ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅವಧೂತ ದತ್ತ ಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ಬೃಹತ್ ಸಾಮೂಹಿಕ ಹನುಮಾನ್ ಚಾಲೀಸಾ ಪಾರಾಯಣ ಮಹಾಯಜ್ಞ ಕಾರ್ಯಕ್ರಮ ನಡೆಯಿತು.
ಮಹಾರಾಜ ಕಾಲೇಜು ಮೈದಾನದಲ್ಲಿ ಶನಿವಾರ ಬೆಳಿಗ್ಗೆ 10.50 ಗಂಟೆಯಿಂದ ಪ್ರಾರಂಭವಾಗಿ 12 ಗಂಟೆಯವರೆಗೆ ನಡೆಯಿತು. ಸಾವಿರಾರು ಮಂದಿ ಭಕ್ತರು
ಸಾಮೂಹಿಕವಾಗಿ ಹನುಮಾನ್ ಚಾಲೀಸಾ ಪಠಣ ಮಾಡಿದರು. ಎಲ್ಲೆಡೆ ಕೇಸರಿ ಧ್ವಜಗಳು ಹಾರಿದವು.
ಆರ್ಶೀವರ್ಚನ ನೀಡಿದ ಗಣಪತಿ ಸಚ್ಚಿದಾನಂದ ಸ್ವಾಮೀಜಿ, ಸುಂದರಕಾಂಡ ಅಧ್ಯಾಯದ ಕುರಿತು ತುಳಸಿದಾಸರು ೪೦ ಶ್ಲೋಕಗಳನ್ನು ರಚಿಸಿದ್ದು, ಅದರ ಪಾರಾಯಣದಿಂದ ಪುಣ್ಯ ಲಭಿಸುತ್ತದೆ. ಹನುಮನನ್ನು ಭಜಿಸದರೆ ಭಯ ದೂರವಾಗಿ ಶಕ್ತಿ ಸಿಗುತ್ತದೆ ಎಂದರು.
ಫೆಬ್ರವರಿ 15ರಂದು ಮಹಾ ಶಿವರಾತ್ರಿ ಜಾಗರಣೆಯೂ ಆಶ್ರಮದಲ್ಲಿ ನಡೆಯಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಧಾರ್ಮಿಕ ಘಟನೆಯನ್ನು ಯಶಸ್ವಿಗೊಳಿಸಬೇಕೆಂದು ಕೋರಿದರು.
ಎಲ್ಲ ಭಕ್ತರಿಗೆ ಹನುಮ ರಕ್ಷೆಯನ್ನು ವಿತರಿಸಲಾಯಿತು.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…