ಮೈಸೂರು ನಗರ

ರಸ್ತೆ ವಿಷಯದಲ್ಲಿ ಸಿಎಂ ಸಿದ್ದರಾಮಯ್ಯ ಜಾಣ ಮೌನರಾಗಿದ್ದಾರೆ: ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯ

ಮೈಸೂರು: ಕೆಆರ್‌ಎಸ್‌ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ದೇವನೂರು ಬಡಾವಣೆ ಹಾಗೂ ಕೆಸರೆ ಗ್ರಾಮಕ್ಕೆ ಸಿದ್ದರಾಮಯ್ಯ ಹೆಸರನ್ನೇ ಇಡಿ ಎಂದು ವ್ಯಂಗ್ಯವಾಡಿದ್ದಾರೆ.

ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಚರ್ಚೆಯಲ್ಲಿರುವ ಕೆಆರ್‌ಎಸ್‌ ರಸ್ತೆ ಮರುನಾಮಕರಣ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಪ್ರಿನ್ಸೆಸ್‌ ರಸ್ತೆ ಬದಲಾವಣೆ ಮುನ್ನೆಲೆಗೆ ಬಂದಾಗಿನಿಂದಲೂ ಸಿಎಂ ಮೌನವಾಗಿದ್ದಾರೆ. ಸಿಎಂ ರಸ್ತೆ ವಿಷಯದಲ್ಲಿ ಜಾಣ ಮೌನ ತಾಳಿದ್ದಾರೆ. ಮುಡಾದ ಕೆಸರೆ ಗ್ರಾಮ ಬಂತಲ್ಲ ಅದಕ್ಕೂ ಕೂಡ ಸಿದ್ದರಾಮಯ್ಯರ ಹೆಸರಿಡಿ. ಅದನ್ನು ಬಿಟ್ಟು ರಾಜಮನೆತನದ ಹೆಸರು ಯಾಕೆ ತೆಗಿತೀರಾ ಎಂದು ಟಾಂಗ್‌ ನೀಡಿದರು.

ಇನ್ನು ಬಸ್‌ ಪ್ರಯಾಣ ದರ ಏರಿಕೆ ಸಂಬಂಧ ಮಾತನಾಡಿದ ಅವರು, ದರ ಹೆಚ್ಚಳ ಬರೀ ಜನರಿಗೆ ಮಾತ್ರ. ಮಂತ್ರಿಗಳಿಗೆ ದರ ಹೆಚ್ಚಳ ಅನ್ವಯವಾಗಲ್ಲ. ಜನರ ಜೇಬಿಗೆ ಕೈ ಹಾಕಿ ಲೂಟಿ ಮಾಡುತ್ತಿದ್ದಾರೆ. ಇದು ಜನರಿಗೆ ಕಷ್ಟಕೊಟ್ಟು ಖುಷಿ ಪಡುವ ಸರ್ಕಾರ ಎಂದು ಕಿಡಿಕಾರಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗಿ ಮಂತ್ರಿಗಳ ಅಭಿವೃದ್ಧಿಯಾಗುತ್ತಿದೆ. ಜನರ ಅಭಿವೃದ್ಧಿ ಯಾರಿಗೆ ಬೇಕು. ಎಲ್ಲದಕ್ಕೂ ಕೂಡ ಪರ್ಸಂಟೇಜ್‌ ಕೇಳುತ್ತಾರೆ. ಆಶ್ರಯ ಮನೆಗಳಿಗೂ ವಿಧಾನಸಭೆಯಲ್ಲಿ ಈಗ ವಸೂಲಿ ಶುರು ಆಗಿದೆಯಂತೆ ಎಂದು ಗಂಭೀರ ಆರೋಪ ಮಾಡಿದರು.

ಇನ್ನು ಆಪರೇಷನ್‌ ಹಸ್ತದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಆಪರೇಷನ್‌ ಹಸ್ತ ನಡೆಯುತ್ತಲೇ ಇದೆ. ನಮ್ಮಲ್ಲಿ 18 ಜನ ಶಾಸಕರಿದ್ದಾರೆ. ಎಲ್ಲರೂ ಒಟ್ಟಾಗಿದ್ದಾರೆ. ಈ ಬಗ್ಗೆ ಹರೀಶ್‌ ಗೌಡ ಸಹ ಸ್ಪಷ್ಟನೆ ನೀಡಿದ್ದಾರೆ. ಶಾಸಕರು ಅಂದ ಮೇಲೆ ಒತ್ತಡವಂತೂ ಇದ್ದೇ ಇರುತ್ತೆ. ನಮ್ಮ ಶಾಸಕರು ಎಲ್ಲೂ ಹೋಗಲ್ಲ. ನಮ್ಮ ಜೊತೆಯೇ ಇರುತ್ತಾರೆ ಎಂದು ಸ್ಪಷ್ಟಪಡಿಸಿದರು.

ಅರ್ಚನ ಎಸ್‌ ಎಸ್

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

12 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

13 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

13 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

15 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

15 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

15 hours ago