ಮೈಸೂರು ನಗರ

ಸಚ್ಚಿದಾನದ ಶ್ರೀಗಳ ನೇತೃತ್ವದಲ್ಲಿ ಹನುಮಾನ್‌ ಚಾಲೀಸಾ ಪಾರಾಯಣ ಯಜ್ಞ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅವಧೂತ ದತ್ತ ಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ಬೃಹತ್ ಸಾಮೂಹಿಕ ಹನುಮಾನ್ ಚಾಲೀಸಾ ಪಾರಾಯಣ ಮಹಾಯಜ್ಞ ಕಾರ್ಯಕ್ರಮ ನಡೆಯಿತು.

ಮಹಾರಾಜ ಕಾಲೇಜು ಮೈದಾನದಲ್ಲಿ ಶನಿವಾರ ಬೆಳಿಗ್ಗೆ 10.50 ಗಂಟೆಯಿಂದ ಪ್ರಾರಂಭವಾಗಿ 12 ಗಂಟೆಯವರೆಗೆ ನಡೆಯಿತು. ಸಾವಿರಾರು ಮಂದಿ ಭಕ್ತರು
ಸಾಮೂಹಿಕವಾಗಿ ಹನುಮಾನ್‌ ಚಾಲೀಸಾ ಪಠಣ ಮಾಡಿದರು. ಎಲ್ಲೆಡೆ ಕೇಸರಿ ಧ್ವಜಗಳು ಹಾರಿದವು.

ಆರ್ಶೀವರ್ಚನ ನೀಡಿದ ಗಣಪತಿ ಸಚ್ಚಿದಾನಂದ ಸ್ವಾಮೀಜಿ, ಸುಂದರಕಾಂಡ ಅಧ್ಯಾಯದ ಕುರಿತು ತುಳಸಿದಾಸರು ೪೦ ಶ್ಲೋಕಗಳನ್ನು ರಚಿಸಿದ್ದು, ಅದರ ಪಾರಾಯಣದಿಂದ ಪುಣ್ಯ ಲಭಿಸುತ್ತದೆ. ಹನುಮನನ್ನು ಭಜಿಸದರೆ ಭಯ ದೂರವಾಗಿ ಶಕ್ತಿ ಸಿಗುತ್ತದೆ ಎಂದರು.

ಫೆಬ್ರವರಿ 15ರಂದು ಮಹಾ ಶಿವರಾತ್ರಿ ಜಾಗರಣೆಯೂ ಆಶ್ರಮದಲ್ಲಿ ನಡೆಯಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಧಾರ್ಮಿಕ ಘಟನೆಯನ್ನು ಯಶಸ್ವಿಗೊಳಿಸಬೇಕೆಂದು ಕೋರಿದರು.

ಎಲ್ಲ ಭಕ್ತರಿಗೆ ಹನುಮ ರಕ್ಷೆಯನ್ನು ವಿತರಿಸಲಾಯಿತು.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಾತು ಕೊಟ್ಟಂತೆ ನಡೆದಿದ್ದೇವೆ : ಸಿಎಂ

2.5 ವರ್ಷದಲ್ಲಿ 592 ಭರವಸೆಗಳಲ್ಲಿ 243 ಭರವಸೆ ಈಡೇರಿಕೆ ಹಾವೇರಿ : ಏನು ಮಾತು ಕೊಟ್ಟಿದ್ದೆವೋ ಅದರಂತೆ ನಡೆದಿದ್ದೇವೆ. ಸಾವಿರ…

8 mins ago

4 ಕೆ.ಜಿಗೂ ಹೆಚ್ಚು ಹೆರಾಯಿನ್‌ ವಶ : ಪಾಕ್‌ ಕಳ್ಳ ಸಾಗಣಿಕೆ ಪ್ರಯತ್ನ ವಿಫಲ

ಜಮ್ಮು : ನೆರೆಯ ಪಾಕಿಸ್ತಾನದಿಂದ ಡ್ರೋನ್ ಮೂಲಕ ಬಂದ ನಾಲ್ಕು ಕೆಜಿಗೂ ಹೆಚ್ಚು ಹೆರಾಯಿನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಅಂತಾರಾಷ್ಟ್ರೀಯ ಗಡಿಯಲ್ಲಿ…

17 mins ago

ಮದ್ದೂರು ಮೇಲ್ದರ್ಜೆಗೇರಿಸಲು ಅಗತ್ಯ ಕ್ರಮ : ಸಚಿವ ಚಲುವರಾಯಸ್ವಾಮಿ ಭರವಸೆ

ಮದ್ದೂರು : ಮದ್ದೂರು ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿಸುವ ಸಲುವಾಗಿ ನಗರಸಭೆಗೆ ಗ್ರಾ.ಪಂ‌.ಗಳ ಸೇರ್ಪಡೆ ಸಂಬಂಧ ಸರ್ಕಾರದ ಹಂತದಲ್ಲಿ ಮಾತನಾಡಿ ಕ್ರಮ…

38 mins ago

ಪುಲ್ವಾಮಾ ದಾಳಿ 7 ವರ್ಷ : ಹುತಾತ್ಮರಿಗೆ ಪ್ರಧಾನಿ ಮೋದಿ ಸೇರಿ ಗಣ್ಯರಿಂದ ನಮನ

ಹೊಸದಿಲ್ಲಿ : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ 2019ರ ಫೆಬ್ರವರಿ 14ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಸಿಆರ್‌ಪಿಎಫ್‌ ಸಿಬ್ಬಂದಿಗೆ…

1 hour ago

ಎಮರ್ಜೆನ್ಸಿ ಲ್ಯಾಂಡಿಂಗ್‌ ಉದ್ಘಾಟಿಸಿದ ಪ್ರಧಾನಿ ಮೋದಿ

ಮೋರನ್ : ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಸಾಂನ ಮೋರಂನಲ್ಲಿರುವ ಸಿ-130ಜೆ ವಿಮಾನದಲ್ಲಿ ಈಶಾನ್ಯದ ಮೊದಲ ತುರ್ತು ಲ್ಯಾಂಡಿಂಗ್ ಸೌಲಭ್ಯ…

2 hours ago

ಓದುಗರ ಪತ್ರ | ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸೌಲಭ್ಯ ಕಲ್ಪಿಸಿ

ಚಾಮರಾಜನಗರ ಜಿಲ್ಲೆಯ ಎಲ್ಲಾ ಗ್ರಾಮಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ಅಪಘಾತ ಮೊದಲಾದ ತುರ್ತು ಸಂದರ್ಭಗಳಲ್ಲಿ ರೋಗಿಗಳು ಹಾಗೂ…

4 hours ago