ಮೈಸೂರು ನಗರ

ರಾಜ್ಯ ಸರ್ಕಾರಕ್ಕೆ ಸರಿಯಾದ ಆರ್ಥಿಕ ಹಿಡಿತವಿಲ್ಲ: ಎಚ್‌.ವಿಶ್ವನಾಥ್‌

ಮೈಸೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದ ಅನಗತ್ಯ ಖರ್ಚುಗಳಿಂದ ಕರ್ನಾಟಕದ ಇಂದಿನ  ಆರ್ಥಿಕ ಪರಿಸ್ಥಿತಿ ಅಧೋಗತಿಗೆ ಬಂದು ತಲುಪಿದೆ ಎಂದು ಸರ್ಕಾರದ ವಿರುದ್ಧ ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ವಾಗ್ದಾಳಿ ನಡೆಸಿದ್ದಾರೆ.

ನಗರದ ಜಲದರ್ಶಿನಿಯಲ್ಲಿ ಇಂದು(ಜನವರಿ.2) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಕ್ಕೆ ಆರ್ಥಿಕ ಪರಿಸ್ಥಿತಿ ಬಗ್ಗೆ ಸರಿಯಾದ ಹಿಡಿತ ಇಲ್ಲ. ಪ್ರಸ್ತುತ ರಾಜ್ಯದ ಆರ್ಥಿಕ ಪರಿಸ್ಥಿತಿ ಹೇಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಒಂದು ಶ್ವೇತ ಪತ್ರ ಹೊರಡಿಸಿ, ರಾಜ್ಯದಲ್ಲಿರುವ ಆರ್ಥಿಕ ಪರಿಸ್ಥಿತಿಯನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರೇ ನೀವು ರಾಜ್ಯದಲ್ಲಿ ಯಾವ ರೀತಿಯ ಆಡಳಿತ ನೀಡುತ್ತಿದ್ದೀರಾ? ಐಪಿಎಸ್‌ ಅಧಿಕಾರಿ ರೂಪಾ ಹಾಗೂ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅವರ ಜಗಳ ಬೀದಿ ರಂಪಾಟವಾಗಿದೆ. ಈ ಬಗ್ಗೆ ನೀವೂ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಅವರಿಬ್ಬರ ಜಗಳದ ಬಗ್ಗೆ ಪ್ರಶ್ನಿಸುವ ಅಧಿಕಾರವಿದೆ. ಆದರೆ ಅವರನ್ನು ಪ್ರಶ್ನಿಸಿದೇ ಮೌನವಾಗಿದ್ದೀರಿ? ಮೊದಲು ಆ ಇಬ್ಬರೂ ಅಧಿಕಾರಿಗಳನ್ನು ವಾಪಾಸ್‌ ದೆಹಲಿಗೆ ಕಳುಹಿಸಿ ಎಂದು ಹೇಳಿದ್ದಾರೆ.

ಮೈಸೂರಿನಲ್ಲಿ ಮುಂದುವರೆದ ರಸ್ತೆ ರಾಜಕೀಯ: ಪ್ರಿನ್ಸೆಸ್‌ ರಸ್ತೆ ಹೆಸರು ಬದಲಾವಣೆಗೆ ಆಕ್ಷೇಪ

ಇದೇ ಸಂದರ್ಭದಲ್ಲಿ ಪ್ರಿನ್ಸೆಸ್‌ ರಸ್ತೆಗೆ, ಸಿದ್ದರಾಮಯ್ಯ ಆರೋಗ್ಯ ಮಾರ್ಗ ಎಂಬ ಹೆಸರಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕೆಆರ್‌ಎಸ್‌ ರಸ್ತೆಯೇ ಪ್ರಿನ್ಸೆಸ್‌ ರಸ್ತೆ ಎಂಬುದಕ್ಕೆ ಹಲವು ದಾಖಲೆಗಳಿವೆ. ಮೈಸೂರು ಮಹಾರಾಜರು ನಾಮಕರಣ ಮಾಡಿದ ಹೆಸರನ್ನು ತೆಗೆಯುವುದು ಸರಿಯಲ್ಲ. ಮೈಸೂರು ಸಂಸ್ಥಾನಕ್ಕೆ ಮಹಾರಾಜರ ಕೊಡುಗೆ ಅಪಾರವಾಗಿದೆ. ಹೀಗಾಗಿ ಯಾವುದಕ್ಕೆ ಕಾರಣಕ್ಕೂ ಆ ರಸ್ತೆಗೆ ಮರು ನಾಮಕರಣ ಮಾಡಬಾರದು ಎಂದು ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರ ಹಿತೈಷಿ ಬೆಂಬಲಿಗರು ಅವರ ಹೆಸರನ್ನು ಕೆಡಿಸಲೆಂದೇ ಅವರ ಹುನ್ನಾರ ನಡೆಸುತ್ತಿರುತ್ತಾರೆ. ಅದಕ್ಕೆ ಸಾಕ್ಷಿ ಎಂಬಂತೆ ಮುಡಾ ಪ್ರಕರಣದಲ್ಲಿಯೂ ಸಹ 14 ಬದಲಿ ನಿವೇಶನಗಳ ಹೆಸರಿನಲ್ಲಿ ಹೆಸರು ಕೆಡಸಿದರು. ಮತ್ತೆ ಇದೀಗ ಕೆಆರ್‌ಎಸ್‌ ರಸ್ತೆಗೆ ಹೆಸರಿಡುವ ಕುರಿತು ಹೆಸರು ಕೆಡಿಸುತ್ತಿದ್ದಾರೆ. ನಾನು ಸಿದ್ದರಾಮಯ್ಯ ಅವರ ಸ್ನೇಹಿತನಾಗಿ ಹೇಳುತ್ತಿದ್ದೇನೆ, ಅವರು 40 ವರ್ಷದ ರಾಜಕೀಯ ಜೀವನದಲ್ಲಿ ಉತ್ತಮ ರೀತಿಯ ಆಡಳಿತವನ್ನು ನೀಡಿದ್ದಾರೆ. ಹೀಗಾಗಿ ಮತ್ತೊಮ್ಮೆ ಅವರ ಹೆಸರು ಕೆಡಿಸುವ ಪ್ರಯತ್ನ ಮಾಡಬಾರದು ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ವಿ…ರಾಮ ..!

