ಮೈಸೂರು ನಗರ

ರಾಜ್ಯ ಸರ್ಕಾರಕ್ಕೆ ಸರಿಯಾದ ಆರ್ಥಿಕ ಹಿಡಿತವಿಲ್ಲ: ಎಚ್‌.ವಿಶ್ವನಾಥ್‌

ಮೈಸೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದ ಅನಗತ್ಯ ಖರ್ಚುಗಳಿಂದ ಕರ್ನಾಟಕದ ಇಂದಿನ  ಆರ್ಥಿಕ ಪರಿಸ್ಥಿತಿ ಅಧೋಗತಿಗೆ ಬಂದು ತಲುಪಿದೆ ಎಂದು ಸರ್ಕಾರದ ವಿರುದ್ಧ ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ವಾಗ್ದಾಳಿ ನಡೆಸಿದ್ದಾರೆ.

ನಗರದ ಜಲದರ್ಶಿನಿಯಲ್ಲಿ ಇಂದು(ಜನವರಿ.2) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಕ್ಕೆ ಆರ್ಥಿಕ ಪರಿಸ್ಥಿತಿ ಬಗ್ಗೆ ಸರಿಯಾದ ಹಿಡಿತ ಇಲ್ಲ. ಪ್ರಸ್ತುತ ರಾಜ್ಯದ ಆರ್ಥಿಕ ಪರಿಸ್ಥಿತಿ ಹೇಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಒಂದು ಶ್ವೇತ ಪತ್ರ ಹೊರಡಿಸಿ, ರಾಜ್ಯದಲ್ಲಿರುವ ಆರ್ಥಿಕ ಪರಿಸ್ಥಿತಿಯನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರೇ ನೀವು ರಾಜ್ಯದಲ್ಲಿ ಯಾವ ರೀತಿಯ ಆಡಳಿತ ನೀಡುತ್ತಿದ್ದೀರಾ? ಐಪಿಎಸ್‌ ಅಧಿಕಾರಿ ರೂಪಾ ಹಾಗೂ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅವರ ಜಗಳ ಬೀದಿ ರಂಪಾಟವಾಗಿದೆ. ಈ ಬಗ್ಗೆ ನೀವೂ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಅವರಿಬ್ಬರ ಜಗಳದ ಬಗ್ಗೆ ಪ್ರಶ್ನಿಸುವ ಅಧಿಕಾರವಿದೆ. ಆದರೆ ಅವರನ್ನು ಪ್ರಶ್ನಿಸಿದೇ ಮೌನವಾಗಿದ್ದೀರಿ? ಮೊದಲು ಆ ಇಬ್ಬರೂ ಅಧಿಕಾರಿಗಳನ್ನು ವಾಪಾಸ್‌ ದೆಹಲಿಗೆ ಕಳುಹಿಸಿ ಎಂದು ಹೇಳಿದ್ದಾರೆ.

ಮೈಸೂರಿನಲ್ಲಿ ಮುಂದುವರೆದ ರಸ್ತೆ ರಾಜಕೀಯ: ಪ್ರಿನ್ಸೆಸ್‌ ರಸ್ತೆ ಹೆಸರು ಬದಲಾವಣೆಗೆ ಆಕ್ಷೇಪ

ಇದೇ ಸಂದರ್ಭದಲ್ಲಿ ಪ್ರಿನ್ಸೆಸ್‌ ರಸ್ತೆಗೆ, ಸಿದ್ದರಾಮಯ್ಯ ಆರೋಗ್ಯ ಮಾರ್ಗ ಎಂಬ ಹೆಸರಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕೆಆರ್‌ಎಸ್‌ ರಸ್ತೆಯೇ ಪ್ರಿನ್ಸೆಸ್‌ ರಸ್ತೆ ಎಂಬುದಕ್ಕೆ ಹಲವು ದಾಖಲೆಗಳಿವೆ. ಮೈಸೂರು ಮಹಾರಾಜರು ನಾಮಕರಣ ಮಾಡಿದ ಹೆಸರನ್ನು ತೆಗೆಯುವುದು ಸರಿಯಲ್ಲ. ಮೈಸೂರು ಸಂಸ್ಥಾನಕ್ಕೆ ಮಹಾರಾಜರ ಕೊಡುಗೆ ಅಪಾರವಾಗಿದೆ. ಹೀಗಾಗಿ ಯಾವುದಕ್ಕೆ ಕಾರಣಕ್ಕೂ ಆ ರಸ್ತೆಗೆ ಮರು ನಾಮಕರಣ ಮಾಡಬಾರದು ಎಂದು ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರ ಹಿತೈಷಿ ಬೆಂಬಲಿಗರು ಅವರ ಹೆಸರನ್ನು ಕೆಡಿಸಲೆಂದೇ ಅವರ ಹುನ್ನಾರ ನಡೆಸುತ್ತಿರುತ್ತಾರೆ. ಅದಕ್ಕೆ ಸಾಕ್ಷಿ ಎಂಬಂತೆ ಮುಡಾ ಪ್ರಕರಣದಲ್ಲಿಯೂ ಸಹ 14 ಬದಲಿ ನಿವೇಶನಗಳ ಹೆಸರಿನಲ್ಲಿ ಹೆಸರು ಕೆಡಸಿದರು. ಮತ್ತೆ ಇದೀಗ ಕೆಆರ್‌ಎಸ್‌ ರಸ್ತೆಗೆ ಹೆಸರಿಡುವ ಕುರಿತು ಹೆಸರು ಕೆಡಿಸುತ್ತಿದ್ದಾರೆ. ನಾನು ಸಿದ್ದರಾಮಯ್ಯ ಅವರ ಸ್ನೇಹಿತನಾಗಿ ಹೇಳುತ್ತಿದ್ದೇನೆ, ಅವರು 40 ವರ್ಷದ ರಾಜಕೀಯ ಜೀವನದಲ್ಲಿ ಉತ್ತಮ ರೀತಿಯ ಆಡಳಿತವನ್ನು ನೀಡಿದ್ದಾರೆ. ಹೀಗಾಗಿ ಮತ್ತೊಮ್ಮೆ ಅವರ ಹೆಸರು ಕೆಡಿಸುವ ಪ್ರಯತ್ನ ಮಾಡಬಾರದು ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಮೈಸೂರಿನಲ್ಲಿ ಮಳೆ ನೀರು ಕೊಯ್ಲು ಥೀಮ್ ಪಾರ್ಕ್ ಕನ್ನಡಿಯೊಳಗಿನ ಗಂಟು

