ಮೈಸೂರು ನಗರ

ಪಂಚ ಗ್ಯಾರಂಟಿಯಿಂದ ಅಭಿವೃದ್ಧಿ ಆಗಿದೆಯೇ?: ತಜ್ಞರಿಂದ ಸಮೀಕ್ಷೆಗೆ ವಿಶ್ವನಾಥ್‌ ಒತ್ತಾಯ

ಮೈಸೂರು: ಪಂಚ ಗ್ಯಾರಂಟಿಗಳನ್ನು ನೀಡಿದ ನಂತರ ರಾಜ್ಯದಲ್ಲಿ ಅಭಿವೃದ್ಧಿ ಆಗಿದೆಯೋ ಇಲ್ಲವೋ ಎಂಬ ಬಗ್ಗೆ ಸಮೀಕ್ಷೆ ನಡೆಸಲು ತಜ್ಞರ ಸಮಿತಿ ರಚಿಸಬೇಕು ಎಂದು ವಿಧಾನಪರಿಷತ್‌ ಸದಸ್ಯ ಎ.ಎಚ್‌. ವಿಶ್ವನಾಥ್‌ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗ್ಯಾರಂಟಿಗಳಿಂದ ಏನೇನು ಅಭಿವೃದ್ಧಿಯಾಗಿದೆ ಎಂಬುದನ್ನು ಸರ್ಕಾರ ಹೇಳಲಿ ಎಂದು ಒತ್ತಾಯಿಸಿದರು.

ನಿರ್ದಿಷ್ಟ ಮಾನದಂಡವನ್ನೇ ಇಟ್ಟುಕೊಳ್ಳದೇ ಎಲ್ಲರಿಗೂ ಗ್ಯಾರಂಟಿಗಳನ್ನು ನೀಡಿರುವುದರಿಂದಾಗಿ ಆರ್ಥಿಕ ಶಿಸ್ತೇ ಇಲ್ಲದಂತಾಗಿದೆ. ಜನರ ತೆರಿಗೆ ಹಣವನ್ನೆಲ್ಲಾ ಉಚಿತ ಕೊಡುಗೆಗಳಿಗೆ ಬಳಸುತ್ತಿರುವುದರಿಂದಾಗಿ ಅಭಿವೃದ್ಧಿಯೇ ಇಲ್ಲದಂತಾಗಿದೆ. ಸಮರ್ಪಕ ಆಡಳಿತವೇ ಇಲ್ಲದೇ ರಾಜ್ಯ ಹಾಳಾಗಿದೆ. ಈ ಅನಾಹುತಕ್ಕೆಲ್ಲಾ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಕಾರಣ ಎಂದು ದೂರಿದರು.

ಉಚಿತ ಕೊಡುಗೆಗಳನ್ನು ಸರ್ಕಾರದ ಹಣದಲ್ಲಿ ಕೊಡುತ್ತಿರುವುದು ಸರಿಯಲ್ಲ. ಅದರ ಬದಲಿಗೆ ಜನರನ್ನು ಸಬಲೀಕರಣ‌ ಮಾಡಿ ಎಂದು ಸುಪ್ರೀಂಕೋರ್ಟ್‌ ಈಚೆಗೆ ಹೇಳಿದೆ. ವೃದ್ಧಾಪ್ಯ ವೇತನ, ಅಂಗವಿಕಲರ ವೇತನಕ್ಕೆ ಮಾನದಂಡವಿದೆ. ಆದರೆ, ಗ್ಯಾರಂಟಿಗೆ ಏನಿದೆ? ಸಿದ್ದರಾಮಯ್ಯ ಕೊಟ್ಟರು ಎಂದು ಪ್ರಚಾರ ಪಡೆಯುವ ಹುಚ್ಚೇ? ಎಂದು ಕೇಳಿದರು.

