ಮೈಸೂರು ನಗರ

ರಸ್ತೆ ವಿಷಯದಲ್ಲಿ ಸಿಎಂ ಸಿದ್ದರಾಮಯ್ಯ ಜಾಣ ಮೌನರಾಗಿದ್ದಾರೆ: ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯ

ಮೈಸೂರು: ಕೆಆರ್‌ಎಸ್‌ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ದೇವನೂರು ಬಡಾವಣೆ ಹಾಗೂ ಕೆಸರೆ ಗ್ರಾಮಕ್ಕೆ ಸಿದ್ದರಾಮಯ್ಯ ಹೆಸರನ್ನೇ ಇಡಿ ಎಂದು ವ್ಯಂಗ್ಯವಾಡಿದ್ದಾರೆ.

ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಚರ್ಚೆಯಲ್ಲಿರುವ ಕೆಆರ್‌ಎಸ್‌ ರಸ್ತೆ ಮರುನಾಮಕರಣ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಪ್ರಿನ್ಸೆಸ್‌ ರಸ್ತೆ ಬದಲಾವಣೆ ಮುನ್ನೆಲೆಗೆ ಬಂದಾಗಿನಿಂದಲೂ ಸಿಎಂ ಮೌನವಾಗಿದ್ದಾರೆ. ಸಿಎಂ ರಸ್ತೆ ವಿಷಯದಲ್ಲಿ ಜಾಣ ಮೌನ ತಾಳಿದ್ದಾರೆ. ಮುಡಾದ ಕೆಸರೆ ಗ್ರಾಮ ಬಂತಲ್ಲ ಅದಕ್ಕೂ ಕೂಡ ಸಿದ್ದರಾಮಯ್ಯರ ಹೆಸರಿಡಿ. ಅದನ್ನು ಬಿಟ್ಟು ರಾಜಮನೆತನದ ಹೆಸರು ಯಾಕೆ ತೆಗಿತೀರಾ ಎಂದು ಟಾಂಗ್‌ ನೀಡಿದರು.

ಇನ್ನು ಬಸ್‌ ಪ್ರಯಾಣ ದರ ಏರಿಕೆ ಸಂಬಂಧ ಮಾತನಾಡಿದ ಅವರು, ದರ ಹೆಚ್ಚಳ ಬರೀ ಜನರಿಗೆ ಮಾತ್ರ. ಮಂತ್ರಿಗಳಿಗೆ ದರ ಹೆಚ್ಚಳ ಅನ್ವಯವಾಗಲ್ಲ. ಜನರ ಜೇಬಿಗೆ ಕೈ ಹಾಕಿ ಲೂಟಿ ಮಾಡುತ್ತಿದ್ದಾರೆ. ಇದು ಜನರಿಗೆ ಕಷ್ಟಕೊಟ್ಟು ಖುಷಿ ಪಡುವ ಸರ್ಕಾರ ಎಂದು ಕಿಡಿಕಾರಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗಿ ಮಂತ್ರಿಗಳ ಅಭಿವೃದ್ಧಿಯಾಗುತ್ತಿದೆ. ಜನರ ಅಭಿವೃದ್ಧಿ ಯಾರಿಗೆ ಬೇಕು. ಎಲ್ಲದಕ್ಕೂ ಕೂಡ ಪರ್ಸಂಟೇಜ್‌ ಕೇಳುತ್ತಾರೆ. ಆಶ್ರಯ ಮನೆಗಳಿಗೂ ವಿಧಾನಸಭೆಯಲ್ಲಿ ಈಗ ವಸೂಲಿ ಶುರು ಆಗಿದೆಯಂತೆ ಎಂದು ಗಂಭೀರ ಆರೋಪ ಮಾಡಿದರು.

