ಮೈಸೂರು ನಗರ

ಸಿಎಂ ಸಿದ್ದು ವಿರುದ್ಧದ ಇಡಿ ಪ್ರಕರಣದ ಹಿಂದೆ ಎಚ್‌ಡಿಕೆ ಕೈವಾಡ: ಲಕ್ಷ್ಮಣ್‌

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇ.ಡಿ. ʼಹಣದ ಅಕ್ರಮ ವರ್ಗಾವಣೆ ತಡೆ ಕಾಯ್ದೆʼ ಅಡಿಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿರುವುದರ ಹಿಂದೆ ಕೇಂದ್ರ ಎಚ್‌.ಡಿ.ಕುಮಾರಸ್ವಾಮಿ ಅವರ ಕೈವಾಡವಿದೆ ಎಣದು ಕೆಪಿಸಿಸಿ ವಕ್ತಾರ ಎಂ.ಲಕ್ಷಣ್‌ ಆರೋಪಿಸಿದರು.

ನಗರದಲ್ಲಿ ಇಂದು (ಅಕ್ಟೋಬರ್‌ 2) ಸುದ್ದಿಗಾರರೊಂದಿಗೆ ಮಾತನಾಡಿದ ಅವರು ʼಮುಡಾ ಪ್ರಕರಣವನ್ನು ಕೇಂದ್ರದ ತನಿಖಾ ಸಂಸ್ಥೆಯಿಂದ ನಡೆಸುವಂತೆ ಎಚ್‌.ಡಿ.ಕುಮಾರಸ್ವಾಮಿ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಪತ್ರ ಬರೆದಿದ್ದರು. ಈ ಪತ್ರವನ್ನು ಆಧರಿಸಿ ಇ.ಡಿ.ಅಧಿಕಾರಿಗಳು ಇಸಿಐಆರ್ ದಾಖಲಿಸಿದ್ದರು. ಅದೇ ರೀತಿ ಸಿಎಂ ವಿರುದ್ಧ ಎಫ್‌ಐಆರ್‌ ದಾಖಲಾಗುವಂತೆ ಮಾಡಿದ್ದ ದೂರುದಾರ ಸ್ನೇಹಮಯಿ ಕೃಷ್ಣ ಕೂಡ ಸಿದ್ದರಾಮಯ್ಯರ ಅವರ ವಿರುದ್ಧ ದೂರು ಇ.ಡಿಗೆ ದೂರು ನೀಡಿದ್ದಾರೆʼ ಎಂದು ಆರೋಪಿಸಿದರು.

ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳು ಸಿಎಂ ಸಿದ್ದರಾಮಯ್ಯ ಅವರನ್ನು ಹೇಗಾದರೂ ಮಾಡಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಹುನ್ನಾರ ನಡೆಸುತ್ತಿವೆ. ಆ ಎರಡೂ ಪಕ್ಷಗಳಲ್ಲಿ ಕೇಂದ್ರ ಸಚಿವರಾದ ಕುಮಾರಸ್ವಾಮಿ, ಪ್ರಹ್ಲಾದ್‌ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಅವರೇ ನಿರ್ದೇಶಕ ಮತ್ತು ನಿರ್ಮಾಪಕರಾಗಿದ್ದಾರೆ. ಇದರಲ್ಲಿ ಸ್ನೇಹಮಯಿ ಕೃಷ್ಣ ಮಾತ್ರ ಕೃಷ್ಣನ ಪಾತ್ರಧಾರಿಯಷ್ಟೇ ಎಂದು ವಾಗ್ದಾಳಿ ನಡೆಸಿದರು.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಹಣದ ಅವ್ಯವಹಾರ ನಡೆಸಿಲ್ಲವಾದರೂ ಹಣದ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ. ಈಗಾಗಲೇ ದೂರುದಾರಿಂದ ಅರ್ಜಿ ಸ್ವೀಕಾರಿಸಿದ ಹೈಕೋರ್ಟ್‌ ಪ್ರಾಸಿಕ್ಯಷನ್‌ಗೆ ಅನುಮತಿ ನೀಡಿದೆ. ಅಲ್ಲದೇ ಜನಪ್ರತಿನಿಧಿಗಳ ನ್ಯಾಯಾಲಯ ಮೈಸೂರು ಲೋಕಾಯುಕ್ತಕ್ಕೆ ಎಫ್‌ಐಆರ್‌ ದಾಖಲಿಸಿ ಅರ್ಜಿ ವಿಚಾರಣೆ ನಡೆಸುತ್ತಿದೆ. ಈ ಮಧ್ಯೆಯೇ ಇ.ಡಿ.ಪ್ರವೇಶಿಸಿರುವ ಸಂದರ್ಭವನ್ನು ಸಾರ್ವಜನಿಕರು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.

ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್‌ ನಾಯಕರು ರಾಜೀನಾಮೆ ಕೋರಿ ಸಿದ್ದರಾಮಯ್ಯ ಅವರ ಹಿಂದೆ ಬಿದ್ದಿದ್ದಾರೆ. ಇದರಿಂದ ಮನನೊಂದ ಸಿದ್ದರಾಮಯ್ಯ ಅವರ ಪತ್ನಿ ಸ್ವಂತ ನಿವೇಶನವನ್ನು ಮುಡಾ ಸ್ವಾಧೀನಪಡಿಸಿಕೊಂಡಿದ್ದ ಬಳಿಕ ಅವರಿಗೆ ಪರಿಹಾರವಾಗಿ 50:50 ಅನುಪಾತದ ಮೂಲಕ ನೀಡಿದ್ದ 14 ಬದಲಿ ನಿವೇಶನಗಳನ್ನು ಮುಡಾಕ್ಕೆ ವಾಪಾಸ್‌ ಮಾಡಿದ್ದಾರೆ. ಅಲ್ಲದೇ ನಿವೇಶನ ಕಳೆದುಕೊಂಡಿದ್ದಕ್ಕೆ ಪರಿಹಾರವಾಗಿ ನ್ಯಾಯಾಲಯದಲ್ಲಿ ಹೋರಾಟ ಮಾಡಲಿದ್ದಾರೆ. ಆದರೆ ಇದೀಗ 50:50 ಅನುಪಾತದಲ್ಲಿ ನಿವೇಶನ ಪಡೆದಿರುವ ಎಲ್ಲರಿಂದಲೂ ನಿವೇಶನಗಳನ್ನು ಹಿಂತಿರುಗಿಸುವ ಕೆಲಸವನ್ನು ಬಿಜೆಪಿ ಮತ್ತು ಜೆಡಿಎಸ್‌ ನಾಯಕರೇ ಮಾಡಬೇಕು.

ಮುಡಾ ಹಗರಣದ ಆಪಾದನೆಯಲ್ಲಿ ತೊಡಗಿದ್ದ ಶಾಸಕ ಟಿ.ಎಸ್‌.ಶ್ರೀವತ್ಸ ಹಾಗೂ ಬಿಜೆಪಿ ಹಿಂದುಳದ ವರ್ಗಗಳ ಮೊರ್ಚಾದ ಅಧ್ಯಕ್ಷ ರಘು ಕೌಟಿಲ್ಯ ಅವರೇ ಅನುಭವಿಗಳಿಂದ ನಿವೇಶನಗಳನ್ನು ಹಿಂತಿರುಗಿಸುವಂತೆ ಹೋರಾಟ ಮಾಡಲಿ. ಇಲ್ಲವಾದರೆ ಅವರ ಮನೆ ಮುಂದೆ ಧರಣಿ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್‌ ಪಕ್ಷದಲ್ಲಿ ಒಗ್ಗಟ್ಟು ಇದೆ. ಶಾಸಕ ಮತ್ತು ಸಚಿವರೆಲ್ಲರೂ ಅವರೊಂದಿಗೆ ಇದ್ದೇವೆ. ಕೇಂದ್ರದಲ್ಲಿ ರಾಜೀನಾಮೆ ವಿಚಾರಕ್ಕೆ ಬಂದರೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಪ್ರಹ್ಲಾದ್‌ ಜೋಶಿ ಹಾಗೂ ಎಚ್‌.ಡಿ.ಕುಮಾರಸ್ವಾಮಿ ಅವರನ್ನೊಳಗೊಂಡಂತೆ 27 ಕೇಂದ್ರ ಸಚಿವರ ವಿರುದ್ಧ ಕ್ರಿಮಿನಲ್‌ ಪ್ರಕರಣಗಳು ದಾಖಲಾಗಿವೆ. ಈ ಬಗ್ಗೆ ಅವರೇಕೆ ರಾಜೀನಾಮೆ ಕೇಳುತ್ತಿಲ್ಲ ಎಂದು ಪ್ರಶ್ನಿಸಿದರು.
ಕೆಪಿಸಿಸಿ ಸದಸ್ಯ ಭಾಸ್ಕರ್‌, ಕಾಂಗ್ರೆಸ್‌ಮ ನಗರ ಜಿಲ್ಲಾ ಸಮಿತಿ ಪ್ರಧಾನ ಕಾರ್ಯದರ್ಶಿ ಎಂ.ಶಿವಣ್ಣ, ಗೀರೀಶ್‌ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ಎಂ.ರಾಮು, ಮಹೇಶ್‌ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಸಾರ್ಥಕ ಬದುಕಿನ ಸಾಧಕ!

ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…

21 hours ago

ಓದುಗರ ಪತ್ರ: ಕಲಬೆರಕೆ ಮಾಫಿಯಾ: ಕ್ರಮ ಅಗತ್ಯ

ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…

21 hours ago

ಓದುಗರ ಪತ್ರ: ಉದ್ಯಾನವನಗಳಲ್ಲಿ ಸಂಗೀತ ವಾದ್ಯ ಜೋಡಣೆ: ಪಾಲಿಕೆ ಕ್ರಮ ಅಭಿನಂದನಾರ್ಹ

ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…

21 hours ago

ಮೀಸಲಾತಿ ವಿರೋಧಿ ದನಿಗೆ ಮೋದಿ ಮಣಿಯುವರೇ?

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…

21 hours ago

ಕುಕ್ಕರಿನ ಸೀಟಿ ಕೂಗಲು ಶುರುವಾಗಿದೆ!

ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…

21 hours ago

ಕೆಲವಷ್ಟು ಭರವಸೆಗಳು ಮತ್ತು ಹಲವಷ್ಟು ಆತಂಕಗಳು

ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…

21 hours ago