‘ರಾಜ್ಯಕ್ಕೆ ಈಗ ₹ 7.50 ಲಕ್ಷ ಕೋಟಿ ಸಾಲ ಇದೆ. ಅದರಲ್ಲಿ ₹ 5 ಲಕ್ಷ ಕೋಟಿ ಸಾಲ ಮಾಡಿರುವವರು ಸಿದ್ದರಾಮಯ್ಯ. ಅವರಿಗಿಂತಲೂ ಉತ್ತಮ ಹಣಕಾಸು ಸಚಿವರು ನಮ್ಮಲ್ಲಿ ಆಗಿ ಹೋಗಿದ್ದಾರೆ. ಅವರನ್ನೆಲ್ಲ ಇವರು ಯಾವ ರೀತಿಯಲ್ಲಿ ಮೀರಿಸಿದ್ದಾರೆ? ಸಾಲ ಮಾಡಿ ಉಚಿತವಾಗಿ ‌ಕೊಡುವುದು ಎಷ್ಟು ಸರಿ? ಇದೇನಾ ಸಿದ್ದರಾಮಯ್ಯನವರ ಆರ್ಥಿಕ ತಜ್ಞತೆ?’ ಎಂದು ವಾಗ್ದಾಳಿ ನಡೆಸಿದರು. ‘₹ 7 ಲಕ್ಷ ಕೋಟಿ ಸಾಲ ಇಟ್ಟುಕೊಂಡು ₹ 4 ಲಕ್ಷ ಕೋಟಿ ಬಜೆಟ್ ಕೊಡುವುದು ಯಾವ ಸೀಮೆಯ ಬಜೆಟ್’ ಎಂದು ಪ್ರಶ್ನಿಸಿದರು.

‘ಜನರಿಗೆ ಮದ್ಯ ಕುಡಿಸಿ ಆ ಪಾಪದ ಹಣ 45 ಸಾವಿರ ಕೋಟಿಯಲ್ಲಿ ಉಚಿತ ಕೊಡುಗೆ ‌ಕೊಡುತ್ತಿದ್ದೀರಿ. ಪತಿಗೆ ಹೆಂಡ ಕುಡಿಸುವುದು, ಅದರಲ್ಲಿ ಬರುವ ಹಣವನ್ನೇ ಪತ್ನಿಗೆ ಕೊಡುವುದು ನಾಚಿಕೆಗೇಡಲ್ಲವೇ?’ ಎಂದು ಕೇಳಿದರು. ‘ಇದರ ಬದಲಿಗೆ ಶಿಕ್ಷಣ ಹಾಗೂ ಆರೋಗ್ಯವನ್ನು ಉಚಿತವಾಗಿ ಕೊಡಿ’ ಎಂದು ಒತ್ತಾಯಿಸಿದರು.

‘ಸಿದ್ದರಾಮಯ್ಯನವರೇ, ರಾಜ್ಯದ ಚರಿತ್ರೆ ಓದಿಕೊಳ್ಳಿ. ನಾನೇ ನಾನೇ ಎಂಬ ದುರಹಂಕಾರ ಬಿಡಿ. ಕಾಂಗ್ರೆಸ್ ಸರ್ಕಾರ ಹಿಂದೆಂದೂ ಈ ರೀತಿ ಮಾಡಿರಲಿಲ್ಲ. ಜನರ ಸಬಲೀಕರಣಕ್ಕೆ ಪೂರಕವಾದ ಕಾರ್ಯಕ್ರಮಗಳನ್ನು ಕೊಡುತ್ತಿತ್ತು. ನಿಮ್ಮನ್ನು ಕಾಂಗ್ರೆಸ್‌ಗೆ ಕರೆದುಕೊಂಡು ಬಂದಿದ್ದಕ್ಕೆ ಪಶ್ಚಾತ್ತಾಪ ಆಗುತ್ತಿದೆ. ಹೀಗಾಗಿ, ಗಾಂಧೀಜಿ ಪ್ರತಿಮೆಯ ಬಳಿ ಪಶ್ಚಾತ್ತಾಪ ಸಭೆ ಮಾಡೋಣ ಎಂದುಕೊಂಡಿದ್ದೇನೆ’ ಎಂದು ತಿಳಿಸಿದರು.

‘ಮಾತು ತಪ್ಪಿದ ಮಗ ನೀವು. ಶಿವಕುಮಾರ್ ಅವರಿಗೆ ಹೊಡೆತ ಕೊಟ್ಟಿದ್ದೀರಿ. ಈ ಸರ್ಕಾರ ಬರಲು ಶಿವಕುಮಾರ್ ಅವರ ಕೊಡುಗೆ ಏನೂ ಇಲ್ಲವೇ? ಅವರಿಗೆ ಅಧಿಕಾರ ‌ಕೊಡಬೇಕಲ್ಲವೇ?’ ಎಂದು ಕೇಳಿದರು.

