Mysore
21
broken clouds

Social Media

ಮಂಗಳವಾರ, 25 ಆಗಸ್ಟ್ 2026
Light
Dark

ಜಾತಿಗಣತಿಗೆ 170 ಕೋಟಿ ಹಣ ಖರ್ಚು ಮಾಡಿ ಈಗ ತಿಪ್ಪೆಗೆಸೆದಿದ್ದಾರೆ: ಎಚ್‌.ವಿಶ್ವನಾಥ್‌ ಆಕ್ರೋಶ

h vishwanath

ಮೈಸೂರು: ಸಿಎಂ ಸಿದ್ದರಾಮಯ್ಯ ಹಾವಾಡಿಗನ ರೀತಿ ಮತ್ತೆ ಜಾತಿಗಣತಿ ಮಾಡಿಸುವುದಾಗಿ ಹೇಳ್ತಿದ್ದಾರೆ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಕಿಡಿಕಾರಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹತ್ತು ವರ್ಷದ ಹಿಂದೇಯೇ ಜಾತಿವಾರು ಜನಗಣತಿ ಮಾಡಿಸಿದ್ದರು. ಒಂದೂವರೆ ಲಕ್ಷ ಶಿಕ್ಷಕರು 2 ವರ್ಷ ಗಣತಿ ಮಾಡಿದ್ದರು. ಅದಕ್ಕೆ 170 ಕೋಟಿಗೂ ಅಧಿಕ ಹಣ ಖರ್ಚಾಗಿತ್ತು. ಆಗಿನಿಂದಲೂ ವರದಿ ಬಹಿರಂಗ ಮಾಡದೇ ಹಾಗೆಯೇ ಇಟ್ಟುಕೊಂಡಿದ್ದರು. ಇದೀಗ ಹೈಕಮಾಂಡ್‌ಗೆ ಹೆದರಿಕೊಂಡು ಮತ್ತೆ ಜಾತಿಗಣತಿ ಮಾಡಿಸುವುದಾಗಿ ಹೇಳಿದ್ದಾರೆ. ಇದು ಹೇಗೆ ಸಾಧ್ಯ? ಎಂದು ಪ್ರಶ್ನೆ ಮಾಡಿದರು.

ಜಾತಿಗಣತಿ ಮಾಡಲು ಶಿಕ್ಷಕರು ಬೇಕು. ಈಗ ತಾನೇ ಶಾಲೆಗಳು ಆರಂಭವಾಗಿರುವುದರಿಂದ ಶಿಕ್ಷಕರು ಲಭ್ಯವಾಗೋದಿಲ್ಲ. ಸಿದ್ದರಾಮಯ್ಯ ಹಾವಾಡಿಗನ ರೀತಿ ಈಗ ಮತ್ತೆ ಜಾತಿಗಣತಿ ಮಾಡಿಸುವುದಾಗಿ ಹೇಳ್ತಿದ್ದಾರೆ. ಮುಂದಿನ ನವೆಂಬರ್ ಅಥವಾ ಡಿಸೆಂಬರ್‌ಗೆ ಸಿದ್ದರಾಮಯ್ಯ ಚೇಂಜ್ ಆಗ್ತಾರೆ. ಈ ಹಿನ್ನೆಲೆಯಲ್ಲಿ ಜಾತಿಗಣತಿ ಮಾಡಲು ಹೇಗೆ ಸಾಧ್ಯ? ಮರುಜಾತಿಗಣತಿ ಮಾಡಿಸುವುದಿಲ್ಲ ಎಂದು ಹೈಕಮಾಂಡ್‌ಗೆ ಹೇಳಿದ್ದರೇ ಸಿದ್ದರಾಮಯ್ಯ ಹೀರೋ‌ ಆಗುತ್ತಿದ್ದರು. ಆದರೆ ಹೈಕಮಾಂಡ್‌ಗೆ ಹೆದರಿಕೊಂಡು ಅದನ್ನು ಹೇಳಿಲ್ಲ. ಸಿದ್ದರಾಮಯ್ಯ ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡಿದರು. ಮೂರು ತಿಂಗಳೊಳಗೆ ಜಾತಿಗಣತಿ ಮಾಡಲು ಸಾಧ್ಯವೇ ಇಲ್ಲ. 170 ಕೋಟಿಗೂ ಹೆಚ್ಚು ಹಣ ಖರ್ಚು ಮಾಡಿ ಜಾತಿಗಣತಿ ಮಾಡಿಸಿದ‌ ವರದಿಯನ್ನು ಈಗ ತಿಪ್ಪೆಗೆ ಎಸೆದಿದ್ದಾರೆ ಎಂದು ಕಿಡಿಕಾರಿದರು.

Tags:
error: Content is protected !!