ಮೈಸೂರು ನಗರ

ಮೈಕ್ರೋ ಫೈನಾನ್ಸ್‌ ಕಂಪನಿಯವರ ಕಿರುಕುಳ ನಿಲ್ಲಬೇಕು: ವಾಟಾಳ್‌ ನಾಗರಾಜ್‌

ಮೈಸೂರು: ಮೈಕ್ರೋ ಫೈನಾನ್ಸ್ ಕಂಪನಿಯವರು ಸಾಲಗಾರರಿಗೆ ನೀಡುತ್ತಿರುವ ಹಿಂಸೆ ಹಾಗೂ ದೌರ್ಜನ್ಯ ನಿಲ್ಲಬೇಕೆಂದು ಒತ್ತಾಯಿಸಿ, ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಒನಕೆ ಹಿಡಿದು ವಿನೂತನವಾಗಿ ಪ್ರತಿಭಟಿಸಿದರು.

ನಗರದ ಹಾರ್ಡಿಂಗ್ ವೃತ್ತದ ಬಳಿ ಭಾನುವಾರ ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ನೆರೆ ರಾಜ್ಯಗಳ ಕಪ್ಪು ಹಣ ತಂದು ರಾಜ್ಯದ ಜನರಿಗೆ ಹಿಂಸೆ ಕೊಡುವ ಫೈನಾನ್ಸ್ ಕಂಪನಿಗಳ ವಿರುದ್ಧ ಕಾನೂನಾತ್ಮಕ ಕ್ರಮ ಜರುಗಿಸಬೇಕು. ರಾಜ್ಯದಲ್ಲಿ ತಲೆ ಎತ್ತಿರುವ ಅಕ್ರಮ ಫೈನಾನ್ಸ್ ಕಂಪನಿಗಳನ್ನು ರದ್ದು ಮಾಡಬೇಕು. ಫೈನಾನ್ಸ್ ಕಂಪನಿಗಳ ವಿರುದ್ಧ ನಿವೃತ್ತ ನ್ಯಾಯಾಧೀಶರನ್ನು ನೇಮಕ ಮಾಡಿ ತನಿಖೆ ನಡೆಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಕರ್ನಾಟಕ ಬಂದ್‌ಗೂ ಕರೆ ನೀಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಜಾರಿ ನಿರ್ದೇಶನಾಲಯದವರೇ, ನಿಮಗೆ ತಾಕತ್ತಿದ್ದರೆ ಮೈಕ್ರೋ ಫೈನಾನ್ಸ್‌ಗಳ ಮೇಲೆ ದಾಳಿ ಮಾಡಿ. ಮೈಕ್ರೋ ಫೈನಾನ್ಸ್ ಸಾಲ ದೌರ್ಜನ್ಯ ನಿಲ್ಲಿಸಿ ಎಂದು ಒತ್ತಾಯಿಸಿದರು.

ಕೇಂದ್ರ ಬಜೆಟ್ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ರಾಜ್ಯಕ್ಕೆ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತೋರಿದೆ. ನಮ್ಮ ಸಂಸದರಿಗೆ ಮಾನ ಮರ್ಯಾದೆ ಇಲ್ಲ. ಎಚ್.ಡಿ.ಕುವಾರಸ್ವಾಮಿ ಊರಲ್ಲಿರುವುದೆಲ್ಲ ಮಾತಾಡ್ತಾರೆ, ಇದರ ಬಗ್ಗೆ ಏಕೆ ಮಾತನಾಡಿಲ್ಲ. ಜೋಶಿ ಬಹಳ ಮಡಿವಂತ. ಆದರೆ ಬಜೆಟ್ ಬಗ್ಗೆ ಮಾತನಾಡಿಲ್ಲ ಯಾಕೆ? ಶೋಭಾ ಕರಂದ್ಲಾಜೆ ತುಟಿ ಬಿಚ್ಚಿಲ್ಲ ಯಾಕೆ? ಎಂದು ವಾಗ್ದಾಳಿ ನಡೆಸಿದರು.

ರಾಜೀನಾಮೆ ಕೊಡಬಾರದು:

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಇರೋದರಲ್ಲಿ ಒಬ್ಬ ಒಳ್ಳೆಯ ವ್ಯಕ್ತಿ. ಇವರೇ ಕೊನೆ ಕೊಂಡಿ, ಈ ಕೊಂಡಿ ಕಳಚಿದರೆ ರಾಜ್ಯ ದಿಕ್ಕೆಟ್ಟು ಹೋಗುತ್ತದೆ. ಸಿದ್ದರಾಮಯರನ್ನು ಸಿಎಂ ಸ್ಥಾನದಿಂದ ಇಳಿಸಲು ಜಾ.ದಳ, ಬಿಜೆಪಿ ಮತ್ತು ಕಾಂಗ್ರೆಸ್‌ನ ಕೆಲವರು ಪಿತೂರಿ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಬಾರದು ಎಂದು ಒತ್ತಾಯಿಸಿದರು.

