ಮೈಸೂರು ನಗರ

ರಾಜ್ಯ ಸರ್ಕಾರಕ್ಕೆ ಸರಿಯಾದ ಆರ್ಥಿಕ ಹಿಡಿತವಿಲ್ಲ: ಎಚ್‌.ವಿಶ್ವನಾಥ್‌

ಮೈಸೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದ ಅನಗತ್ಯ ಖರ್ಚುಗಳಿಂದ ಕರ್ನಾಟಕದ ಇಂದಿನ  ಆರ್ಥಿಕ ಪರಿಸ್ಥಿತಿ ಅಧೋಗತಿಗೆ ಬಂದು ತಲುಪಿದೆ ಎಂದು ಸರ್ಕಾರದ ವಿರುದ್ಧ ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ವಾಗ್ದಾಳಿ ನಡೆಸಿದ್ದಾರೆ.

ನಗರದ ಜಲದರ್ಶಿನಿಯಲ್ಲಿ ಇಂದು(ಜನವರಿ.2) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಕ್ಕೆ ಆರ್ಥಿಕ ಪರಿಸ್ಥಿತಿ ಬಗ್ಗೆ ಸರಿಯಾದ ಹಿಡಿತ ಇಲ್ಲ. ಪ್ರಸ್ತುತ ರಾಜ್ಯದ ಆರ್ಥಿಕ ಪರಿಸ್ಥಿತಿ ಹೇಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಒಂದು ಶ್ವೇತ ಪತ್ರ ಹೊರಡಿಸಿ, ರಾಜ್ಯದಲ್ಲಿರುವ ಆರ್ಥಿಕ ಪರಿಸ್ಥಿತಿಯನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರೇ ನೀವು ರಾಜ್ಯದಲ್ಲಿ ಯಾವ ರೀತಿಯ ಆಡಳಿತ ನೀಡುತ್ತಿದ್ದೀರಾ? ಐಪಿಎಸ್‌ ಅಧಿಕಾರಿ ರೂಪಾ ಹಾಗೂ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅವರ ಜಗಳ ಬೀದಿ ರಂಪಾಟವಾಗಿದೆ. ಈ ಬಗ್ಗೆ ನೀವೂ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಅವರಿಬ್ಬರ ಜಗಳದ ಬಗ್ಗೆ ಪ್ರಶ್ನಿಸುವ ಅಧಿಕಾರವಿದೆ. ಆದರೆ ಅವರನ್ನು ಪ್ರಶ್ನಿಸಿದೇ ಮೌನವಾಗಿದ್ದೀರಿ? ಮೊದಲು ಆ ಇಬ್ಬರೂ ಅಧಿಕಾರಿಗಳನ್ನು ವಾಪಾಸ್‌ ದೆಹಲಿಗೆ ಕಳುಹಿಸಿ ಎಂದು ಹೇಳಿದ್ದಾರೆ.

