hc mahadevappa
ಮೈಸೂರು: ತನಿಖಾ ಸಂಸ್ಥೆಗಳು ದಾಳಿ ನಡೆಸಲು ಸಂವಿಧಾನದಲ್ಲಿ ಮುಕ್ತ ಅವಕಾಶ ನೀಡಲಾಗಿದೆ ಎಂದು ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.
ಬಳ್ಳಾರಿಯಲ್ಲಿ ಕಾಂಗ್ರೆಸ್ ಸಂಸದರು ಹಾಗೂ ಶಾಸಕರ ಮನೆ ಹಾಗೂ ಕಚೇರಿಗಳ ಮೇಲೆ ಇಡಿ ದಾಳಿ ನಡೆಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಎಚ್.ಸಿ.ಮಹದೇವಪ್ಪ ಅವರು, ತನಿಖಾ ಸಂಸ್ಥೆಗಳು ದಾಳಿ ನಡೆಸಲು ಸಂವಿಧಾನದಲ್ಲಿ ಮುಕ್ತ ಅವಕಾಶ ನೀಡಲಾಗಿದೆ. ಇಡಿಗೆ ದೂರು ಹೋಗಿರುತ್ತದೆ. ಈ ಹಿನ್ನೆಲೆಯಲ್ಲಿ ಇಡಿ ದಾಳಿಯಾಗಿರುತ್ತೆ. ಆದರೆ ಇಡಿ ದಾಳಿಯಲ್ಲಿ ರಾಜಕೀಯ ಉದ್ದೇಶವಿರಬಾರದು ಎಂದರು.
ಇನ್ನು ನವೆಂಬರ್ನಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸಿಎಂ ಖುರ್ಚಿ ಗಟ್ಟಿಯಾಗಿದ್ದು, ಅದರ ಮೇಲೆ ಕುಳಿತಿರುವವರು ಕೂಡ ಗಟ್ಟಿಯಾಗಿದ್ದಾರೆ. ಆದ್ದರಿಂದ ಸಿಎಂ ಬದಲಾವಣೆ ಕೇವಲ ಊಹಾಪೋಹ ಎಂದು ಸ್ಪಷ್ಟನೆ ನೀಡಿದರು.
ಇನ್ನು ಬೆಂಗಳೂರು ಕಾಲ್ತುಳಿತ ದುರಂತ ಪ್ರಕರಣ ಖಂಡಿಸಿ ನಾಳೆ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ವಿಪಕ್ಷಗಳು ಇರೋದೇ ವಿರೋಧ ಮಾಡೋಕೆ. ಬೆಂಗಳೂರು ಘಟನೆ ಒಂದು ಹೃದಯವಿದ್ರಾವಕ ಘಟನೆ. ನಿರೀಕ್ಷೆಗಿಂತ ಹೆಚ್ಚಿನ ಜನ ಬಂದು ದುರಂತ ಆಗಿದೆ. ಇಂತಹ ಘಟನೆಗಳು ಬೇರೆ ಕಡೆ ನಡೆದಾಗ ಯಾರು ರಾಜೀನಾಮೆ ಕೊಟ್ಟಿದ್ರು? ಎಂದು ಪ್ರಶ್ನಿಸಿದ ಅವರು, ನೈತಿಕ ಹೊಣೆ ಅನ್ನೋದು ಮಹತ್ವದ್ದು. ತನಿಖೆ ನಡೆಯುತ್ತಿದ್ದು, ಯಾರದು ತಪ್ಪಿದೆ ಎಂದು ತನಿಖೆ ಬಳಿಕ ತಿಳಿಯಲಿದೆ ಎಂದು ಹೇಳಿದರು.
ಇನ್ನು ರಾಜ್ಯದಲ್ಲಿ ತೀವ್ರ ಚರ್ಚೆಯಾಗುತ್ತಿರುವ ಸಂಪುಟ ಪುನರ್ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಇದು ಹೈಕಮಾಂಡ್ಗೆ ಬಿಟ್ಟ ವಿಚಾರ. ಈ ಬಗ್ಗೆ ನನಗೆ ಗೊತ್ತಿಲ್ಲ. ಒಂದು ವೇಳೆ ಹೈಕಮಾಂಡ್ ಸಂಪುಟ ಪುನರ್ರಚನೆ ಬಗ್ಗೆ ನನ್ನನ್ನು ಸಲಹೆ ಕೊಡಿ ಎಂದು ಕೇಳಿದ್ರೆ ಕೊಡ್ತೀನಿ ಎಂದರು.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…