ದೇಶದ ತುಂಬಾ ಇಂದು ಭಕ್ತ ಗಣ ಮಾಡುತ್ತಿದೆ ಜಪ ರಾಮ ರಾಮ... ಆ ಟ್ರಂಪಣ್ಣನೂ ಜಪಿಸುತ್ತಿದ್ದಾರಂತೆ ಯಾವಾಗ ಘೋಷಿಸುತ್ತದೆಯೋ ಇರಾನ್,…

20 mins ago

ಓದುಗರ ಪತ್ರ: ಗಿಡಗಳನ್ನು ನೆಟ್ಟು ಪರಿಸರ ಉಳಿಸಿ

ಕೆಲವು ತಿಂಗಳ ಹಿಂದೆ ಹೈದರಾಲಿರಸ್ತೆಯ ಎರಡೂ ಬದಿ ೪೦ ಮರಗಳನ್ನು ಹೊಂದಿ ಹಸಿರು ಕಂಗೊಳಿಸುತ್ತಿತ್ತು. ರಸ್ತೆ ಅಗಲೀಕರಣದ ನೆಪದಲ್ಲಿ ಅಹೋರಾತ್ರಿ…

22 mins ago

ಓದುಗರ ಪತ್ರ: ಹಗಲು ದರೋಡೆ ನಿಲ್ಲಿಸಿ

ಇತ್ತೀಚಿನ ದಿನಗಳಲ್ಲಿ ಬೆಂಗಳೂರು, ಮೈಸೂರು, ಹೈದರಾಬಾದ್, ಮುಂಬೈನಂತಹ ನಗರ ಪ್ರದೇಶಗಳಲ್ಲಿ ಓಲಾ, ಊಬರ್, ರ‍್ಯಾಪಿಡೋ, ನಮ್ಮ ಯಾತ್ರೆ ಎಂಬ ಆಪ್…

25 mins ago

‘ಕೆಡಿ’ ಹಾಡು, ‘ಲವ್ ಮಾಕ್‌ಟೈಲ್ ೩’, ಕಥೆಯ ಆತ್ಮ, ನಿರೂಪಣೆ, ಕೃತಿಸ್ವಾಮ್ಯಗಳ ಸುತ್ತ

ಕನ್ನಡ ಚಿತ್ರರಂಗ ಸದ್ದು ಮಾಡುತ್ತಿದೆ. ರಾಜ್ಯಮಟ್ಟದಲ್ಲಿ, ರಾಷ್ಟ್ರಮಟ್ಟದಲ್ಲಿ. ಅಭಿವ್ಯಕ್ತಿ ಸ್ವಾತಂತ್ರ್ಯದ ಎಲ್ಲ ಮುಖಗಳ ಪರಿಚಯವೂ ಈಗ ಆಗತೊಡಗಿದೆ. ನಿರ್ಮಾಪಕ ಕನಕಪುರ…

27 mins ago

ಸಮರ್ಪಕ ನಿರ್ವಹಣೆಯಿಲ್ಲದೇ ಸ್ಥಗಿತಗೊಂಡ ಕುಡಿಯುವ ನೀರಿನ ಘಟಕಗಳು

ಮಹಾದೇಶ್ ಎಂ.ಗೌಡ ಹನೂರು: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ೨೪ ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ…

34 mins ago

ಭೇರ್ಯ ಗ್ರಾಪಂಗೆ ೨ನೇ ಬಾರಿಗೆ ಗಾಂಧಿ ಗ್ರಾಮ ಪುರಸ್ಕಾರ

ಭೇರ್ಯ ಮಹೇಶ್ ಡಿಜಿಟಲ್ ಗ್ರಂಥಾಲಯ, ಸ್ವಚ್ಛತೆ, ನೈರ್ಮಲ್ಯ, ನೀರು ಸರಬರಾಜು, ಇನ್ನಿತರ ವಿಭಾಗಗಳಲ್ಲಿ ವಿಶೇಷ ಸಾಧನೆ ಭೇರ್ಯ: ಭಾರತದ ನಿಜವಾದ…

39 mins ago