h vishwanath
ಮೈಸೂರು: ಸಿಎಂ ಸಿದ್ದರಾಮಯ್ಯ ಹಾವಾಡಿಗನ ರೀತಿ ಮತ್ತೆ ಜಾತಿಗಣತಿ ಮಾಡಿಸುವುದಾಗಿ ಹೇಳ್ತಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಕಿಡಿಕಾರಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹತ್ತು ವರ್ಷದ ಹಿಂದೇಯೇ ಜಾತಿವಾರು ಜನಗಣತಿ ಮಾಡಿಸಿದ್ದರು. ಒಂದೂವರೆ ಲಕ್ಷ ಶಿಕ್ಷಕರು 2 ವರ್ಷ ಗಣತಿ ಮಾಡಿದ್ದರು. ಅದಕ್ಕೆ 170 ಕೋಟಿಗೂ ಅಧಿಕ ಹಣ ಖರ್ಚಾಗಿತ್ತು. ಆಗಿನಿಂದಲೂ ವರದಿ ಬಹಿರಂಗ ಮಾಡದೇ ಹಾಗೆಯೇ ಇಟ್ಟುಕೊಂಡಿದ್ದರು. ಇದೀಗ ಹೈಕಮಾಂಡ್ಗೆ ಹೆದರಿಕೊಂಡು ಮತ್ತೆ ಜಾತಿಗಣತಿ ಮಾಡಿಸುವುದಾಗಿ ಹೇಳಿದ್ದಾರೆ. ಇದು ಹೇಗೆ ಸಾಧ್ಯ? ಎಂದು ಪ್ರಶ್ನೆ ಮಾಡಿದರು.
ಜಾತಿಗಣತಿ ಮಾಡಲು ಶಿಕ್ಷಕರು ಬೇಕು. ಈಗ ತಾನೇ ಶಾಲೆಗಳು ಆರಂಭವಾಗಿರುವುದರಿಂದ ಶಿಕ್ಷಕರು ಲಭ್ಯವಾಗೋದಿಲ್ಲ. ಸಿದ್ದರಾಮಯ್ಯ ಹಾವಾಡಿಗನ ರೀತಿ ಈಗ ಮತ್ತೆ ಜಾತಿಗಣತಿ ಮಾಡಿಸುವುದಾಗಿ ಹೇಳ್ತಿದ್ದಾರೆ. ಮುಂದಿನ ನವೆಂಬರ್ ಅಥವಾ ಡಿಸೆಂಬರ್ಗೆ ಸಿದ್ದರಾಮಯ್ಯ ಚೇಂಜ್ ಆಗ್ತಾರೆ. ಈ ಹಿನ್ನೆಲೆಯಲ್ಲಿ ಜಾತಿಗಣತಿ ಮಾಡಲು ಹೇಗೆ ಸಾಧ್ಯ? ಮರುಜಾತಿಗಣತಿ ಮಾಡಿಸುವುದಿಲ್ಲ ಎಂದು ಹೈಕಮಾಂಡ್ಗೆ ಹೇಳಿದ್ದರೇ ಸಿದ್ದರಾಮಯ್ಯ ಹೀರೋ ಆಗುತ್ತಿದ್ದರು. ಆದರೆ ಹೈಕಮಾಂಡ್ಗೆ ಹೆದರಿಕೊಂಡು ಅದನ್ನು ಹೇಳಿಲ್ಲ. ಸಿದ್ದರಾಮಯ್ಯ ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡಿದರು. ಮೂರು ತಿಂಗಳೊಳಗೆ ಜಾತಿಗಣತಿ ಮಾಡಲು ಸಾಧ್ಯವೇ ಇಲ್ಲ. 170 ಕೋಟಿಗೂ ಹೆಚ್ಚು ಹಣ ಖರ್ಚು ಮಾಡಿ ಜಾತಿಗಣತಿ ಮಾಡಿಸಿದ ವರದಿಯನ್ನು ಈಗ ತಿಪ್ಪೆಗೆ ಎಸೆದಿದ್ದಾರೆ ಎಂದು ಕಿಡಿಕಾರಿದರು.
ಮಾದರಿಯ ನಡೆ! ಮೊನ್ನೆ ಹುಣಸೂರಿನಲ್ಲಿ ನಡೆದ ದಲಿತರ ದೇವಸ್ಥಾನ ಪ್ರವೇಶ ಸಹಪಂಕ್ತಿ ಭೋಜನ ಮಾದರಿ ನಡೆಯಾಗಿದೆ ನಾಡು-ದೇಶಕೆ! ಪ್ರೇರಣೆಯಾಗಿದೆ ಮೇಲ್ಪಂಕ್ತಿಯಾಗಿದೆ…
ಮೈಸೂರಿನ ಅರಮನೆ ವೀಕ್ಷಣೆಗೆ ಪ್ರತಿನಿತ್ಯ ಸಾವಿರಾರು ಜನ ಪ್ರವಾಸಿಗರು ಆಗಮಿಸುತ್ತಾರೆ. ಅರಮನೆಯ ಸುತ್ತಲೂ ನಿರ್ಮಾಣವಾಗಿರುವ ಪಾದಚಾರಿ ಮಾರ್ಗದಲ್ಲಿ ಅಳವಡಿಸಿರುವ ಚಪ್ಪಡಿ…
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ, ಬೂಕನಕೆರೆ ಹೋಬಳಿಯ ಬಹುಪಾಲು ಪ್ರದೇಶಗಳಲ್ಲಿ ಈ ವರ್ಷ ಪೂರ್ವ ಮುಂಗಾರು ಮಳೆ ಆಗದೆ, ಬೆಳೆ…
ಖಾಸಗಿ ಶಾಲೆಗಳು ೬ನೇ ತರಗತಿಯಿಂದಲೇ ಐಐಟಿ ಮತ್ತು ನೀಟ್ ತರಬೇತಿಯನ್ನು ಕಡ್ಡಾಯಗೊಳಿಸಿವೆ. ೧೧-೧೨ ವರ್ಷದ ಪುಟ್ಟ ಮಕ್ಕಳ ಮೇಲೆ ಸ್ಪರ್ಧಾತ್ಮಕ…
ಎನ್.ಹರೀಶ್ ಕುಮಾರ್ ಆರೋಗ್ಯ ಕ್ಷೇತ್ರದಲ್ಲಿ ಪ್ರಮುಖವಾಗಿ ಮುಂಚೂಣಿಯಲ್ಲಿ ಬರುವ ಹೆಸರೆಂದರೆ ಅದು ವೈದ್ಯ ವೃತ್ತಿ. ಆದರೆ ಒಬ್ಬ ರೋಗಿಯು ಗುಣಮುಖ…
ಲಕ್ಷ್ಮೀಕಾಂತ್ ಕೊಮಾರಪ್ಪ ಉತ್ತಮ ಪ್ರದರ್ಶನ ನೀಡಿದ ಎಜಿಒಆರ್ಸಿ ತಂಡ ಚಾಂಪಿಯನ್; ಸದರ್ನ್ ಕಮಾಂಡ್ ತಂಡಕ್ಕೆ ದ್ವಿತೀಯ ಬಹುಮಾನ ಸೋಮವಾರಪೇಟೆ: ಸುಮಾರು…