ಮೈಸೂರು ನಗರ

ರಸ್ತೆ ವಿಷಯದಲ್ಲಿ ಸಿಎಂ ಸಿದ್ದರಾಮಯ್ಯ ಜಾಣ ಮೌನರಾಗಿದ್ದಾರೆ: ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯ

ಮೈಸೂರು: ಕೆಆರ್‌ಎಸ್‌ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ದೇವನೂರು ಬಡಾವಣೆ ಹಾಗೂ ಕೆಸರೆ ಗ್ರಾಮಕ್ಕೆ ಸಿದ್ದರಾಮಯ್ಯ ಹೆಸರನ್ನೇ ಇಡಿ ಎಂದು ವ್ಯಂಗ್ಯವಾಡಿದ್ದಾರೆ.

ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಚರ್ಚೆಯಲ್ಲಿರುವ ಕೆಆರ್‌ಎಸ್‌ ರಸ್ತೆ ಮರುನಾಮಕರಣ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಪ್ರಿನ್ಸೆಸ್‌ ರಸ್ತೆ ಬದಲಾವಣೆ ಮುನ್ನೆಲೆಗೆ ಬಂದಾಗಿನಿಂದಲೂ ಸಿಎಂ ಮೌನವಾಗಿದ್ದಾರೆ. ಸಿಎಂ ರಸ್ತೆ ವಿಷಯದಲ್ಲಿ ಜಾಣ ಮೌನ ತಾಳಿದ್ದಾರೆ. ಮುಡಾದ ಕೆಸರೆ ಗ್ರಾಮ ಬಂತಲ್ಲ ಅದಕ್ಕೂ ಕೂಡ ಸಿದ್ದರಾಮಯ್ಯರ ಹೆಸರಿಡಿ. ಅದನ್ನು ಬಿಟ್ಟು ರಾಜಮನೆತನದ ಹೆಸರು ಯಾಕೆ ತೆಗಿತೀರಾ ಎಂದು ಟಾಂಗ್‌ ನೀಡಿದರು.

ಇನ್ನು ಬಸ್‌ ಪ್ರಯಾಣ ದರ ಏರಿಕೆ ಸಂಬಂಧ ಮಾತನಾಡಿದ ಅವರು, ದರ ಹೆಚ್ಚಳ ಬರೀ ಜನರಿಗೆ ಮಾತ್ರ. ಮಂತ್ರಿಗಳಿಗೆ ದರ ಹೆಚ್ಚಳ ಅನ್ವಯವಾಗಲ್ಲ. ಜನರ ಜೇಬಿಗೆ ಕೈ ಹಾಕಿ ಲೂಟಿ ಮಾಡುತ್ತಿದ್ದಾರೆ. ಇದು ಜನರಿಗೆ ಕಷ್ಟಕೊಟ್ಟು ಖುಷಿ ಪಡುವ ಸರ್ಕಾರ ಎಂದು ಕಿಡಿಕಾರಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗಿ ಮಂತ್ರಿಗಳ ಅಭಿವೃದ್ಧಿಯಾಗುತ್ತಿದೆ. ಜನರ ಅಭಿವೃದ್ಧಿ ಯಾರಿಗೆ ಬೇಕು. ಎಲ್ಲದಕ್ಕೂ ಕೂಡ ಪರ್ಸಂಟೇಜ್‌ ಕೇಳುತ್ತಾರೆ. ಆಶ್ರಯ ಮನೆಗಳಿಗೂ ವಿಧಾನಸಭೆಯಲ್ಲಿ ಈಗ ವಸೂಲಿ ಶುರು ಆಗಿದೆಯಂತೆ ಎಂದು ಗಂಭೀರ ಆರೋಪ ಮಾಡಿದರು.