ಇನ್ನು ಆಪರೇಷನ್‌ ಹಸ್ತದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಆಪರೇಷನ್‌ ಹಸ್ತ ನಡೆಯುತ್ತಲೇ ಇದೆ. ನಮ್ಮಲ್ಲಿ 18 ಜನ ಶಾಸಕರಿದ್ದಾರೆ. ಎಲ್ಲರೂ ಒಟ್ಟಾಗಿದ್ದಾರೆ. ಈ ಬಗ್ಗೆ ಹರೀಶ್‌ ಗೌಡ ಸಹ ಸ್ಪಷ್ಟನೆ ನೀಡಿದ್ದಾರೆ. ಶಾಸಕರು ಅಂದ ಮೇಲೆ ಒತ್ತಡವಂತೂ ಇದ್ದೇ ಇರುತ್ತೆ. ನಮ್ಮ ಶಾಸಕರು ಎಲ್ಲೂ ಹೋಗಲ್ಲ. ನಮ್ಮ ಜೊತೆಯೇ ಇರುತ್ತಾರೆ ಎಂದು ಸ್ಪಷ್ಟಪಡಿಸಿದರು.

ಅರ್ಚನ ಎಸ್‌ ಎಸ್

Recent Posts

ಮತ್ತೆ ಬೆದರಿಕೆ ಒಡ್ಡಿದ ಟ್ರಂಪ್‌ ; ಕ್ಯಾರೆ ಎನ್ನದ ಇರಾನ್‌

ವಾಷಿಂಗ್ಟನ್ : ಹೊರ್ಮುಜ್ ಜಲಸಂಧಿಯನ್ನು ಸಂಚಾರಕ್ಕೆ ಮುಕ್ತಗೊಳಿಸದಿದ್ದರೆ ಇರಾನ್‌ನ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳ ಮೇಲೆ ದಾಳಿ ನಡೆಸುವುದಾಗಿ ಅಮೆರಿಕದ…

2 hours ago

ಶರಣ್ಯ ಸುರಕ್ಷಿತ ; ಅಧಿಕಾರಿ, ಸಿಬ್ಬಂದಿ, ಬುಡಕಟ್ಟು ಜನರಿಗೆ ಅಭಿನಂದನೆ ಸಲ್ಲಿಸಿದ ಖಂಡ್ರೆ

ಬೆಂಗಳೂರು : ಕೊಡಗು ಜಿಲ್ಲೆಯ ತಡಿಯಾಂಡಮೋಳ್ ಶಿಖರಕ್ಕೆ ಕೇರಳದಿಂದ ಚಾರಣಕ್ಕಾಗಿ ಬಂದು ಏಪ್ರಿಲ್ 2 ರಂದು ನಾಪತ್ತೆಯಾಗಿದ್ದ ಜಿ.ಎಸ್. ಶರಣ್ಯ…

2 hours ago

KSOU | ಕುಲಸಚಿವೆಯಾಗಿ ಕೆಎಎಸ್‌ ಅಧಿಕಾರಿ ಕುಸುಮಾಕುಮಾರಿ ನೇಮಕ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಈವರೆಗೆ…

3 hours ago

ಏ.9ರವರೆಗೆ ರಾಜ್ಯಾದ್ಯಂತ ಯಲ್ಲೋ ಅಲರ್ಟ್, ಮಳೆ ಮುನ್ಸೂಚನೆ

ಮೈಸೂರು : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಏ.9ರವರೆಗೆ ಯಲ್ಲೋ…

3 hours ago

ಕಾಂತರಾಜು-ಹೆಗಡೆ ವರದಿಗಳು ಇನ್ನೂ ಸ್ಟೋರೇಜ್‌ನಲ್ಲೇ ಏಕಿದೆ? ; ಕುಮಾರಸ್ವಾಮಿ ಪ್ರಶ್ನೆ

ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು…

3 hours ago

ಅಹಿಂದ ಹತ್ತಿಕ್ಕುತ್ತಿರುವ ಸಿದ್ದರಾಮಯ್ಯ : ಕುಮಾರಸ್ವಾಮಿ ಆರೋಪ

ದಾವಣಗೆರೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ…

4 hours ago