ಮೈಸೂರು: ಕೆಆರ್ಎಸ್ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ದೇವನೂರು ಬಡಾವಣೆ ಹಾಗೂ ಕೆಸರೆ ಗ್ರಾಮಕ್ಕೆ ಸಿದ್ದರಾಮಯ್ಯ ಹೆಸರನ್ನೇ ಇಡಿ ಎಂದು ವ್ಯಂಗ್ಯವಾಡಿದ್ದಾರೆ.
ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಚರ್ಚೆಯಲ್ಲಿರುವ ಕೆಆರ್ಎಸ್ ರಸ್ತೆ ಮರುನಾಮಕರಣ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಪ್ರಿನ್ಸೆಸ್ ರಸ್ತೆ ಬದಲಾವಣೆ ಮುನ್ನೆಲೆಗೆ ಬಂದಾಗಿನಿಂದಲೂ ಸಿಎಂ ಮೌನವಾಗಿದ್ದಾರೆ. ಸಿಎಂ ರಸ್ತೆ ವಿಷಯದಲ್ಲಿ ಜಾಣ ಮೌನ ತಾಳಿದ್ದಾರೆ. ಮುಡಾದ ಕೆಸರೆ ಗ್ರಾಮ ಬಂತಲ್ಲ ಅದಕ್ಕೂ ಕೂಡ ಸಿದ್ದರಾಮಯ್ಯರ ಹೆಸರಿಡಿ. ಅದನ್ನು ಬಿಟ್ಟು ರಾಜಮನೆತನದ ಹೆಸರು ಯಾಕೆ ತೆಗಿತೀರಾ ಎಂದು ಟಾಂಗ್ ನೀಡಿದರು.
ಇನ್ನು ಬಸ್ ಪ್ರಯಾಣ ದರ ಏರಿಕೆ ಸಂಬಂಧ ಮಾತನಾಡಿದ ಅವರು, ದರ ಹೆಚ್ಚಳ ಬರೀ ಜನರಿಗೆ ಮಾತ್ರ. ಮಂತ್ರಿಗಳಿಗೆ ದರ ಹೆಚ್ಚಳ ಅನ್ವಯವಾಗಲ್ಲ. ಜನರ ಜೇಬಿಗೆ ಕೈ ಹಾಕಿ ಲೂಟಿ ಮಾಡುತ್ತಿದ್ದಾರೆ. ಇದು ಜನರಿಗೆ ಕಷ್ಟಕೊಟ್ಟು ಖುಷಿ ಪಡುವ ಸರ್ಕಾರ ಎಂದು ಕಿಡಿಕಾರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗಿ ಮಂತ್ರಿಗಳ ಅಭಿವೃದ್ಧಿಯಾಗುತ್ತಿದೆ. ಜನರ ಅಭಿವೃದ್ಧಿ ಯಾರಿಗೆ ಬೇಕು. ಎಲ್ಲದಕ್ಕೂ ಕೂಡ ಪರ್ಸಂಟೇಜ್ ಕೇಳುತ್ತಾರೆ. ಆಶ್ರಯ ಮನೆಗಳಿಗೂ ವಿಧಾನಸಭೆಯಲ್ಲಿ ಈಗ ವಸೂಲಿ ಶುರು ಆಗಿದೆಯಂತೆ ಎಂದು ಗಂಭೀರ ಆರೋಪ ಮಾಡಿದರು.
ಇನ್ನು ಆಪರೇಷನ್ ಹಸ್ತದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಆಪರೇಷನ್ ಹಸ್ತ ನಡೆಯುತ್ತಲೇ ಇದೆ. ನಮ್ಮಲ್ಲಿ 18 ಜನ ಶಾಸಕರಿದ್ದಾರೆ. ಎಲ್ಲರೂ ಒಟ್ಟಾಗಿದ್ದಾರೆ. ಈ ಬಗ್ಗೆ ಹರೀಶ್ ಗೌಡ ಸಹ ಸ್ಪಷ್ಟನೆ ನೀಡಿದ್ದಾರೆ. ಶಾಸಕರು ಅಂದ ಮೇಲೆ ಒತ್ತಡವಂತೂ ಇದ್ದೇ ಇರುತ್ತೆ. ನಮ್ಮ ಶಾಸಕರು ಎಲ್ಲೂ ಹೋಗಲ್ಲ. ನಮ್ಮ ಜೊತೆಯೇ ಇರುತ್ತಾರೆ ಎಂದು ಸ್ಪಷ್ಟಪಡಿಸಿದರು.
ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…
ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…
ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್ ತಿಳಿಸಿದರು. ವಿಧಾನಪರಿಷತ್ ಕಲಾಪದಲ್ಲಿ…
ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…
ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ…
ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…