‘ನಾನೇ ಮಹಾಮೇಧಾವಿ, ಮಹಾ ಆರ್ಥಿಕ ತಜ್ಞ ಹಾಗೂ ಮಹಾಬುದ್ಧಿವಂತ ಎಂಬ ಅಹಂ ಬಿಟ್ಟು, ಅರ್ಹರಿಗೆ ಮಾತ್ರವೇ ಗ್ಯಾರಂಟಿ ಯೋಜನೆಗಳನ್ನು ಕೊಡಿ’ ಎಂದರು.

ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಬಂಧಿಸಿರುವುದು ಖಂಡನೀಯ. ಅವರು ಈ ನೆಲದ ಕಾನೂನಿನ ಮೂಲಕ ಹೋರಾಟ ಮಾಡುತ್ತಿದ್ದಾರೆ.‌ ರಾಜ್ಯದಲ್ಲೇನು ತುರ್ತು ಪರಿಸ್ಥಿತಿ ಇದೆಯೇ? ಸರ್ಕಾರದ ತಪ್ಪು ಹುಡುಕಿದವರನ್ನು ಜೈಲಿಗೆ ಹಾಕುತ್ತೀರಾ?’ ಎಂದು ಕೇಳಿದರು.

‘ಮನರೇಗಾ ಮುಗಿದ ಅಧ್ಯಾಯ. ಕೇಂದ್ರ ಸರ್ಕಾರ ಈಗಾಗಲೇ ವಿಬಿ ಜಿರಾಮ್ ಜಿ ಕಾಯ್ದೆಯನ್ನು ಮಾಡಿದೆ. ಅಲ್ಲಿಗೆ ಮುಗಿಯಿತು. ಬದಲಾವಣೆಗೆ ಒಗ್ಗಿಕೊಂಡು ಹೋಗಲೇಬೇಕು’ ಎಂದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಚೇತನ್ ಅಹಿಂಸಾ ಗಡಿಪಾರಿಗೆ ಆಗ್ರಹ

ಅಭಿಮಾನಿಗಳು, ನಿರ್ಮಾಪಕರ ಸಂಘದ ಆಕ್ರೋಶ ಬೆಂಗಳೂರು : ಪದ್ಮಭೂಷಣ ಡಾ.ರಾಜ್‌ಕುಮಾರ್ ಅವರ ಸ್ಮಾರಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ…

40 mins ago

ಕೊಡಗು | ಗುಂಡು ಹೊಡೆದುಕೊಂಡು ಶಿಕ್ಷಕಿ ಆತ್ಮಹತ್ಯೆ

ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.…

54 mins ago

ಬಿಜೆಪಿಗೆ ಸೇರ್ಪಡೆಗೊಂಡ 7 ರಾಜ್ಯಸಭಾ ಸದಸ್ಯರ ವಿರುದ್ಧ ಕ್ರಮಕ್ಕೆ ಎಎಪಿ ಆಗ್ರಹ

ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ)…

1 hour ago

ಶಾಲೆಗಳಲ್ಲಿ ದಿನಪತ್ರಿಕೆ ಓದುವುದು ಇನ್ಮುಂದೆ ಕಡ್ಡಾಯ

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ…

2 hours ago

ಜನಗಣತಿಯಲ್ಲಿ ಪ್ರತಿಯೊಬ್ಬ ನಾಗರಿಕನ ಪಾಲ್ಗೊಳ್ಳುವಿಕೆ ಅತ್ಯಗತ್ಯ: ಪ್ರಧಾನಿ ಮೋದಿ

ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ…

2 hours ago

ಮೈಸೂರು | ಕರಗ ಮಹೋತ್ಸವ ಸಂಪನ್ನ

ಮೈಸೂರು : ನಗರದ ಇಟ್ಟಿಗೆಗೂಡಿನ ಶ್ರೀ ರೇಣುಕಾದೇವಿ ಕರಗ ದೇವಸ್ಥಾನ ಟ್ರಸ್ಟ್, ಶ್ರೀ ಚಾಮುಂಡೇಶ್ವರಿ ಮತ್ತು ಮಾರಿಯಮ್ಮನವರ ೧೦೨ನೇ ಕರಗಮಹೋತ್ಸವ…

3 hours ago