆಸಿ. ಯಾರಿಗೂ ಅನ್ಯಾಯವಾಗದಂತೆ ನೋಡಿಕೊಳ್ಳಿ ಎಂದು ಸೂಚನೆ ನೀಡಿದರು.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…