ಮೈಸೂರು ನಗರ

ಸಹಕಾರ ಕ್ಷೇತ್ರದಲ್ಲಿ ಜಿ.ಟಿ.ದೇವೇಗೌಡರ ಕುಟುಂಬ ಮುಗಿಸೋದು ಸಿಎಂ ಪ್ಲಾನ್: ಎಂಎಲ್‌ಸಿ ಎಚ್.ವಿಶ್ವನಾಥ್‌

ಮೈಸೂರು: ಸಹಕಾರ ಕ್ಷೇತ್ರದಲ್ಲಿ ಜಿ.ಟಿ.ದೇವೇಗೌಡ ಕುಟುಂಬ ಮುಗಿಸೋಕೆ ಸಿಎಂ ಸಿದ್ದರಾಮಯ್ಯ ಪ್ಲಾನ್ ಮಾಡಿದ್ದಾರೆ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ ಗಂಭೀರ ಆರೋಪ ಮಾಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಂಸಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಶಾಸಕರ ಸ್ಪರ್ಧೆ ವಿಚಾರಕ್ಕೆ ಕುರಿತಂತೆ ಪ್ರತಿಕ್ರಿಯಿಸಿದರು.

ಜಿ.ಟಿ.ದೇವೇಗೌಡ, ಹರೀಶ್ ಗೌಡ ಸಹಕಾರ ಕ್ಷೇತ್ರದಲ್ಲಿ ಇದ್ದಾರೆ. ಸಹಕಾರ ಕ್ಷೇತ್ರದಲ್ಲಿ ಇವರ ಹಿಡಿತ ತಪ್ಪಿಸಬೇಕು. ಕಾಂಗ್ರೆಸ್ ಅಧಿಕಾರಕ್ಕೆ ತರಬೇಕು ಎಂದು ಪ್ರಯತ್ನ ಮಾಡುತ್ತಿದ್ದಾರೆ. ಕಾರ್ಯಕರ್ತರು ಚುನಾವಣೆಗೆ ನಿಂತರೆ ಹಣದ ಕೊರತೆ ಆಗುತ್ತೆ. ಶಾಸಕರು ನಿಂತರೇ ಹಣ ಖರ್ಚು ಮಾಡುತ್ತಾರೆ. ಸಹಕಾರ ಕ್ಷೇತ್ರದಲ್ಲಿ ಜಿಟಿ ದೇವೇಗೌಡ ಕುಟುಂಬ ಮುಗಿಸೋದು ಸಿಎಂ ಪ್ಲಾನ್ ಎಂದು ಆರೋಪಿಸಿದರು.

ಇನ್ನು ಅಧಿಕಾರ ಇರುವವರೇ ಮತ್ತೆ ಮತ್ತೆ ಅಧಿಕಾರ ಪಡೆದರೆ ಹೇಗೆ, ಇತರರಿಗೂ ಚುನಾವಣೆಗಳಲ್ಲಿ ಸ್ಪರ್ಧೆಸುವಂತೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಆಗ್ರಹಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

16 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

16 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

16 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

16 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

16 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

19 hours ago