ಮೈಸೂರು ನಗರದಲ್ಲಿ ಮಳೆನೀರು ಕೊಯ್ಲು ಥೀಮ್ ಪಾರ್ಕ್ ಸ್ಥಾಪಿಸುವ ಹಿಂದಿನ ಹಾಗೂ ಈಗಿನ ಸರ್ಕಾರಗಳ ಭರವಸೆ ಇನ್ನೂ ಕನ್ನಡಿಯೊಳಗಿನ ಗಂಟಾಗಿಯೇ…

3 hours ago

ಓದುಗರ ಪತ್ರ: ಅಂಕೇಗೌಡರಿಗೆ ಸಿಕ್ಕ ಪದ್ಮಶ್ರೀ ಸಾರಸ್ವತ ಲೋಕಕ್ಕೆ ಸಂದ ಗೌರವ

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಹರಳಹಳ್ಳಿಯ ಪುಸ್ತಕ ಪ್ರೇಮಿ ೭೮ ವರ್ಷದ ಅಂಕೇಗೌಡ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿರುವುದು ಕನ್ನಡ…

3 hours ago

ಓದುಗರ ಪತ್ರ: ರಾಮಕೃಷ್ಣನಗರಕ್ಕೆ ಮತ್ತಷ್ಟು ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ರಾಮಕೃಷ್ಣನಗರ ಮಾರ್ಗಕ್ಕೆ ಪ್ರತಿದಿನ ನಗರ ಸಾರಿಗೆ ಬಸ್ಸುಗಳು ಸಂಚರಿಸುತ್ತವೆ. ಆದರೆ ಈ ಮಾರ್ಗದಲ್ಲಿ ಓಡಾಡುವ ಬಸ್ಸುಗಳ ಸಂಖ್ಯೆ ಮಾತ್ರ…

3 hours ago

ವಿಜೃಂಭಣೆಯಿಂದ ನಡೆದ ಸಂತೆ ಮಾಸ್ತಮ್ಮನವರ ಜಾತ್ರೆ

ಸರಗೂರು: ಪಟ್ಟಣದಲ್ಲಿ ಗ್ರಾಮದೇವತೆ ಶ್ರೀ ಸಂತೆ ಮಾಸ್ತಮ್ಮನವರ ೩೧ನೇ ಜಾತ್ರಾ ಮಹೋತ್ಸವ ಹಾಗೂ ಕೊಂಡೋತ್ಸವ ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು. ಜಾತ್ರಾ…

3 hours ago

ಕಬಿನಿ ಹಿನ್ನೀರಿನ ರೆಸಾರ್ಟ್‌ಗಳ ದಾಖಲಾತಿ ಪರಿಶೀಲನೆ

ರೆಸಾರ್ಟ್‌ಗಳು, ಹೋಂಸ್ಟೇಗಳಿಗೆ ಅಕ್ರಮ ರೆಸಾರ್ಟ್‌ಗಳ ತನಿಖಾ ಸಮಿತಿಯವರ ದಿಢೀರ್ ಭೇಟಿ ಹೆಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಹಿನ್ನೀರಿನ ನಾಗರಹೊಳೆ ಮತ್ತು ಬಂಡೀಪುರ…

3 hours ago

ಬೀದಿ ನಾಯಿ ಪುನರ್ವಸತಿ ಕೇಂದ್ರ ಸ್ಥಾಪನೆಗೆ ವಿರೋಧ

ಕೆ.ಬಿ.ಶಂಶುದ್ಧೀನ್ ಗ್ರಾಮಕ್ಕೆ ಹುಲಿ, ಚಿರತೆಗಳು ಲಗ್ಗೆಯಿಡುವ ಆತಂಕ; ಹೋರಾಟದ ಎಚ್ಚರಿಕೆ ನೀಡಿದ ಹಕ್ಕೆ ಗ್ರಾಮಸ್ಥರು ಕುಶಾಲನಗರ: ಬೀದಿ ನಾಯಿಗಳ ಹಾವಳಿ…

3 hours ago