h vishwanath
ಮೈಸೂರು: ಸಿಎಂ ಸಿದ್ದರಾಮಯ್ಯ ಹಾವಾಡಿಗನ ರೀತಿ ಮತ್ತೆ ಜಾತಿಗಣತಿ ಮಾಡಿಸುವುದಾಗಿ ಹೇಳ್ತಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಕಿಡಿಕಾರಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹತ್ತು ವರ್ಷದ ಹಿಂದೇಯೇ ಜಾತಿವಾರು ಜನಗಣತಿ ಮಾಡಿಸಿದ್ದರು. ಒಂದೂವರೆ ಲಕ್ಷ ಶಿಕ್ಷಕರು 2 ವರ್ಷ ಗಣತಿ ಮಾಡಿದ್ದರು. ಅದಕ್ಕೆ 170 ಕೋಟಿಗೂ ಅಧಿಕ ಹಣ ಖರ್ಚಾಗಿತ್ತು. ಆಗಿನಿಂದಲೂ ವರದಿ ಬಹಿರಂಗ ಮಾಡದೇ ಹಾಗೆಯೇ ಇಟ್ಟುಕೊಂಡಿದ್ದರು. ಇದೀಗ ಹೈಕಮಾಂಡ್ಗೆ ಹೆದರಿಕೊಂಡು ಮತ್ತೆ ಜಾತಿಗಣತಿ ಮಾಡಿಸುವುದಾಗಿ ಹೇಳಿದ್ದಾರೆ. ಇದು ಹೇಗೆ ಸಾಧ್ಯ? ಎಂದು ಪ್ರಶ್ನೆ ಮಾಡಿದರು.
ಜಾತಿಗಣತಿ ಮಾಡಲು ಶಿಕ್ಷಕರು ಬೇಕು. ಈಗ ತಾನೇ ಶಾಲೆಗಳು ಆರಂಭವಾಗಿರುವುದರಿಂದ ಶಿಕ್ಷಕರು ಲಭ್ಯವಾಗೋದಿಲ್ಲ. ಸಿದ್ದರಾಮಯ್ಯ ಹಾವಾಡಿಗನ ರೀತಿ ಈಗ ಮತ್ತೆ ಜಾತಿಗಣತಿ ಮಾಡಿಸುವುದಾಗಿ ಹೇಳ್ತಿದ್ದಾರೆ. ಮುಂದಿನ ನವೆಂಬರ್ ಅಥವಾ ಡಿಸೆಂಬರ್ಗೆ ಸಿದ್ದರಾಮಯ್ಯ ಚೇಂಜ್ ಆಗ್ತಾರೆ. ಈ ಹಿನ್ನೆಲೆಯಲ್ಲಿ ಜಾತಿಗಣತಿ ಮಾಡಲು ಹೇಗೆ ಸಾಧ್ಯ? ಮರುಜಾತಿಗಣತಿ ಮಾಡಿಸುವುದಿಲ್ಲ ಎಂದು ಹೈಕಮಾಂಡ್ಗೆ ಹೇಳಿದ್ದರೇ ಸಿದ್ದರಾಮಯ್ಯ ಹೀರೋ ಆಗುತ್ತಿದ್ದರು. ಆದರೆ ಹೈಕಮಾಂಡ್ಗೆ ಹೆದರಿಕೊಂಡು ಅದನ್ನು ಹೇಳಿಲ್ಲ. ಸಿದ್ದರಾಮಯ್ಯ ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡಿದರು. ಮೂರು ತಿಂಗಳೊಳಗೆ ಜಾತಿಗಣತಿ ಮಾಡಲು ಸಾಧ್ಯವೇ ಇಲ್ಲ. 170 ಕೋಟಿಗೂ ಹೆಚ್ಚು ಹಣ ಖರ್ಚು ಮಾಡಿ ಜಾತಿಗಣತಿ ಮಾಡಿಸಿದ ವರದಿಯನ್ನು ಈಗ ತಿಪ್ಪೆಗೆ ಎಸೆದಿದ್ದಾರೆ ಎಂದು ಕಿಡಿಕಾರಿದರು.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…