ಮೈಸೂರಿನಲ್ಲಿ ಮುಂದುವರೆದ ರಸ್ತೆ ರಾಜಕೀಯ: ಪ್ರಿನ್ಸೆಸ್‌ ರಸ್ತೆ ಹೆಸರು ಬದಲಾವಣೆಗೆ ಆಕ್ಷೇಪ

ಇದೇ ಸಂದರ್ಭದಲ್ಲಿ ಪ್ರಿನ್ಸೆಸ್‌ ರಸ್ತೆಗೆ, ಸಿದ್ದರಾಮಯ್ಯ ಆರೋಗ್ಯ ಮಾರ್ಗ ಎಂಬ ಹೆಸರಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕೆಆರ್‌ಎಸ್‌ ರಸ್ತೆಯೇ ಪ್ರಿನ್ಸೆಸ್‌ ರಸ್ತೆ ಎಂಬುದಕ್ಕೆ ಹಲವು ದಾಖಲೆಗಳಿವೆ. ಮೈಸೂರು ಮಹಾರಾಜರು ನಾಮಕರಣ ಮಾಡಿದ ಹೆಸರನ್ನು ತೆಗೆಯುವುದು ಸರಿಯಲ್ಲ. ಮೈಸೂರು ಸಂಸ್ಥಾನಕ್ಕೆ ಮಹಾರಾಜರ ಕೊಡುಗೆ ಅಪಾರವಾಗಿದೆ. ಹೀಗಾಗಿ ಯಾವುದಕ್ಕೆ ಕಾರಣಕ್ಕೂ ಆ ರಸ್ತೆಗೆ ಮರು ನಾಮಕರಣ ಮಾಡಬಾರದು ಎಂದು ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರ ಹಿತೈಷಿ ಬೆಂಬಲಿಗರು ಅವರ ಹೆಸರನ್ನು ಕೆಡಿಸಲೆಂದೇ ಅವರ ಹುನ್ನಾರ ನಡೆಸುತ್ತಿರುತ್ತಾರೆ. ಅದಕ್ಕೆ ಸಾಕ್ಷಿ ಎಂಬಂತೆ ಮುಡಾ ಪ್ರಕರಣದಲ್ಲಿಯೂ ಸಹ 14 ಬದಲಿ ನಿವೇಶನಗಳ ಹೆಸರಿನಲ್ಲಿ ಹೆಸರು ಕೆಡಸಿದರು. ಮತ್ತೆ ಇದೀಗ ಕೆಆರ್‌ಎಸ್‌ ರಸ್ತೆಗೆ ಹೆಸರಿಡುವ ಕುರಿತು ಹೆಸರು ಕೆಡಿಸುತ್ತಿದ್ದಾರೆ. ನಾನು ಸಿದ್ದರಾಮಯ್ಯ ಅವರ ಸ್ನೇಹಿತನಾಗಿ ಹೇಳುತ್ತಿದ್ದೇನೆ, ಅವರು 40 ವರ್ಷದ ರಾಜಕೀಯ ಜೀವನದಲ್ಲಿ ಉತ್ತಮ ರೀತಿಯ ಆಡಳಿತವನ್ನು ನೀಡಿದ್ದಾರೆ. ಹೀಗಾಗಿ ಮತ್ತೊಮ್ಮೆ ಅವರ ಹೆಸರು ಕೆಡಿಸುವ ಪ್ರಯತ್ನ ಮಾಡಬಾರದು ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮಂಡ್ಯದಲ್ಲಿ ಭಿಕ್ಷುಕಿ ನಿಧನ : ಮೃತಳ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ; ಊರಿಗೂರೇ ಶಾಕ್!

ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…

4 hours ago

ಜಿಲ್ಲೆಗೊಂದು ಕೈಗಾರಿಕೆ ತರುತ್ತೇನೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ

ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…

5 hours ago

ನಕಲಿ ಔಷಧ ತಯಾರಿಕಾ, ಮಾರಾಟ ಜಾಲ ; ವಿದೇಶದಲ್ಲಿ ಕಿಂಗ್‌ಪಿನ್ ಬಂಧನ

ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…

6 hours ago

ಗೋಣಿಕೊಪ್ಪ | ಮಾರುಕಟ್ಟೆಯಲ್ಲಿ ಗಸ್ತು ತಿರುಗಿದ ಪೊಲೀಸರು ; ಅಕ್ರಮ ಚಟುವಟಿಕೆ ಮೇಲೆ ನಿಗಾ

ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…

7 hours ago

ಪಾರದೀಪ್ ಕರಾವಳಿಯಲ್ಲಿ ಹಡಗು ಮುಳುಗಡೆ ; ಇಬ್ಬರ ರಕ್ಷಣೆ, 22 ಮಂದಿ ನಾಪತ್ತೆ

72,100 ಟನ್‌ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…

8 hours ago

ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಬಾಗಿಲು ಒಡೆದು ಇಡಿ ದಾಳಿ

ಬೆಂಗಳೂರು : ಕೆಪಿಎಸ್‌ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…

9 hours ago