Mysore
21
overcast clouds

Social Media

ಮಂಗಳವಾರ, 18 ಆಗಸ್ಟ್ 2026
Light
Dark

ಸಿಪಿ ಯೋಗೇಶ್ವರ್‌ನಿಂದ ಆತುರದ ನಿರ್ಧಾರ: ವಿ.ಸೋಮಣ್ಣ

ಮೈಸೂರು: ಸಿಪಿ ಯೋಗೇಶ್ವರ್‌ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರುವ ಮೂಲಕ ಆತುರದ ನಿರ್ಧಾರ ತೆಗೆದುಕೊಂಡಿದ್ದಾರೆ. ರಾಜ್ಯದ ಮೂರು ಕ್ಷೇತ್ರದಲ್ಲೂ ಎನ್.ಡಿ.ಎ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ವಿಶ್ವಾಸ ವ್ಯಕ್ತಪಡಿಸಿದರು.

ನಗರದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಎನ್‌ಡಿಎ ಅಲೆ ಇದೆ. ಯೋಗೇಶ್ವರ್‌ ಆತುರದ ನಿರ್ಧಾರ ತೆಗೆದುಕೊಂಡಿದ್ದಾರೆ. ಚನ್ನಪಟ್ಟಣದಲ್ಲಿ ನಮ್ಮ ಅಭ್ಯರ್ಥಿ ಗೆಲ್ಲುತ್ತಾರೆ ಎಂದು ಹೇಳಿದರು.

ಎನ್‌ಡಿಎ ಅಲೆಯಿಂದ ಕಾಂಗ್ರೆಸ್‌ ಅಭ್ಯರ್ಥಿ ಸೋಲುತ್ತಾರೆ. ರಾಜ್ಯ ಸರ್ಕಾರಕ್ಕೆ ಇದೊಂದು ಎಚ್ಚರಿಕೆಯ ಗಂಟೆ ಆಗಲಿದೆ ಎಂದರು.

Tags:
error: Content is protected !!