ಇನ್ನು ಆಪರೇಷನ್‌ ಹಸ್ತದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಆಪರೇಷನ್‌ ಹಸ್ತ ನಡೆಯುತ್ತಲೇ ಇದೆ. ನಮ್ಮಲ್ಲಿ 18 ಜನ ಶಾಸಕರಿದ್ದಾರೆ. ಎಲ್ಲರೂ ಒಟ್ಟಾಗಿದ್ದಾರೆ. ಈ ಬಗ್ಗೆ ಹರೀಶ್‌ ಗೌಡ ಸಹ ಸ್ಪಷ್ಟನೆ ನೀಡಿದ್ದಾರೆ. ಶಾಸಕರು ಅಂದ ಮೇಲೆ ಒತ್ತಡವಂತೂ ಇದ್ದೇ ಇರುತ್ತೆ. ನಮ್ಮ ಶಾಸಕರು ಎಲ್ಲೂ ಹೋಗಲ್ಲ. ನಮ್ಮ ಜೊತೆಯೇ ಇರುತ್ತಾರೆ ಎಂದು ಸ್ಪಷ್ಟಪಡಿಸಿದರು.

ಅರ್ಚನ ಎಸ್‌ ಎಸ್

Recent Posts

ಎಸ್.ನಿಜಲಿಂಗಪ್ಪನವರು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ…

4 mins ago

ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾರೂ ಗ್ಯಾರಂಟಿ ಯೋಜನೆ ವಿರೋಧಿಸಿಲ್ಲ: ಸಚಿವ ಚಲುವರಾಯಸ್ವಾಮಿ

ಬೆಳಗಾವಿ: ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾರೂ ಕೂಡ ಗ್ಯಾರಂಟಿ ಯೋಜನೆಗಳನ್ನು ವಿರೋಧ ಮಾಡಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.…

14 mins ago

ಕೊಡಗು| ಆಸ್ತಿ ವಿಚಾರಕ್ಕೆ ಕಲಹ: ಅಣ್ಣನ ಮಗನ ಮೇಲೆ ಗುಂಡಿನ ದಾಳಿ

ಕೊಡಗು: ಆಸ್ತಿ ವಿಚಾರಕ್ಕೆ ಅಣ್ಣನ ಮಗನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕಾವಾಡಿಯಲ್ಲಿ ನಡೆದಿದೆ.…

44 mins ago

ರಾಜ್ಯದಲ್ಲಿ ಶೀಘ್ರದಲ್ಲೇ ಅರ್ಹರಿಗೆ ಹೊಸ ಬಿಪಿಎಲ್‌ ಕಾರ್ಡ್‌ ವಿತರಣೆ: ಸಚಿವ ಮುನಿಯಪ್ಪ ಘೋಷಣೆ

ಬೆಳಗಾವಿ: ರಾಜ್ಯದಲ್ಲಿ ಶೀಘ್ರದಲ್ಲೇ ಅರ್ಹರಿಗೆ ಹೊಸ ಬಿಪಿಎಲ್‌ ಕಾರ್ಡ್‌ ವಿತರಣೆ ಮಾಡಲಾಗುವುದು ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಘೋಷಣೆ…

55 mins ago

ನಾಳೆ ಡೆವಿಲ್‌ ಚಿತ್ರ ರಿಲೀಸ್:‌ ಜೈಲಿನಿಂದಲೇ ಅಭಿಮಾನಿಗಳಿಗೆ ದರ್ಶನ್‌ ಸಂದೇಶ

ಬೆಂಗಳೂರು: ನಾಳೆ ನಟ ದರ್ಶನ್‌ ಅಭಿನಯದ ಡೆವಿಲ್‌ ಚಿತ್ರ ರಿಲೀಸ್‌ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಜೈಲಿನಿಂದಲೇ ಅಭಿಮಾನಿಗಳಿಗೆ ನಟ ದರ್ಶನ್‌…

1 hour ago

ಮೈಸೂರಿನಲ್ಲಿ ಸೆರೆ ಸಿಕ್ಕಿದ್ದ 4 ಹುಲಿ ಮರಿಗಳ ನಿಗೂಢ ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನ ಗೌಡನಕಟ್ಟೆಯಲ್ಲಿ ತಾಯಿಯೊಂದಿಗೆ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಮೃತಪಟ್ಟಿವೆ ಎಂದು ತಿಳಿದುಬಂದಿದೆ. ಹುಣಸೂರು…

2 hours ago