ರಾಜ್ಯಪಾಲರು ಪ್ರಾಸಿಕೂಷನ್ ಕೊಡಬಾರದಿತ್ತು, ರಾಜ್ಯಪಾಲರಿಗೆ ಇರುವ ಈ ಕೆಟ್ಟ ಅಧಿಕಾರ ತೆಗೆಯಬೇಕು. ಇದಕ್ಕೆ ಸಂಬಂಧಿಸಿದಂತೆ ಚರ್ಚೆಗಳು ನಡೆಯಬೇಕು. ಸಿದ್ದರಾಮಯ್ಯ ನೂರಾರು ನಾಗರಹಾವುಗಳ ನಡುವೆ ಮಲಗಿದ್ದಾರೆ, ಜೋಪಾನವಾಗಿ ಇರಬೇಕು. ಸಿದ್ದರಾಮಯ್ಯ ಅರೆಸ್ಟ್ ಆದರೂ ರಾಜೀನಾಮೆ ಕೊಡಬೇಡಿ, ಜೈಲಿನಲ್ಲೇ ಇದ್ದು ಆಡಳಿತ ಮಾಡಿ ಎಂದರು.

 

ಆಂದೋಲನ ಡೆಸ್ಕ್

Recent Posts

ಭಾರತಕ್ಕೆ ಬಂದು ನೇರವಾಗಿ ವಿಚಾರಣೆ ಎದುರಿಸಬೇಕು : ವಿಜಯ್‌ ಮಲ್ಯೆಗೆ ಕೋರ್ಟ್‌ ಚಾಟಿ

ಮುಂಬೈ : ಲಂಡನ್ನಿನಲ್ಲಿ ಇದ್ದುಕೊಂಡು ದೇಶ ಭ್ರಷ್ಟ ಆರ್ಥಿಕ ಅಪರಾಧಿಗಳ ಕಾಯ್ದೆಯ (ಎಫ್‌ಇಒ) ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸುವ ಬದಲು, ಭಾರತಕ್ಕೆ…

14 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ವಾಣಿಜ್ಯ ಮಂಡಳಿ: ಹೊಸ ಬಿರುಸು, ಗರಿಗೆದರಿದ ಕಲಾವಿದರ ಸಂಘ

ಚುನಾವಣೆ ಕಳೆದು ಚಲನಚಿತ್ರ ವಾಣಿಜ್ಯ ಮಂಡಳಿಗೆ ಹೊಸ ಭಾರವಾಹಿಗಳ ಆಯ್ಕೆ ಆಗಿದೆ. ನಟ, ನಿರ್ಮಾಪಕಿ ಜಯಮಾಲ ನೇತೃತ್ವದ ಆಡಳಿತ ಮಂಡಳಿ…

2 hours ago

ಹೀಲಿಯಂ ಗ್ಯಾಸ್ ಬಲೂನ್ ಮಾರಾಟಕ್ಕಿಲ್ಲ ಕಡಿವಾಣ

ಹಳ್ಳಿಗಳ ಹಬ್ಬ, ಜಾತ್ರೆಗಳಲ್ಲಿ ಬಲೂನ್‌ಗಳ ಮಾರಾಟ ಅವಘಡ ಸಂಭವಿಸಿದರೆ ಯಾರು ಹೊಣೆ? 2025ರ ವರ್ಷಾಂತ್ಯದಲ್ಲಿ ಮೈಸೂರಿನಲ್ಲಿ ನಡೆದಿದ್ದ ಸ್ಫೋಟ ಬಲೂನ್‌ಗಳಿಗೆ…

3 hours ago

ನಗರೀಕರಣದಿಂದ ಮಾದಗಳ್ಳಿ ಕೆರೆಗೆ ಕಂಟಕ

ಕುಕ್ಕರಹಳ್ಳಿ ಕೆರೆಯ ಜಲಮೂಲ ಉಳಿವಿಕೆ ಅಭಿಯಾನ ಅಭಿಯಾನಕ್ಕೆ ಹೆಚ್ಚುತ್ತಿರುವ ಜನಬೆಂಬಲ ನಾಲಾ ನಡಿಗೆ, ನಾಲಾ ಹಬ್ಬ ಆಚರಿಸಲು ನಿರ್ಧಾರ ಗಿರೀಶ್‌…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಫೆಬ್ರವರಿ 13 ಶುಕ್ರವಾರ  

5 hours ago

T 20 World Cup : ನಮೀಬಿಯ ವಿರುದ್ಧ ಭಾರತಕ್ಕೆ 93 ರನ್‌ಗಳ ಭರ್ಜರಿ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…

14 hours ago