ಮೈಸೂರು ನಗರ

ಇಡಿ ದಾಳಿಯಲ್ಲಿ ರಾಜಕೀಯ ಉದ್ದೇಶವಿರಬಾರದು: ಸಚಿವ ಎಚ್.ಸಿ.ಮಹದೇವಪ್ಪ

ಮೈಸೂರು: ತನಿಖಾ ಸಂಸ್ಥೆಗಳು ದಾಳಿ ನಡೆಸಲು ಸಂವಿಧಾನದಲ್ಲಿ ಮುಕ್ತ ಅವಕಾಶ ನೀಡಲಾಗಿದೆ ಎಂದು ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.

ಬಳ್ಳಾರಿಯಲ್ಲಿ ಕಾಂಗ್ರೆಸ್‌ ಸಂಸದರು ಹಾಗೂ ಶಾಸಕರ ಮನೆ ಹಾಗೂ ಕಚೇರಿಗಳ ಮೇಲೆ ಇಡಿ ದಾಳಿ ನಡೆಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಎಚ್.ಸಿ.ಮಹದೇವಪ್ಪ ಅವರು, ತನಿಖಾ ಸಂಸ್ಥೆಗಳು ದಾಳಿ ನಡೆಸಲು ಸಂವಿಧಾನದಲ್ಲಿ ಮುಕ್ತ ಅವಕಾಶ ನೀಡಲಾಗಿದೆ. ಇಡಿಗೆ ದೂರು ಹೋಗಿರುತ್ತದೆ. ಈ ಹಿನ್ನೆಲೆಯಲ್ಲಿ ಇಡಿ ದಾಳಿಯಾಗಿರುತ್ತೆ. ಆದರೆ ಇಡಿ ದಾಳಿಯಲ್ಲಿ ರಾಜಕೀಯ ಉದ್ದೇಶವಿರಬಾರದು ಎಂದರು.

ಇನ್ನು ನವೆಂಬರ್‌ನಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸಿಎಂ ಖುರ್ಚಿ ಗಟ್ಟಿಯಾಗಿದ್ದು, ಅದರ ಮೇಲೆ ಕುಳಿತಿರುವವರು ಕೂಡ ಗಟ್ಟಿಯಾಗಿದ್ದಾರೆ. ಆದ್ದರಿಂದ ಸಿಎಂ ಬದಲಾವಣೆ ಕೇವಲ ಊಹಾಪೋಹ ಎಂದು ಸ್ಪಷ್ಟನೆ ನೀಡಿದರು.

ಇನ್ನು ಬೆಂಗಳೂರು ಕಾಲ್ತುಳಿತ ದುರಂತ ಪ್ರಕರಣ ಖಂಡಿಸಿ ನಾಳೆ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ವಿಪಕ್ಷಗಳು ಇರೋದೇ ವಿರೋಧ ಮಾಡೋಕೆ. ಬೆಂಗಳೂರು ಘಟನೆ ಒಂದು ಹೃದಯವಿದ್ರಾವಕ ಘಟನೆ. ನಿರೀಕ್ಷೆಗಿಂತ ಹೆಚ್ಚಿನ ಜನ ಬಂದು ದುರಂತ ಆಗಿದೆ. ಇಂತಹ ಘಟನೆಗಳು ಬೇರೆ ಕಡೆ ನಡೆದಾಗ ಯಾರು ರಾಜೀನಾಮೆ ಕೊಟ್ಟಿದ್ರು? ಎಂದು ಪ್ರಶ್ನಿಸಿದ ಅವರು, ನೈತಿಕ ಹೊಣೆ ಅನ್ನೋದು ಮಹತ್ವದ್ದು. ತನಿಖೆ ನಡೆಯುತ್ತಿದ್ದು, ಯಾರದು ತಪ್ಪಿದೆ ಎಂದು ತನಿಖೆ ಬಳಿಕ ತಿಳಿಯಲಿದೆ ಎಂದು ಹೇಳಿದರು.

ಇನ್ನು ರಾಜ್ಯದಲ್ಲಿ ತೀವ್ರ ಚರ್ಚೆಯಾಗುತ್ತಿರುವ ಸಂಪುಟ ಪುನರ್‌ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಇದು ಹೈಕಮಾಂಡ್‌ಗೆ ಬಿಟ್ಟ ವಿಚಾರ. ಈ ಬಗ್ಗೆ ನನಗೆ ಗೊತ್ತಿಲ್ಲ. ಒಂದು ವೇಳೆ ಹೈಕಮಾಂಡ್ ಸಂಪುಟ ಪುನರ್‌ರಚನೆ ಬಗ್ಗೆ ನನ್ನನ್ನು ಸಲಹೆ ಕೊಡಿ ಎಂದು ಕೇಳಿದ್ರೆ ಕೊಡ್ತೀನಿ ಎಂದರು.

ಆಂದೋಲನ ಡೆಸ್ಕ್

Recent Posts

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ: ಇರಾನಿನ ಕೆಲ ಬೇಡಿಕೆಗಳಿಗೆ ಅಮೇರಿಕಾ ತಾತ್ವಿಕ ಒಪ್ಪಿಗೆ

ಇಸ್ಲಾಮಾಬಾದ್:‌ ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್‌ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್‌ ಮೊಹಮ್ಮದ್‌…

3 hours ago

ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್‌ ವೇವ್‌ ಎಚ್ಚರಿಕೆ…

6 hours ago

ಆರು ಹಸುಗಳ ಸಜೀವ ದಹನ ಪ್ರಕರಣ: ಆರೋಪಿ ಬಂಧನ

ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…

6 hours ago

ಅಮರನಾಥ ಯಾತ್ರೆಗೆ ಏಪ್ರಿಲ್.15ರಿಂದ ನೋಂದಣಿ‌

ನವದೆಹಲಿ: ಇದೇ ಏಪ್ರಿಲ್.‌15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…

6 hours ago

ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…

6 hours ago

ಪ್ರಧಾನಿ ಮೋದಿ-ರಾಹುಲ್ ಗಾಂಧಿ ಮಾತುಕತೆ: ವಿಡಿಯೋ ವೈರಲ್

ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…

6 hours ago